ರಕ್ತದಾನ ಮಾಡಿ ಮತ್ತೂಂದು ಜೀವ ಉಳಿಸಲು ನೆರವಾಗಿ


Team Udayavani, Sep 16, 2018, 2:25 PM IST

yad-1.jpg

ವಿಜಯಪುರ: ವಿಶ್ವವಿಖ್ಯಾತ ಇಂಜಿನೀಯರ್‌ ಸರ್‌ ಎಂ. ವಿಶ್ವೇಶ್ವರಯ್ಯನ ಅವರ ಜಯಂತೋತ್ಸವ ಪ್ರಯುಕ್ತ
ಅಸೋಸಿಯೇಶನ್‌ ಆಫ್‌ ಕನ್ಸಲ್ಟಿಂಗ್‌ ಸಿವ್ಹಿಲ್‌ ಇಂಜಿನಿಯರ್ ಇಂಜಿನಿಯರ್‌ ದಿನಾಚರಣೆ ಸ್ಮರಣಗಾಗಿ ಲಯನ್ಸ್‌
ಕ್ಲಬ್‌ ಸಹಯೋಗದಲ್ಲಿ ರಕ್ತದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅಸೋಸಿಯೇಷನ್‌ ಅಧ್ಯಕ್ಷ ಎಸ್‌.ವಿ. ಸಕ್ರಿ ಮಾತನಾಡಿ, ರಕ್ತದಾನ ಶ್ರೇಷ್ಠದಾನವಾಗಿದೆ. ದೇಶದಲ್ಲಿ 2 ಸೆಕೆಂಡ್‌ಗೆ ರಕ್ತದ ಅವಶ್ಯಕತೆ ಇರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಉತ್ತಮ ಹಾಗೂ ಸಮಾಜಕ್ಕೆ ಒಂದು ಸೇವೆ ನೀಡಿದಂತಾಗುತ್ತದೆ ಎಂದರು. 

ಸರ್‌.ಎಂ. ವಿಶ್ವೇಶ್ವರಯ್ಯ ಜಗತ್ತಿಗೆ ವಿಶಿಷ್ಟ ಕೊಡುಗೆ ನೀಡಿದ ಮೇಧಾವಿ, ಇಂಜನಿಯರ್‌. ಭಾರತದ ವಿವಿಧ ಕಡೆಗಳಲ್ಲಿ ವಿವಿಧ ಭಾಗಗಳಲ್ಲಿ ವಿಶ್ವೇಶ್ವರಯ್ಯ ಅವರ ಕೊಡುಗೆ ಅನನ್ಯ. ಅಭಿಯಂತರಾಗಿ, ಮೈಸೂರು ದಿವಾನರಾಗಿ ಸಲ್ಲಿಸಿದ ಸೇವೆ ಸ್ಮರಣಾರ್ಹ, ಪ್ರತಿಯೊಬ್ಬರು ಅವರಲ್ಲಿದ್ದ ಕರ್ತವ್ಯ ನಿಷ್ಠೆ, ದೇಶಾಭಿಮಾನದ ಗುಣವನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಎಂದರು.

ಲಯನ್ಸ್‌ ಕ್ಲಬ್‌ ಅಧ್ಯಕ್ಷ ಡಾ| ಎ.ಎಸ್‌. ಜಾಲಗೇರಿ, ಡಾ| ಎ.ಎಸ್‌. ತಮಗೊಂಡ, ಡಾ| ವಿವೇಕಾನಂದ ಚಿನಿವಾಲ, ಪ್ರಾದೇಶಿಕ ವಿಭಾಗದ ಅಧ್ಯಕ್ಷೆ ಅನುಜಾ ತಾಳಿಕೋಟೆ, ಎನ್‌.ಬಿ. ಬಿರಾದಾರ, ಫಯಾಜ ಅಲಿ, ಸುಧೀರ ಟಂಕಸಾಲಿ, ಅಶೋಕ ರುಣವಾಲ, ಎಸ್‌.ಎಸ್‌.ಹಿರೇಮಠ, ಎಸ್‌.ಸಿ.ತೇಲಿ, ಎನ್‌.ಡಿ.ಉಸ್ತಾದ, ಎಂ.ಎಸ್‌.ಅಂಗಡಿಮಠ, ಆರ್‌.ಜಿ.ನಾಲಾ, ಪಿ.ಜಿ.ಕಾರಜೋಳ, ಮಹೇಶ ರಾಮಪೂರ, ಎ.ಆರ್‌.ಜಮಖಂಡಿ, ತಾಳಿಕೋಟೆ ದಂಪತಿ, ಫಯಾಜ
ಕುಡಚಿ, ಅಶ್ರಫ್‌ ಕುಡಚಿ, ಆನಂದ ಪಟ್ಟೇದ, ಮಹೇಶ ಅಂಗಡಿ, ಎಸ್‌. ಎಚ್‌.ಜಾಂಬೋರೆ, ಮುಸ್ತಾಕ ಅಖ್ತರ, ಮುಕುಂದ ಕುಲಕರ್ಣಿ, ಎ.ಎಸ್‌. ಮಠ, ಎಸ್‌.ಬಿ. ಜಾಗೀರದಾರ ಇತರರು ಇದ್ದರು.

ಶಾಂತಿ ನಿಕೇತನ ಶಿಕ್ಷಣ ಸಂಸ್ಥೆ: ನಗರದ ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಲ್ಲಿ ಇಂಜಿನಿಯರ್‌ ದಿನ ಆಚರಿಸಲಾಯಿತು.
ಸರ್‌. ಎಂ.ವಿಶ್ವೇಶ್ವರಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿದರು. ನಂತರ ಸರ್‌. ಎಂ.ವಿಶ್ವೇಶ್ವರಯ್ಯ ದೇಶಕ್ಕೆ ಹಲವು ರಂಗಗಳ ಮೂಲಕ ನೀಡರುವ ಕೊಡುಗೆಗಳ ಅನನ್ಯ ಎಂದರು. ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಪ್ರಶಾಂತ ಸಂಖ, ಮಧುಕುಮಾರ ಸಾವಳಗಿ, ಸಾಕ್ಷಿ ಗಲಗಲಿ, ಸ್ನೇಹಾ ಪಾಟೀಲ ಇವರು ವಿಜ್ಞಾನದ ಮಾದರಿಗಳನ್ನು ಪ್ರದರ್ಶಿಸಿದರು.

ಪ್ರಾಚಾರ್ಯ ಚಂದನಗೌಡ ಮಾಲಿಪಾಟೀಲ, ಪ್ರವೀಣಕುಮಾರ ಗೆಣ್ಣೂರ, ಎ.ಎಚ್‌. ಸಗರ, ಭಾರತಿ ಪಾಟೀಲ, ಎಸ್‌.ಆರ್‌. ಕಟ್ಟಿಮನಿ, ಸುಮಿತಾ ಸಕ್ಷೆನಾ, ಎಸ್‌.ಎ. ಹುಗ್ಗಿ, ಗಿರಿಜಾ ಕರಡಿ, ಸರೋಜಾ ಕರ್ಕಳ್ಳಿ, ಸೀಮಾ ಸದಲಗಾ, ಶೋಭಾ ಕೂಡಗಿ, ಮೊಹಸೀನಾ, ವಿವೇಕ ವೈಶಂಪಾಯನ, ದೀಪಾ ತಿಳಗೋಳ, ಮಿನಾಕ್ಷಿ ಹಿಪ್ಪರಗಿ, ಅವಟಿ.ಕೆ, ಕಡೇಮನಿ. ಆರ್‌, ಉಪಸ್ಥಿತರಿದ್ದರು.

 ಅಭಿಯಂತರರು ದೇಶದ ಅಭಿವೃದ್ಧಿಗೆ ಶ್ರಮಿಸಲಿ 
ಆಲಮಟ್ಟಿ:
ಜಾಗತೀಕರಣದ ಪರಿಣಾಮವಾಗಿ ತಂತ್ರಜ್ಞಾನ ಸಾಕಷ್ಟು ಮುಂದುವರಿದಿದ್ದು, ಅದನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು. ನೂತನ ತಂತ್ರಜ್ಞಾನ ಬಳಸಿ ಜನರಿಗೆ ಅತೀ ಕಡಿಮೆ ವೆಚ್ಚದಲ್ಲಿ ಬೃಹತ್‌ ಯೋಜನೆ ಪೂರ್ಣಗೊಳಿಸಲು ಅಭಿಯಂತರುಗಳು ಶ್ರಮಿಸಬೇಕು ಎಂದು ಮುಖ್ಯ ಅಭಿಯಂತರ ಎಸ್‌.ಎಚ್‌. ಮಂಜಪ್ಪ ಹೇಳಿದರು.

ಶನಿವಾರ ಸ್ಥಳೀಯ ಕೃಷ್ಣಾಭಾಗ್ಯಜಲನಿಗಮದ ಮುಖ್ಯ ಅಭಿಯಂತರರ ಕಚೇರಿಯಲ್ಲಿ ನಡೆದ ಇಂಜಿನಿಯರ್ ಡೇ ಹಾಗೂ ಭಾರತರತ್ನ ಡಾ| ಎಂ. ವಿಶ್ವೇಶ್ವರಯ್ಯನವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಭಿಯಂತರುಗಳೆಂದರೆ ಕೇವಲ ರಸ್ತೆ ಹಾಗೂ ಕಟ್ಟಡಗಳನ್ನು ನಿರ್ಮಿಸುವುದು ಮಾತ್ರವಲ್ಲ ದೇಶದ ಅಭಿವೃದ್ಧಿಗೆ ಶ್ರಮಿಸಬೇಕು. ಇತ್ತೀಚಿನ ದಿನಗಳಲ್ಲಿ ಅಭಿಯಂತರರ ಅವಶ್ಯಕತೆ ಹೆಚ್ಚಾಗಿದೆ. ನೀರಾವರಿ ಯೋಜನೆಯಿಂದ ರೈತರ ಜಮೀನುಗಳಿಗೆ ನೀರು ತಲುಪಿಸುವುದು, ನೂತನ ಮಾದರಿಯಲ್ಲಿ ರಸ್ತೆ ನಿರ್ಮಾಣ ಹೀಗೆ ಕಡಿಮೆ ವೆಚ್ಚದಲ್ಲಿ
ಅತ್ಯುಪಯುಕ್ತವಾಗುವ ಯೋಜನೆಗಳನ್ನು ಸಾಕಾರಗೊಳಿಸುವ ಹೊಣೆಗಾರಿಕೆಯೂ ಅಡಗಿದೆ ಎಂದರು. ತಾಂತ್ರಿಕ ಸಹಾಯಕ ವಿ.ಜಿ. ಕುಲಕರ್ಣಿ ಮಾತನಾಡಿ, ಜನತೆ, ರೈತರ, ಸೈನಿಕರ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಿವಿಲ್‌ ಇಂಜಿನಿಯರ್‌ಗಳ ಕಾರ್ಯ ಮಾತ್ರ ಸದಾ ಶ್ಲಾಘನೀಯ ಎಂದರು. ನೌಕರರ ಸಂಘದ ಯೋಜನಾ ಶಾಖೆ ಅಧ್ಯಕ್ಷ ಎಸ್‌.ಬಿ. ದಳವಾಯಿ, ಮುಳವಾಡ ಏತ ನೀರಾವರಿ ಯೋಜನೆ ವೃತ್ತ ಅಧೀಕ್ಷಕ ಅಭಿಯಂತರ ಟಿ. ವೆಂಕಟೇಶ, ಎಂ.ಎನ್‌.ಪದ್ಮಜಾ, ಎಸ್‌.ಬಿ. ಬಿಜಾಪುರ , ವಿ.ಜಿ. ಕುಲಕರ್ಣಿ, ಎಸ್‌.ಎಸ್‌. ಚಲವಾದಿ ಇತರರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.