ಗಾಳಿಯಲ್ಲೂ ಓಡಿ ಗೆದ್ದ ಉಸೇನ್‌ ಬೋಲ್ಟ್!


Team Udayavani, Sep 15, 2018, 6:25 AM IST

usain-bolt-wins.jpg

ಕಿಂಗ್‌ಸ್ಟನ್‌ (ಜಮೈಕಾ): ಉಸೇನ್‌ ಬೋಲ್ಟ್ ವಿಶ್ವ ವೇಗದ ಓಟಗಳ ಸರದಾರ. ಸಿಂಥೆಟಿಕ್‌ ಟ್ರ್ಯಾಕ್‌ಗಳಲ್ಲಿ ಚಿನ್ನದ ಹೆಜ್ಜೆ ಇಟ್ಟ ವೀರ. ಒಲಿಂಪಿಕ್ಸ್‌ ಇರಲಿ ಅಥವಾ ವಿಶ್ವ ಚಾಂಪಿಯನ್‌ಶಿಪ್‌ ಇರಲಿ, ಬೋಲ್ಟ್ ಅಂದರೆ ಜಿಂಕೆ. ಬೋಲ್ಟ್ ಅಂದರೆ ಚಿನ್ನ. ಈ ವಿಶ್ವ ಪರಾಕ್ರಮಿ ನಿವೃತ್ತಿಯ ಬಳಿಕವೂ ನಿರಂತರ ಸುದ್ದಿಯಾಗುತ್ತಲೇ ಇದ್ದಾರೆ.

ಇತ್ತೀಚಿಗೆ ಫ‌ುಟ್‌ಬಾಲ್‌ ಕ್ಲಬ್‌ ಪರ ಆಡಿ ಅಭಿಮಾನಿಗಳಿಗೆ ಅಚ್ಚರಿ ನೀಡಿದ್ದ ಬೋಲ್ಟ್ ಇದೀಗ ಹೊಸ ಕಸರತ್ತು ಮಾಡಿದ್ದಾರೆ. ಶೂನ್ಯ ಗುರುತ್ವಾಕರ್ಷಣೆಯಲ್ಲಿ “ಓಡಿ “(ತೇಲಾಡಿ) ಗೆದ್ದಿದ್ದಾರೆ!

ಶೂನ್ಯ ಗುರುತ್ವಾಕರ್ಷಣೆಯನ್ನು ಸೃಷ್ಟಿಸಲಾಗಿದ್ದ ಫ್ರಾನ್ಸ್‌ ವಿಮಾನದೊಳಗೆ ಬೋಲ್ಟ್ ಮೂವರೊಂದಿಗೆ ಓಡಿದ್ದಾರೆ; ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಓಟದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಬೋಲ್ಟ್ ಸಾಧನೆಗೆ ಅಭಿಮಾನಿಗಳಿಂದ ಶ್ಲಾಘನೆಯೂ ವ್ಯಕ್ತವಾಗಿದೆ.

ವಿಮಾನದೊಳಗೆ ಸಾಹಸ
ಫ್ರಾನ್ಸ್‌ನ ಮಧ್ಯ ತಯಾರಕ ಕಂಪೆನಿಯೊಂದು ಉಸೇನ್‌ ಬೋಲ್ಟ್ಗೆ ಶೂನ್ಯ ಗುರುತ್ವಾಕರ್ಷಣೆಯಲ್ಲಿ ಓಡುವ ಸವಾಲನ್ನು ಒಡ್ಡಿತ್ತು. ಭವಿಷ್ಯದ ಬಾಹ್ಯಾಕಾಶ ಪ್ರವಾಸೋದ್ಯಮ ಅಭಿವೃದ್ದಿ ಪಡಿಸುವುದು, ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಇಂಥದೊಂದು ಶೂನ್ಯ ಗುರುತ್ವಾಕರ್ಷಣೆಯನ್ನೂ ವಿಮಾನದೊಳಗೆ ಸೃಷ್ಟಿಸಲಾಗಿತ್ತು. ಬೋಲ್ಟ್ ಸಂಸ್ಥೆಯ ವಿಶೇಷ ಆಹ್ವಾನದ ಮೇರೆಗೆ “ಫ್ರಾನ್ಸ್‌ ಏರ್‌ಬಸ್‌ ಎ310′ ವಿಮಾನ ಏರಿದ್ದರು. ಇದನ್ನು ಸವಾಲಾಗಿ ಸ್ವೀಕರಿಸಿದ ಉಸೇನ್‌ ಬೋಲ್ಟ್ ಓಡಿದರು.

“ಮೂವರೊಂದಿಗೆ ಓಡುವ ಸವಾಲು ಪಡೆದಿದ್ದ ನಾನು ಆರಂಭದಲ್ಲಿ ಸ್ವಲ್ಪ ಆತಂಕಕ್ಕೆ ಒಳಗಾಗಿದ್ದೆ. ಅನಂತರ ಪ್ರಯತ್ನಿಸಿದೆ. ಓ…ದೇವರೆ ಏನಾಗುತ್ತಿದೆ ಎಂದು ನನಗೆ ನಾನೇ ಪ್ರಶ್ನಿಸಿಕೊಂಡಿದ್ದೆ. ಬಳಿಕ ಗಾಳಿಯಲ್ಲಿ ತೇಲಾಡಿಕೊಂಡು ಓಡಿದ ಕ್ಷಣ ವಾವ್‌ ಎನಿಸಿತು’ ಎಂದು ಬೋಲ್ಟ್ ಟ್ವೀಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ವೃತ್ತಿಪರ ಫ‌ುಟ್ಬಾಲಿಗ ಬೋಲ್ಟ್
ಆ್ಯತ್ಲೀಟ್‌ ಆಗಿದ್ದ ಉಸೇನ್‌ ಬೋಲ್ಟ್ ಈಗ ವೃತ್ತಿಪರ ಫ‌ುಟ್ಬಾಲಿಗರಾಗಿ ಬದಲಾಗಿದ್ದಾರೆ.  ಟ್ರ್ಯಾಕ್‌ ಸ್ಪರ್ಧೆಗೆ ವಿದಾಯ ಹೇಳಿದ ಬಳಿಕ ಅವರು ಆಸ್ಟ್ರೇಲಿಯದ ಸೆಂಟ್ರಲ್‌ ಕೋಸ್ಟ್‌ ಮ್ಯಾರಿನರ್ಸ್‌ ತಂಡದ ಜತೆ ಅಭ್ಯಾಸ ನಡೆಸುತ್ತಿದ್ದಾರೆ. ಇದಕ್ಕೂ ಮೊದಲು ಜರ್ಮನಿಯ ಕ್ಲಬ್‌ ತಂಡದಲ್ಲಿ ತರಬೇತಿ ಪಡೆದಿದ್ದರು.

ಟಾಪ್ ನ್ಯೂಸ್

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.