ರುಂಡದೊಂದಿಗೆ ಪರಾರಿಯಾದವನಿಗೆ ಗುಂಡು
Team Udayavani, Sep 17, 2018, 11:52 AM IST
ಕಲಬುರಗಿ: ತಾಲೂಕಿನ ಆಲಗೂಡ ಬಳಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿ ಆತನ ಕತ್ತು ಕತ್ತರಿಸಿಕೊಂಡು ಪರಾರಿಯಾಗಿದ್ದ ಆರೋಪಿ ಕೆರೆ ಭೋಸಗಾ ಬಳಿ ಇರುವ ಮಾಹಿತಿ ಅರಿತ ಪೊಲೀಸರು ರವಿವಾರ ಆತನ ಬೆನ್ನುಹತ್ತಿ ಕಾಲಿಗೆ ಗುಂಡು ಹಾರಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸೆ.10 ರಂದು ಆಲಗೂಡ ಬಳಿ ಸಿಧ್ದೋಜಿ ಎನ್ನುವಾತನನ್ನು ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಶಿವಾಜಿ ನಗರದ ನಾಗರಾಜ ಅಲಿಯಾಸ್ ನಾಗ್ಯಾ ಎನ್ನುವಾತ ತನ್ನ ಸಹಚರರೊಂದಿಗೆ ಸೇರಿ ಕೊಲೆ ಮಾಡಿ ರುಂಡ ಕತ್ತರಿಸಿ ಪರಾರಿಯಾಗಿದ್ದರು.
ಈ ಬಗ್ಗೆ ಸೆ.11 ರಂದು ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶನಿವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣೇಶ ಹಾಗೂ ಮಹಾಂತೇಶ ಎನ್ನುವನನ್ನು ಬಂಧಿಸಿ ವಿಚಾರಣೆ ನಡೆಸಿದಾಗ , ಪ್ರಮುಖ ಆರೋಪಿ ನಾಗರಾಜ ಕೆರೆ ಭೋಸಗಾ ಬಳಿ ಅವಿತಿರುವ ಮಾಹಿತಿ ಲಭ್ಯವಾಗಿತ್ತು.
ಎಸ್ಪಿ, ಹೆಚ್ಚುವರಿ ಎಸ್ಪಿಬಿ ಉಪವಿಭಾಗದ ಡಿಎಸ್ಪಿ ಮಾರ್ಗದರ್ಶನದಲ್ಲಿ ಚೌಕ್ ಪಿಐ ಸಂಗಮನಾಥ ಹಿರೇಮಠ ಹಾಗೂ ಸಿಬ್ಬಂದಿ ರಮೇಶ, ಸಿದ್ರಾಮಯ್ಯ, ಆಸೀಫ್, ಮೋಹನ ಎನ್ನುವರು ಸೇರಿ ನಾಗರಾಜನನ್ನು ಬಂಧಿಸಲು ಹೋದಾಗ ನಾಗರಾಜ ಪೊಲೀಸ್ ಸಿಬ್ಬಂದಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆ ಸಂದರ್ಭದಲ್ಲಿ ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ರಮೇಶ ಹಾಗೂ ಸಿದ್ರಾಮಯ್ಯ ಅವರನ್ನು ನಗರದ ಯುನೈಟೆಡ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ