ಸಂಸದರನ್ನಾಗಿ ಮಾಡಿದ್ದೇ ತಪ್ಪಾಯ್ತು! ಪ್ರತಾಪ್ ಸಿಂಹಗೆ ತರಾಟೆ
Team Udayavani, Sep 13, 2018, 6:01 PM IST
ಮಡಿಕೇರಿ: ನಿಮ್ಮಂತಹವರಿಂದಾಗಿ ಪಕ್ಷ ಉದ್ಧಾರವಾಗಿಲ್ಲ. ಜನಪರ ಕೆಲಸ ಮಾಡಿ. ಕೇಂದ್ರದ ತಂಡಕ್ಕೆ ಯಾಕೆ ತಪ್ಪು ಮಾಹಿತಿ ನೀಡುತ್ತಿದ್ದೀರಿ..ಇದು ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ಥಳೀಯ ಬಿಜೆಪಿ ಮುಖಂಡರೊಬ್ಬರು ಬಹಿರಂಗವಾಗಿಯೇ ತರಾಟೆಗೆ ತೆಗೆದುಕೊಂಡ ಪರಿ!
ಇತ್ತೀಚೆಗೆ ಪ್ರವಾಹ, ಭೀಕರ ಮಳೆಯಿಂದ ತತ್ತರಿಸಿ ಹೋಗಿದ್ದ ಕೊಡಗು ಜಿಲ್ಲೆಯ ಪರಿಸ್ಥಿತಿ ಪರಿಶೀಲಿಸಲು ಬಂದ ಕೇಂದ್ರದ ತಂಡಕ್ಕೆ ತಪ್ಪು ಮಾಹಿತಿ ನೀಡಿರುವುದಕ್ಕೆ ಸ್ಥಳೀಯ ಬಿಜೆಪಿ ಮುಖಂಡ ಎಂಬಿ ದೇವಯ್ಯ ನೇರವಾಗಿಯೇ ಆಕ್ರೋಶ ವ್ಯಕ್ತಪಡಿಸಿದ್ದರು.
ಕೇಂದ್ರದ ಪರಿಶೀಲನೆ ತಂಡದ ಜೊತೆ ಪ್ರತಾಪ್ ಸಿಂಹ ಮಡಿಕೇರಿಯ ಹೆಬ್ಬೆಟ್ಟಗೇರಿ ಗ್ರಾಮಕ್ಕೆ ಬಂದಿದ್ದು, ಈ ವೇಳೆ ತಂಡಕ್ಕೆ ಭೂ ಪರಿವರ್ತನೆ ಬಗ್ಗೆ ತಪ್ಪು ಮಾಹಿತಿ ನೀಡಿದ್ದಕ್ಕೆ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ನಿಮ್ಮನ್ನು ಆರಿಸಿ ಕಳುಹಿಸಿದ್ದೇ ನಮ್ಮ ತಪ್ಪು. ನಿಮ್ಮಂಥವರಿಂದಾಗಿ ಪಕ್ಷ ಉದ್ಧಾರ ಆಗಿಲ್ಲ. ಪಕ್ಷದಲ್ಲಿ ನನ್ನ ವಿರುದ್ಧ ಏನು ಬೇಕಾದ್ರೂ ಕ್ರಮ ಕೈಗೊಳ್ರೀ ಎಂದು ದೇವಯ್ಯ ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ