ಜಿಗಿತ, ಕುಸಿತಕ್ಕೆ ಪರಿಹಾರ?
Team Udayavani, Sep 13, 2018, 10:30 AM IST
ಹೊಸದಿಲ್ಲಿ, /ಮುಂಬಯಿ : ಕೈಮೀರಿದ ತೈಲೋತ್ಪನ್ನಗಳ ದರ ಏರಿಕೆ, ಡಾಲರ್ ವಿರುದ್ಧ ರೂಪಾಯಿ ಕುಸಿತ ಸೇರಿದಂತೆ ಅರ್ಥ ವ್ಯವಸ್ಥೆಯ ಪ್ರಮುಖ ವಿಚಾರಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶನಿವಾರ ಸಭೆ ನಡೆಯಲಿದೆ. ಸಭೆಯಲ್ಲಿ, ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ,ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್, ಪಿಎಂಇಎಸಿ ಮುಖ್ಯಸ್ಥ ಬಿಬೇಕ್ ದೇಬ್ರಾಯ್ ಹಾಗೂ ಹಣಕಾಸು ಇಲಾಖೆಯ ಕಾರ್ಯದರ್ಶಿ ಹಸ್ಮುಖ್ ಆದಿಯಾ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಹಾಲಿ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
ಷೇರು ಪೇಟೆ ಚೇತರಿಕೆ: ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಕುಸಿತ ಕಂಡಿದ್ದ ಬಾಂಬೆ ಷೇರು ಪೇಟೆ ಬುಧವಾರ ಚೇತರಿಕೆ ಕಂಡಿದೆ. ಬುಧವಾರ ವಹಿವಾಟು ಮುಕ್ತಾಯದ ವೇಳೆಗೆ ಸೂಚ್ಯಂಕ 305ರಷ್ಟು ಏರಿಕೆಯಾಗಿದೆ. ವ್ಯವಹಾರ ಆರಂಭವಾದಾಗ ಸುಸ್ಥಿತಿಯಲ್ಲೇ ಇದ್ದ ಬಿಎಸ್ಇ ಸೆನ್ಸೆಕ್ಸ್ ಸೂಚ್ಯಂಕ, ಮಧ್ಯಾಹ್ನದ ನಂತರ 37,546.42ಕ್ಕೆ ಬಂದು ನಿಂತು ಒಟ್ಟಾರೆ 304.83 ಅಂಕಗಳಷ್ಟು ಏರಿಕೆ ಕಂಡಿತ್ತು. ಅತ್ತ, ಎನ್ಎಸ್ಇ ನಿಫ್ಟಿ ಕೂಡ ಗರಿಷ್ಠ 11,340.10ಏರಿಕೆ ದಾಖಲಿಸಿ, ಮಧ್ಯಾಹ್ನದ ನಂತರ 82.40 ಅಂಕಗಳಿಗೆ ಬಂದಿತ್ತು.
ರೂಪಾಯಿ ಚೇತರಿಕೆ: ಮತ್ತೂಂದು ಮಹತ್ವದ ಬೆಳವಣಿಗೆಯಲ್ಲಿ ಅಮೆರಿಕದ ಡಾಲರ್ ವಿರುದ್ಧ ಸತತ ಇಳಿತ ಕಂಡಿದ್ದ ರೂಪಾಯಿ ಮೌಲ್ಯ ಕೊಂಚ ಏರಿಕೆಯಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ ಬಳಿಕ ಈ ಬೆಳವಣಿಗೆಯಾಗಿದೆ. ದಿನದ ವಹಿವಾಟು ಆರಂಭದಲ್ಲಿ ಡಾಲರ್ ಎದುರು 72.91ಕ್ಕೆ ಇಳಿಕೆಯಾಗಿದ್ದದ್ದು ಸಂಜೆಯ ವೇಳೆಗೆ 72.18 ರೂ.ಗೆ ಚೇತರಿಸಿಕೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್