ವರದಕ್ಷಿಣೆ: ಸಮಿತಿ ರಚನೆ ಬೇಕಿಲ್ಲ :ಸುಪ್ರೀಂ ಕೋರ್ಟ್
Team Udayavani, Sep 16, 2018, 10:31 AM IST
ಹೊಸದಿಲ್ಲಿ: ವರದಕ್ಷಿಣೆ ಕಿರುಕುಳ ಪ್ರಕರಣಗಳಲ್ಲಿ ಸಂತ್ರಸ್ತೆಯ ಪತಿ, ಹೆತ್ತವರು ಹಾಗೂ ಸಂಬಂಧಿಕರನ್ನು ಬಂಧಿಸುವ ಮುನ್ನ ಸಂತ್ರಸ್ತೆ ನೀಡಿದ ದೂರಿನ ಬಗ್ಗೆ ಪರಿಶೀಲನೆ ನಡೆಸಲು ಜಿಲ್ಲಾ ಮಟ್ಟದ ಕುಟುಂಬ ಕಲ್ಯಾಣ ಸಮಿತಿ ರಚಿಸಬೇಕು ಎಂಬ ತನ್ನದೇ ಆದೇಶವನ್ನು ಸುಪ್ರೀಂ ಕೋರ್ಟ್ ಮಾರ್ಪಾಡು ಮಾಡಿದೆ. ಜತೆಗೆ, ಆರೋಪಿಗಳನ್ನು ಕೂಡಲೇ ಬಂಧಿಸುವುದಕ್ಕೂ ಅವಕಾಶ ಕಲ್ಪಿಸಿದೆ.
ವರದಕ್ಷಿಣೆ ಕಿರುಕುಳ ಕುರಿತು ದೂರು ಬಂದ ಕೂಡಲೇ ಸಂತ್ರಸ್ತೆಯ ಪತಿ ಹಾಗೂ ಸಂಬಂಧಿಕರನ್ನು ಬಂಧಿಸಬಾರದು ಹಾಗೂ ದೂರಿನ ಬಗ್ಗೆ ಪರಿಶೀಲಿಸಲು ಕುಟುಂಬ ಕಲ್ಯಾಣ ಸಮಿತಿಯನ್ನು ಜಿಲ್ಲಾ ಮಟ್ಟದಲ್ಲಿ ರಚಿಸಬೇಕು ಎಂದು 2017ರ ಜುಲೈನಲ್ಲಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ನ್ಯಾಯಾಲಯದ ಈ ಹಿಂದಿನ ಆದೇಶವು ವರದಕ್ಷಿಣೆ ಕಿರುಕುಳ ತಡೆ ಕಾನೂನನ್ನು ದುರ್ಬಲಗೊಳಿಸಿದ್ದು, ಅದನ್ನು ಮಾರ್ಪಾಡು ಮಾಡಬೇಕು ಎಂದು ಕೋರಿ ಸೋಷಿಯಲ್ ಆ್ಯಕ್ಷನ್ ಫೋರಂ ಎಂಬ ಎನ್ಜಿಒ ಹಾಗೂ ಇತರರು ಅರ್ಜಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಅರ್ಜಿಗಳನ್ನು ಪುರಸ್ಕರಿಸಿರುವ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಪೀಠ, ಶುಕ್ರವಾರ ತೀರ್ಪಿನಲ್ಲಿ ಮಾರ್ಪಾಡು ಮಾಡಿದೆ. ದೂರು ಬಂದ ಕೂಡಲೇ ಸಂತ್ರಸ್ತೆಯ ಪತಿ, ಸಂಬಂಧಿಕರ ಬಂಧನಕ್ಕೆ ಇದ್ದ ಅಡ್ಡಿಯನ್ನು ತೆಗೆದುಹಾಕಲಾಗಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸುವ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ, ದೂರು ಪರಿಶೀಲಿಸಲು ಸಮಿತಿಯ ಅಗತ್ಯವಿಲ್ಲ ಎಂದೂ ಹೇಳಿದೆ. ಇದೇ ವೇಳೆ, ಬಂಧಿತರು ಜಾಮೀನಿಗಾಗಿ
ಕೋರ್ಟ್ಗೆ ಅರ್ಜಿ ಸಲ್ಲಿಸಬಹುದು, ಅವರಿಗೆ ಜಾಮೀನು ನೀಡುವುದು ಆಯಾ ಮ್ಯಾಜಿಸ್ಟ್ರೇಟ್ರ ವಿವೇಚನೆಗೆ ಬಿಟ್ಟಿದ್ದು ಎಂದೂ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು