ಗಣೇಶ ಚತುರ್ಥಿ ಹಬ್ಬಕ್ಕೆ ಸಂಭ್ರಮದ ಚಾಲನೆ


Team Udayavani, Sep 15, 2018, 12:49 PM IST

vij-1.jpg

ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಗುರುವಾರ ಗಣೇಶ ಚತುರ್ಥಿ ಹಬ್ಬಕ್ಕೆ ಸಡಗರ ಸಂಭ್ರಮದ ಚಾಲನೆ ದೊರೆಯಿತು. ಬೆಳಗ್ಗೆ ಮಕ್ಕಳೊಂದಿಗೆ ಮಾರುಕಟ್ಟೆಗೆ ತೆರಳಿದ ಜನರು ನಾಲ್ಕೈದು ಕಡೆ ಚೌಕಾಸಿ ಮಾಡಿ ವಿವಿಧ ಭಂಗಿ ಗಣೇಶ ಮೂರ್ತಿಗಳನ್ನು ಖರೀದಿಸಿದರು. ಮೂರ್ತಿ ಪ್ರತಿಷ್ಠಾಪನೆಗೆ ಅಗತ್ಯವಿರುವ ಅಲಂಕಾರಿಕ ವಸ್ತುಗಳು, ವಿವಿಧ ಹಣ್ಣು, ಹೂ ಸೇರಿದಂತೆ ಪಟಾಕಿ ಖರೀದಿ ಜೋರಾಗಿತ್ತು. ಬಸವೇಶ್ವರ ವೃತ್ತದ ಸುತ್ತಲಿನ ಮಾರುಕಟ್ಟೆ ಪ್ರದೇಶ ಜನ ಜಂಗುಳಿಯಿಂದ ಕೂಡಿತ್ತು.

ಇಲ್ಲಿನ ಪುರಸಭೆ ಆಡಳಿತ ಪಿಒಪಿ ಗಣಪತಿ ಮೂರ್ತಿಗಳನ್ನು ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು. ಕಡ್ಡಾಯವಾಗಿ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಮಾರಾಟ ಮಾಡಬೇಕು ಎಂದು ಮೂರ್ತಿ ತಯಾರಕರ ಸಭೆಯಲ್ಲಿ ಹೇಳಿದ್ದರಿಂದ ಹೆಚ್ಚಿನ ಪರಿಣಾಮ ಬೀರಿತ್ತು.

ಮಾರುಕಟ್ಟೆಯಲ್ಲಿ ಮಣ್ಣಿನಿಂದ ತಯಾರಿಸಿದ್ದ ಪರಿಸರ ಸ್ನೇಹಿ ಗಣಪತಿ ಖರೀದಿ ಬಲು ಜೋರಾಗಿತ್ತು. ಬಣ್ಣ ರಹಿತವಾದ ಮಣ್ಣಿನ ಗಣೇಶ ಮೂರ್ತಿಗಳು ಬಂದಿದ್ದು ವಿಶೇಷವಾಗಿತ್ತು. ಕೆಲವರು ಬಣ್ಣ ಹಚ್ಚದ ಮಣ್ಣಿನ ಗಣೇಶ ಮೂರ್ತಿ ಖರೀಸಿದರು.
 
ಆಕಾರಕ್ಕೆ ತಕ್ಕಂತೆ ಗಣೇಶ ಮೂರ್ತಿಗಳು ಮನೆಯಲ್ಲಿ ಪ್ರತಿಷ್ಠಾಪಿಸಲು 150ರಿಂದ 800 ರೂ.ವರೆಗೆ ಮಾರಾಟವಾದವು. ಸಾರ್ವಜನಿಕ ಸ್ಥಳದಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳು 2 ಸಾವಿರದಿಂದ 10 ಸಾವಿರ
ರೂ.ವರೆಗೆ ಮಾರಾಟವಾದವು. ಹೂವು, ಹಣ್ಣುಗಳ ದರ ಒಂದಷ್ಟು ಹೆಚ್ಚಿನಿಸದರೂ ಚೌಕಾಸಿ ಮಾಡಿ ಖರೀದಿಸಿದರು.

ಕುಟುಂಬ ಸದಸ್ಯರೊಂದಿಗೆ ತೆರಳಿದ ಜನರು ಗಣೇಶ ಮೂರ್ತಿಯನ್ನು ಖರೀದಿಸಿ ಜಯಘೋಷಣೆಯೊಂದಿಗೆ
ಮನೆಗೆ ತೆಗೆದುಕೊಂಡು ಹೋಗಿ ಅಲಂಕಾರಿಕ ಮಂಟಪದಲ್ಲಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದರು. ವಿವಿಧ ಶಾಲೆಗಳ ಮಕ್ಕಳು ಮೆರವಣಿಗೆ ಮೂಲಕ ಗಣೇಶ ಮೂರ್ತಿಯನ್ನು ತಂದು ಶಾಲೆಯಲ್ಲಿ ಪ್ರತಿಷ್ಠಾಪಿಸಿ ಸಂಭ್ರಮಿಸಿದರು. ಕೆಲ ಶಾಲೆಗಳಲ್ಲಿ ಸಂಜೆ ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ರಮ ನಡೆಯಿತು. 

ಪಟ್ಟಣದ ಬಸವ ತತ್ವ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ಸಂಜೆ ವಿಶೇಷ ಪೂಜೆ
ಸಲ್ಲಿಸಿದ ನಂತರ ಬುಟ್ಟಿಯಲ್ಲಿ ವಿಸರ್ಜನೆ ಮಾಡಿದರು. ಮೂರ್ತಿ ನೀರಿನಲ್ಲಿ ಕರಗಿದ ನಂತರ ನೆಟ್ಟ ಸಸಿಗೆ ನೀರುಣಿಸಿ ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದರು.

ಪಟ್ಟಣದ ಬಸ್‌ ನಿಲ್ದಾಣ ಮುಂಭಾಗ, ರಾಣಿ ಚನ್ನಮ್ಮ ವೃತ್ತ, ಅಗಸಿ ಒಳಗಡೆ, ಬಸವಜನ್ಮ ಸ್ಮಾರಕ ಮುಂಭಾಗ, ಪಡಶೆಟ್ಟಿ ಗಲ್ಲಿ, ಓಂ ನಗರ, ಗಣೇಶ ಗನರ, ವೀರಭದ್ರೇಶ್ವರ ನಗರ ಸೇರಿದಂತೆ ವಿವಿಧ ಬಡಾಚಣೆಯಲ್ಲಿ ಅಲಂಕೃತ ಮಂಟಪದಲ್ಲಿ ಗಣೇಶ ಮೂರ್ತಿಗೆ ಪೂಜೆ ಸಲ್ಲಿಸಿ ಪ್ರತಿಷ್ಠಾಪಿಸಲಾಯಿತು.

ಟಾಪ್ ನ್ಯೂಸ್

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.