ಅರಮನೆಯ ಅಂಬಾರಿ ನಮ್ಮದೇ:  ಡಾ.ಪ್ರಮೋದಾದೇವಿ


Team Udayavani, Sep 17, 2018, 6:00 AM IST

dr-pramoda-devi-wadiyar.jpg

ಮೈಸೂರು: ಅರಮನೆಯ ಅಂಬಾರಿ ನಮ್ಮ ವೈಯಕ್ತಿಕ ಆಸ್ತಿ. ಹಿಂದೆಯೂ ಅದು ನಮ್ಮ ಆಸ್ತಿಯೇ ಆಗಿತ್ತು. ಈಗಲೂ ನಮ್ಮದೆ, ಮುಂದೆಯೂ ಅದು ನಮ್ಮ ಆಸ್ತಿಯೇ ಆಗಿರುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ರಾಜವಂಶಸ್ಥೆ ಡಾ.ಪ್ರಮೋದಾದೇವಿ ಒಡೆಯರ್‌ ಸ್ಪಷ್ಟಪಡಿಸಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಅಂಬಾರಿ ನೀಡುವ ಹಾಗೂ ರಾಜವಂಶಸ್ಥರಿಗೆ ಸರ್ಕಾರ ರಾಜಧನ ನೀಡುವ ಕುರಿತ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ಅವರು, ಅಂಬಾರಿ ವಿಚಾರಕ್ಕೆ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಕೇಸ್‌ ಹಾಕಿಕೊಂಡಿದ್ದರು. ಅವರ ನಡವಳಿಕೆಗಳಿಗೆ ಹೆಚ್ಚು ಆದ್ಯತೆ ನೀಡುವ ಅಗತ್ಯವಿಲ್ಲ. ಈ ಹಿಂದೆಯೇ ನ್ಯಾಯಾಲಯ ಅಂಬಾರಿ ನಮ್ಮ ಆಸ್ತಿ ಎಂದು ಘೋಷಿಸಿದೆ. ಹೀಗಾಗಿ, ಅಂಬಾರಿಗೆ ಗೌರವ ಧನ ಪಡೆಯುವ ಬಗ್ಗೆ ಚಕಾರ ಎತ್ತುವುದು ಸರಿಯಲ್ಲ ಎಂದು ಹೇಳಿದರು.

ಸರ್ಕಾರದ್ದು ಕೇವಲ ನಾಡಹಬ್ಬ: ರಾಜ್ಯ ಸರ್ಕಾರ ಆಚರಿಸುವುದು ಕೇವಲ ನಾಡಹಬ್ಬ. ರಾಜ್ಯ ಸರ್ಕಾರ 1981ರಿಂದ ಜನರಿಗಾಗಿ ನಾಡಹಬ್ಬವನ್ನು ಆಚರಣೆ ಮಾಡುತ್ತಿದೆ. ಆದರೆ, ನಾವು ಮಾಡುವುದು ನವರಾತ್ರಿ ದಸರಾ ಹಬ್ಬ. ಹೀಗಾಗಿ, ಅರಮನೆಯಲ್ಲಿ ನಾವು ಮಾಡುವ ನವರಾತ್ರಿ ಆಚರಣೆಗಳು ಸಾಂಪ್ರದಾಯಿಕ ಮತ್ತು ಪಾರಂಪರಿಕವಾಗಿ ನಡೆದುಕೊಂಡು ಬಂದಿದೆ. ದಸರಾ ಎನ್ನುವ ಹೆಸರನ್ನು ಎಲ್ಲಾ ಕಡೆಗಳಲ್ಲೂ ಇಟ್ಟಿರುವುದರಿಂದ ಇಲ್ಲಿಯೂ ಇಡಲಾಗಿದೆ. ಆದ್ದರಿಂದ ಸರ್ಕಾರ ಆಚರಿಸುವ ದಸರಾ ಪೋಸ್ಟರ್‌ಗಳಲ್ಲಿ ರಾಜಮನೆತನದವರ ಭಾವಚಿತ್ರ ಹಾಕದೆ ಇರುವುದಕ್ಕೆ ನಮಗೆ ಯಾವುದೇ ಬೇಸರವಿಲ್ಲ. ಅರಮನೆಯಲ್ಲಿ ನಡೆಯುವ ನವರಾತ್ರಿ ಉತ್ಸವಕ್ಕೆ ಅ.4ರ ನಂತರ ಸಿದ್ಧತೆ ಆರಂಭಗೊಳ್ಳಲಿದ್ದು, ಖಾಸಗಿ ದರ್ಬಾರ್‌ ಸೇರಿದಂತೆ ಎಲ್ಲಾ ಆಚರಣೆಗಳು ಎಂದಿನಂತೆ ನಡೆಯಲಿದೆ ಎಂದರು.

ನನಗೆ ರಾಜಕೀಯದ ಬಗ್ಗೆ ಆಸಕ್ತಿ ಇಲ್ಲ, ಈ ಬಗ್ಗೆ ಈಗಾಗಲೇ ಪ್ರತಿಕ್ರಿಯೆ ನೀಡಿದ್ದೇನೆ. ಜನರ ಅಪೇಕ್ಷೆಯಂತೆ ರಾಜಕಾರಣದಲ್ಲೇ ಎಲ್ಲವನ್ನು ಮಾಡಲು ಸಾಧ್ಯವಿಲ್ಲ. ಬೇರೆ ಚಟುವಟಿಕೆ ಮೂಲಕವೂ ಜನರ ಸೇವೆ ಮಾಡಬಹುದು.
– ಡಾ.ಪ್ರಮೋದಾದೇವಿ ಒಡೆಯರ್‌, ರಾಜವಂಶಸ್ಥೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.