ಸೂಳೆಕೆರೆ ಸಂರಕ್ಷಣೆಗೆ ಸರ್ವೇ; ನಾಳೆ ಜಿಲ್ಲಾಧಿಕಾರಿ ಭೇಟಿ


Team Udayavani, Sep 15, 2018, 3:39 PM IST

yad-4.jpg

ದಾವಣಗೆರೆ: ಇತಿಹಾಸ ಪ್ರಸಿದ್ಧ ಸೂಳೆಕೆರೆ (ಶಾಂತಿಸಾಗರ) ಸರ್ವೇ ಕಾರ್ಯ ಪ್ರಾರಂಭಿಸುವ ಹಿನ್ನೆಲೆಯಲ್ಲಿ ಸೆ. 16 ರಂದು ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಅಲ್ಲಿಗೆ ಭೇಟಿ ನೀಡುವರು ಎಂದು ಖಡ್ಗ ಶಾಂತಿಸಾಗರ (ಸೂಳೆಕೆರೆ) ಸಂರಕ್ಷಣಾ ಮಂಡಳಿ ಅಧ್ಯಕ್ಷರಾದ ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಗುರುಬಸವ ಸ್ವಾಮೀಜಿ ತಿಳಿಸಿದ್ದಾರೆ.

11ನೇ ಶತಮಾನದಲ್ಲಿ ನಿರ್ಮಾಣಗೊಂಡಿರುವ ಐತಿಹಾಸಿಕ ಸೂಳೆಕೆರೆ ಉಳಿಸಬೇಕು. ಒತ್ತುವರಿ ತೆರವುಗೊಳಿಸಬೇಕು
ಮತ್ತು ತುಂಬಿರುವ ಹೂಳು ತೆಗೆಸುವ ಉದ್ದೇಶದಿಂದ ಮಂಡಳಿ ಕೆಲಸ ಮಾಡುತ್ತಿದೆ. ಸೂಳೆಕೆರೆ ಉಳಿಸುವ ಮೊದಲ ಹಂತದಲ್ಲಿ ಕೆರೆಯ ಸರ್ವೇ ಕಾರ್ಯ ನಡೆಯಬೇಕು. ಅದರ ಪೂರ್ವಭಾವಿಯಾಗಿ ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಭಾನುವಾರ ಸೂಳೆಕೆರೆಗೆ ಭೇಟಿ ನೀಡುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಏಷ್ಯಾ ಖಂಡದ 2ನೇ ಅತಿ ದೊಡ್ಡ ಕೆರೆಯಾಗಿರುವ ಸೂಳೆಕೆರೆ 6,650 ಎಕರೆ ವಿಸೀರ್ಣ ಹೊಂದಿದೆ. ಈಗ ಲಭ್ಯ ಇರುವ
ದಾಖಲೆ ಪ್ರಕಾರ ಕೆರೆಯ ವಿಸೀ¤ರ್ಣ 5,550 ಎಕರೆ. ಒಟ್ಟು 1 ಸಾವಿರ ಎಕರೆಯಷ್ಟು ಜಾಗ ಒತ್ತುವರಿ ಆಗಿದೆ. ಒತ್ತುವರಿ ತೆರವು ಮಾಡುವ ಮುನ್ನ ಕೆರೆಯ ವಿಸೀರ್ಣದ ಸರ್ವೇ ನಡೆಯಬೇಕಿದೆ. 

ಸರ್ವೇ ನಡೆದು, ಕೆರೆಯ ಗಡಿಗುಂಟ ಟ್ರೆಂಚ್‌ (ಗುಂಡಿ) ತೋಡುವ ಕಾರ್ಯಕ್ಕೆ ಮೊದಲ ಆದ್ಯತೆ ನೀಡಲಾಗಿದೆ. ಕೆರೆಯ ಮೂಲ ವಿಸ್ತೀರ್ಣ ಗೊತ್ತುಪಡಿಸಿಕೊಳ್ಳಲು ತೀರಾ ಅಗತ್ಯವಾಗಿರುವ ಸರ್ವೇ ಕಾರ್ಯ ಪ್ರಾರಂಭಿಸುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.

ಸೂಳೆಕೆರೆ ನಿರ್ಮಾಣವಾದ ಕಾಲದಿಂದಲೂ ಹೂಳು ತೆಗೆದಿಲ್ಲ. ಹಾಗಾಗಿ 12-13 ಅಡಿ ಆಳ ಹೂಳಿದೆ ಎಂದು ಅಂದಾಜಿಸಲಾಗಿದೆ. ಒಂದೊಮ್ಮೆ ಇಡೀ ಕೆರೆಯಲ್ಲಿನ ಹೂಳು ತೆಗೆಸಿದ್ದಲ್ಲಿ ಕೆರೆಯ ನೀರಿನ ಸಂಗ್ರಹಣಾ ಸಾಮರ್ಥ್ಯ 2 ಟಿಎಂಸಿಯಿಂದ 4.5 ಟಿಎಂಸಿ ಆಗಬಹುದು.

10 ವ್ಹೀಲ್‌ ಇರುವ 100 ಲಾರಿಗಳಲ್ಲಿ ದಿನಕ್ಕೆ 15 ಲೋಡ್‌ ಹೂಳು ಸಾಗಿಸಿದರೆ ಇಡೀ ಕೆರೆಯಲ್ಲಿನ ಹೂಳು ತೆಗೆಯಲಿಕ್ಕೆ 2 ವರ್ಷ ಬೇಕಾಗಬಹುದು ಎಂಬ ಅಂದಾಜಿದೆ. ಹೂಳು ತೆಗೆಯುವ ಮುನ್ನ ಕೆರೆಯ ಮೂಲ ವಿಸ್ತೀರ್ಣ ತಿಳಿಯುವುದು ಅತೀ ಮುಖ್ಯ. ಹಾಗಾಗಿ ಸರ್ವೇ ಕಾರ್ಯ ಪ್ರಾರಂಭಿಸಬೇಕು ಎಂಬ ಮಂಡಳಿ, ಸುತ್ತಮುತ್ತಲಿನ ಗ್ರಾಮಸ್ಥರು, ತಾಲೂಕಿನ
ಜನತೆಯ ಒತ್ತಾಯಕ್ಕೆ ಸರ್ಕಾರಕ್ಕೆ ಪೂರಕವಾಗಿ ಸ್ಪಂದಿಸಿದೆ ಎಂದು ತಿಳಿಸಿದರು. 

ಸೂಳೆಕೆರೆ ಉಳಿಸಿಕೊಳ್ಳುವ ಹಿನ್ನೆಲೆಯಲ್ಲಿ ಚನ್ನಗಿರಿ ಪಟ್ಟಣ ಒಳಗೊಂಡಂತೆ ತಾಲೂಕಿನಾದ್ಯಂತ ಜಾಗೃತಿ ಮೂಡಿಸಲಾಗುತ್ತದೆ. ಹಲವಾರು ಕಡೆ ಜಾಗೃತಿ ಜಾಥಾಗಳು ನಡೆಯುತ್ತಿವೆ. ಸರ್ವೇ ಕಾರ್ಯಕ್ಕೆ 50 ಲಕ್ಷ ಅನುದಾನ ಬೇಕು ಎಂಬುದಾಗಿ ಕರ್ನಾಟಕ ನೀರಾವರಿ ಮಂಡಳಿಯೇ ಅಧಿಕೃತ ಮಾಹಿತಿ ನೀಡಿದೆ. ಸರ್ಕಾರದಿಂದ ಹಣ ಬರುವುದು
ವಿಳಂಬವಾಗಬಹುದು ಎಂಬ ಹಿನ್ನೆಲೆಯಲ್ಲಿ ಹಲವಾರು ಕಡೆ ಜನರು ಸ್ವ ಪ್ರೇರಣೆಯಿಂದ ದೇಣಿಗೆ ನೀಡುತ್ತಿದ್ದಾರೆ. ಸರ್ವೇ ಕಾರ್ಯ ಪ್ರಾರಂಭಿಸಲು ಅಗತ್ಯವಾಗಿರುವ ದೇಣಿಗೆ ಸಂಗ್ರಹಿಸಲು ಬ್ಯಾಂಕ್‌ ಖಾತೆ ಪ್ರಾರಂಭಿಸಲಾಗಿದೆ.

ಆಸಕ್ತರು ಚನ್ನಗಿರಿಯ ಕರ್ನಾಟಕ ಬ್ಯಾಂಕ್‌ ಖಾತೆ 1712500100706701 ಐಊಖಇಓಅRಆ000071
ಮೂಲಕ ಹಣ ನೀಡಬಹುದು ಎಂದು ತಿಳಿಸಿದರು. ಚನ್ನಗಿರಿಯ ಕೇದಾರನಾಥ ಮಠದ ಶ್ರೀ ಕೇದಾರನಾಥ ಶಾಂತವೀತ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸೂಳೆಕೆರೆಯನ್ನ ಉಳಿಸಿಕೊಳ್ಳಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯ. ಅದರಿಂದ ಮುಂದಿನ ಪೀಳಿಗೆಗಳಿಗೆ ಸಾಕಷ್ಟು ಪ್ರಯೋಜನ ಆಗುತ್ತದೆ. ಆ ನಿಟ್ಟಿನಲ್ಲಿ ತಾಲೂಕಿನ ಪ್ರತಿಯೊಬ್ಬರು ಕಾರ್ಯೋನ್ಮುಖರಾಗಿದ್ದಾರೆ ಎಂದು ತಿಳಿಸಿದರು.

ಖಡ್ಗ ಶಾಂತಿಸಾಗರ(ಸೂಳೆಕೆರೆ) ಸಂರಕ್ಷಣಾ ಮಂಡಳಿಯ ಬಿ.ಆರ್‌. ರಘು, ಬಿ. ಚಂದ್ರಹಾಸ್‌, ಕೆ. ಷಣ್ಮುಖಯ್ಯ, ಎಂ.ಬಿ.
ವೀರಭದ್ರಯ್ಯ, ಎಚ್‌.ವಿ. ರವೀಂದ್ರನಾಥ್‌ ಇತರರು ಸುದ್ದಿಗೋಷ್ಠಿಯಲ್ಲಿದ್ದರು.  

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.