ಸೋಲು-ಗೆಲುವು ಸಮನಾಗಿ ಸ್ವೀಕರಿಸಿ


Team Udayavani, Sep 16, 2018, 3:42 PM IST

16-sepctember-20.jpg

ತೇರದಾಳ: ಸೋಲು-ಗೆಲುವು ಸಮಾನವಾಗಿ ಸ್ವೀಕರಿಸುವ ಕ್ರೀಡಾಪಟು ಮಾತ್ರ ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದು ಶಾಸಕ ಸಿದ್ದು ಸವದಿ ಹೇಳಿದರು. ಸಿದ್ಧೇಶ್ವರ ವಿದ್ಯಾವರ್ಧಕ ಸಂಘದ ಸ್ವಾಮಿ ವಿವೇಕಾನಂದ ಇಂಟರ್‌ನ್ಯಾಶನಲ್‌ ಪಬ್ಲಿಕ್‌ ಶಾಲೆಯ ಆವರಣದಲ್ಲಿ ಪ್ರಸಕ್ತ ಸಾಲಿನ ಬೆಳಗಾವಿ ವಿಭಾಗ ಮಟ್ಟದ 14-17 ವರ್ಷದೊಳಗಿನ ಪ್ರಾಥಮಿಕ, ಪ್ರೌಢಶಾಲೆಗಳ ಬಾಲಕರ ಹಾಗೂ ಬಾಲಕಿಯರ ಕಬಡ್ಡಿ ಪಂದ್ಯಾವಳಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಆರೋಗ್ಯಪೂರ್ಣ ಸಮಾಜಕ್ಕೆ ಪ್ರತಿಯೊಬ್ಬರೂ ಕ್ರೀಡಾಭಿಮಾನಿಗಳಾಗಿ, ಕ್ರೀಡೆಗಳ ಆಯೋಜನೆಗೆ ಮುಂದಾಗುವ ಮೂಲಕ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸಬೇಕು. ಸಿದ್ಧೇಶ್ವರ ವಿದ್ಯಾವರ್ಧಕ ಸಂಘದವರು ಕ್ರೀಡೆಗಳ ಆಯೋಜನೆಗೆ ಮುಂದಾಗಿರುವುದು ಹೆಮ್ಮೆಯ ವಿಷಯ ಎಂದರು.

ಜಮಖಂಡಿ ತಾಪಂ ಅಧ್ಯಕ್ಷೆ ನಾಗವ್ವ ಕುರಣಿ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಜಿಪಂ ಸದಸ್ಯೆ ಲಲಿತಾ ನಂದೆಪ್ಪನವರ ಪಂದ್ಯಾವಳಿ ಮಾಹಿತಿ ಪುಸ್ತಕ ಬಿಡುಗಡೆ ಮಾಡಿದರು. ಸಿದ್ಧೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಟಿ.ಆರ್‌. ದೇಸ್ತೋಟ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೀಳಾ ಕುಲಕರ್ಣಿ, ಸಂಘದ ಚೇರ್‌ ಮನ್‌ ರಮೇಶ ಅವರಾದಿ, ಪ್ರವೀಣ ನಾಡಗೌಡ, ಪ್ರಭಾಕರ ಬಾಗಿ, ಶಾಲೆಯ ಚೇರ್‌ಮನ್‌ ಅಪ್ಪು ಮಂಗಸೂಳಿ, ಸರ್‌ ಎಂ.ವಿ. ವಿಜ್ಞಾನ ಕಾಲೇಜಿನ ಚೇರ್‌ಮನ್‌ ಶಂಕರ ಹೊಸಮನಿ, ಐ.ಐ. ಯಾದವಾಡ, ಪರಪ್ಪ ಅಥಣಿ, ಮಹಾಂತೇಶ ಪಂಚಾಕ್ಷರಿ, ಶಂಕರ ಮಂಗಸೂಳಿ, ಈಶ್ವರ ಕಿತ್ತೂರ, ಸಿ.ಎಸ್‌. ಬಿಜ್ಜರಗಿ, ಪ್ರಾಚಾರ್ಯ ಕೆ.ಎಸ್‌. ಹುಬ್ಬಳ್ಳಿ, ಶಿಕ್ಷಕ ಸಂಘದ ಜಿಲ್ಲಾಧ್ಯಕ್ಷ ಬಿ.ಪಿ. ಬಾಗೆನವರ ಇದ್ದರು.

ಸಿದ್ಧೇಶ್ವರ ವಿದ್ಯಾವರ್ಧಕ ಸಂಘದ ಸ್ವಾಮಿ ವಿವೇಕಾನಂದ ಸಿಬಿಎಸ್‌ಸಿ ಶಾಲೆ ಮಕ್ಕಳು ಪ್ರಾರ್ಥನಾ ಗೀತೆಗೆ ಹೆಜ್ಜೆ ಹಾಕಿದರು. ಬಾಲಕಿಯರು ನಾಡಗೀತೆ ಹೇಳಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೆ.ಜಿ. ತೆಲಬಕ್ಕನವರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸುರೇಶ ಮರಡಿ ನಿರೂಪಿಸಿದರು. ಎಸ್‌.ಬಿ. ಬೆಳ್ಳಿಕಟ್ಟಿ ವಂದಿಸಿದರು.

ಕ್ರೀಡಾಜಾಥಾ ಮೆರವಣಿಗೆ: ಬೆಳಗ್ಗೆ 8ರಿಂದ ಕ್ರೀಡಾಪಟುಗಳೊಂದಿಗೆ ಅಲ್ಲಮಪ್ರಭು ದೇವಸ್ಥಾನದಿಂದ ಪ್ರಮುಖ ಬೀದಿಗಳ ಮೂಲಕ ಕ್ರೀಡಾ ಜಾಥಾ ನಡೆಯಿತು. ಶಾಸಕ ಸಿದ್ದು ಸವದಿ ಕ್ರೀಡಾ ಜಾಥಾಕ್ಕೆ ಚಾಲನೆ ನೀಡಿದರು. ಗದಗ, ಶಿರಸಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಹಾವೇರಿ ಒಟ್ಟು 9 ಜಿಲ್ಲೆಗಳಿಂದ ಬಾಲಕರ ಹಾಗೂ ಬಾಲಕಿಯರ ಸೇರಿದಂತೆ ಒಟ್ಟು 36 ತಂಡಗಳು ಜಾಥಾ, ಪಂದ್ಯಾವಳಿಯಲ್ಲಿ ಪಾಲ್ಗೊಂಡಿವೆ.

ಟಾಪ್ ನ್ಯೂಸ್

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.