ಹಳ್ಳಿ ವಾಪ್ಸಿ ಸಿಕ್ಸ್ತ್ ಸೆನ್ಸ್‌ ಸೀನನ ಗ್ರಾಮಾಯಣ


Team Udayavani, Sep 14, 2018, 6:00 AM IST

gramayana-kannada-movie.jpg

ವಿನಯ್‌ ರಾಜಕುಮಾರ್‌ ಅಭಿನಯದ ಮುಂದಿನ ಚಿತ್ರ ಯಾವುದು ಎಂಬ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದೆ. ಅದಾಗಬಹುದು, ಇದಾಗಬಹುದು ಎಂಬ ಗೊಂದಲದ ನಂತರ, ವಿನಯ್‌ ಈಗ “ಗ್ರಾಮಾಯಣ’ ಎಂಬ ಚಿತ್ರವನ್ನು ಒಪ್ಪಿಕೊಂಡಿದ್ದು, ಸದ್ಯದಲ್ಲೇ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದೆ. ಅದಕ್ಕೂ ಮುನ್ನ ಚಿತ್ರದ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದ್ದು, ಶಿವರಾಜಕುಮಾರ್‌, ರಾಘವೇಂದ್ರ ರಾಜಕುಮಾರ್‌, ಪುನೀತ್‌ ರಾಜಕುಮಾರ್‌, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ. ಚಿನ್ನೇಗೌಡ ಸೇರಿದಂತೆ ಹಲವರು ಈ ಟೀಸರ್‌ ಬಿಡುಗಡೆಗೆ ಸಾಕ್ಷಿಯಾದರು.

“ಗ್ರಾಮಾಯಣ’ ಎಂಬ ಹೆಸರೇ ಹೇಳುವಂತೆ, ಇದೊಂದು ಗ್ರಾಮೀಣ ಚಿತ್ರ. ಎಸ್‌.ಎಲ್‌.ಎನ್‌. ಮೂರ್ತಿ ಎನ್ನುವವರು ಈ ಚಿತ್ರವನ್ನು ನಿರ್ಮಿಸಿದರೆ, ದೇವನೂರು ಚಂದ್ರು ಎನ್ನುವವರು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರ ಪ್ರಾರಂಭವಾಗಿದ್ದರ ಕುರಿತು ಮಾತನಾಡಿದ ಅವರು, “ನಿರ್ಮಾಪಕ ಮೂರ್ತಿ ಅವರಿಗೆ ನಾಲ್ಕು ಬಾರಿ ಕಥೆ ಹೇಳಿದೆ. ಕಥೆ ಹೇಳಿ ಸುಸ್ತಾಯಿತು. ಬೇಸರವಾಗಿ ಊರಿಗೆ ಹೋಗಿದ್ದೆ. ಒಂದು ದಿನ ರಾಘಣ್ಣ ಫೋನ್‌ ಮಾಡಿದ್ದರು. ಊಟಕ್ಕೆ ಬನ್ನಿ ಅಂತ ಕರೆದರು. ಅವರ ಮನೆಗೆ ಹೋದೆ. ಅವರಿಗೆ ಕಥೆ ಇಷ್ಟವಾಗಿ, ಚಿತ್ರ ಮಾಡಿ ಅಂತ ಹೇಳಿದರು. ನಿರ್ಮಾಪಕರು ಒಪ್ಪಿ ಚಿತ್ರ ಪ್ರಾರಂಭವಾಗಿ, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ’ ಎಂದು ಹೇಳಿದರು.

ವಿನಯ್‌ ರಾಜಕುಮಾರ್‌ ಈ ಚಿತ್ರದಲ್ಲಿ ಸಿಕ್ಸ್ತ್ ಸೆನ್ಸ್‌ ಸೀನ ಎಂಬ ಪಾತ್ರ ಮಾಡುತ್ತಿದ್ದಾರಂತೆ. “ಇತ್ತೀಚೆಗೆ ಟೀಸರ್‌ ಚಿತ್ರೀಕರಣವಾಯ್ತು. ಗಾಜನೂರಿನ ತಾತ ಹುಟ್ಟಿದ ಮನೆಯಲ್ಲಿ ಚಿತ್ರೀಕರಣ ನಡೆಯಿತು. ತುಂಬಾ ಭಯ ಇತ್ತು. ಶೂಟಿಂಗ್‌ ಬಹಳ ಚೆನ್ನಾಗಿ ನಡೀತು. ಟೀಸರ್‌ ನೋಡಿದರೆ, ಕಥೆ ಏನಿರಬಹುದು ಎಂದು ಗೊತ್ತಾಗುತ್ತದೆ. ಸುಮಾರು ಎಂಟು ತಿಂಗಳ ಹಿಂದೆ ಚಂದ್ರು ಕಥೆ ಹೇಳಿದ್ದರು. ಕಥೆ ಸಾಕಷ್ಟು ಕಾಡಿತು. ಈ ಚಿತ್ರವು ಎಲ್ಲರಿಗೂ ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ’ ಎಂದು ವಿನಯ್‌ ಹೇಳಿದರು.

ನಂತರ ಮಾತನಾಡಿದ ರಾಘ ವೇಂದ್ರ ರಾಜಕುಮಾರ್‌, “ನಿರ್ದೇಶಕ ಚಂದ್ರು ಕಥೆ ಹೇಳುತ್ತಿದ್ದಂತೆ, ಅಪ್ಪಾಜಿ ಹೇಳಿದ ಮಾತೊಂದು ನೆನಪಾಯಿತು. ಒಮ್ಮೆ ಅವರು ಊರಿಗೆ ಕರೆದುಕೊಂಡು ಹೋಗೋದಕ್ಕೆ ಹೇಳಿದರು.
ಕಾರಣಾಂತರಗಳಿಂದ ಆಗಲಿಲ್ಲ. ಆಗ ನೀವು ಊರನ್ನು ಮಿಸ್‌ ಮಾಡ್ಕೊàತಿದ್ದೀರಾ ಅಂತ ಕೇಳಿದೆ. ಅದಕ್ಕವರು, “ನಾನು ಊರನ್ನು ಮಿಸ್‌ ಮಾಡಿಕೊಳ್ಳುತ್ತಿಲ್ಲ, ಊರು ನನ್ನನ್ನ ಮಿಸ್‌ ಮಾಡಿಕೊಳ್ಳುತ್ತಿದೆ’ ಎಂದರು. ನಿರ್ದೇಶಕರು ಕಥೆ ಹೇಳಿದಾಗ, ಈ ನೆನಪು ಕಾಡಿತು. ಈ ಸಿನಿಮಾ ಒಪ್ಪಿಕೊಂಡ ನಂತರ ನನ್ನ ಮಗ ಊರಿಗೆ ಹೋಗಿ ಬರಿ¤àನಿ ಅಂತ ಹೋದ. ಈ ಕಥೆ ಚೆನ್ನಾಗಿದೆ. ಆ ಕಥೆಯೇ ಸಿನಿಮಾ ಮಾಡಿಸಿಕೊಳ್ಳುತ್ತೆ’ ಎಂದು ಹೇಳಿದರು.

ವಿನಯ್‌ಗೆ ನಾಯಕಿಯಾಗಿ ಅಮೃತಾ ಅಯ್ಯರ್‌ ಇದ್ದಾರೆ. ಇನ್ನು ಅಪರ್ಣ, ಸೀತಾ ಕೋಟೆ, ಸಂಪತ್‌ ಕುಮಾರ್‌ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಎಲ್ಲರೂ ಚಿತ್ರದಲ್ಲಿ ನಟಿಸುತ್ತಿರುವ ಬಗ್ಗೆ ಖುಷಿ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.