ದೇಶದ ಪ್ರಗತಿಗೆ ಪ್ರತಿಯೊಬ್ಬರು ಮುಂದಾಗಿ: ಅಂಗಡಿ
Team Udayavani, Sep 17, 2018, 4:24 PM IST
ಸಾಂಬ್ರಾ: ದೇಶಾದ್ಯಂತ ಅಕ್ಟೋಬರ್ 2ರ ವರೆಗೆ ನಡೆಯಲಿರುವ ಸ್ವಚ್ಛ ಭಾರತ ಅಭಿಯಾನದಡಿ ಸ್ವಚ್ಛತೆಯೇ ಸೇವೆ ಕಾರ್ಯಕ್ರಮಕ್ಕೆ ತಾಲೂಕಿನ ಹೊನ್ನಿಹಾಳ ಗ್ರಾಮದಲ್ಲಿ ರವಿವಾರ ಸಂಸದ ಸುರೇಶ ಅಂಗಡಿ ಕಸ ಗೂಡಿಸುವ ಮೂಲಕ ಚಾಲನೆ ನೀಡಿದರು.
ಸಂಸದ ಸುರೇಶ ಅಂಗಡಿ ಹಾಗೂ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರು ಗ್ರಾಮದಲ್ಲಿ ಯುವಕರೊಂದಿಗೆ ಸೇರಿ ಕಸ ಗೂಡಿಸುವುದ ಮೂಲಕ ಸ್ವಚ್ಛತೆಯೇ ಸೇವೆ ಕಾರ್ಯಕ್ರಮಕ್ಕೆ ಕೈ ಜೋಡಿಸಿದರು. ಬೆಳಗ್ಗೆಯಿಂದ ಗ್ರಾಮದಲ್ಲಿ ಸ್ವಚ್ಛತೆ ಕೈಗೊಂಡರು. ಯುವಕರು ಶ್ರಮದಾನ ಮಾಡುವ ಮೂಲಕ ಮತ್ತಷ್ಟು ಹುರುಪು ಕೊಟ್ಟರು.
ಸಂಸದ ಅಂಗಡಿ ಮಾತನಾಡಿ, ಮಹಾತ್ಮಾ ಗಾಂಧೀಜಿಯವರು ಸ್ವಚ್ಛತಾ ಹೀ ಈಶ್ವರ ಸೇವಾ ಎಂದು ಹೇಳಿದ್ದರು. ಆದರೆ ಕಾಂಗ್ರೆಸ್ನವರು 70 ವರ್ಷಗಳ ಕಾಲ ಅಧಿಕಾರ ನಡೆಸಿದರೂ ಅದನ್ನು ಜಾರಿಗೆ ತರಲಿಲ್ಲ. ಈಗ ಪ್ರಧಾನಿ ಮೋದಿಯವರು ಸೆ. 15ರಿಂದ ಅ. 2ರವರೆಗೆ 15 ದಿನಗಳ ಕಾಲ ಸ್ವಚ್ಛತೆಯೇ ಸೇವೆ ಎಂಬ ಅಭಿಯಾನ ಹಮ್ಮಿಕೊಂಡಿದ್ದಾರೆ. ಈ ಬಗ್ಗೆ ಈಗಾಗಲೇ ದೇಶದ 2 ಸಾವಿರ ಜನರಿಗೆ ಪತ್ರ ಬರೆದು ಈ ಕಾರ್ಯಕ್ರಮಕ್ಕೆ ಕೈ ಜೋಡಿಸುವಂತೆ ಮನವಿ ಮಾಡಿದ್ದಾರೆ. ಇದು ದೇಶದ ಸ್ವತ್ಛತೆಗೆ ಮಾದರಿಯಾಗಿದ್ದು, ಎಲ್ಲರೂ ತಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟು ದೇಶದ ಪ್ರಗತಿಗೆ ಎಲ್ಲರೂ ಮುಂದಾಗಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿ, ನಮ್ಮ ಮನೆ, ಊರು ಸ್ವತ್ಛವಾಗಿದ್ದರೆ ಆರೋಗ್ಯ ಸದೃಢವಾಗಿರುತ್ತದೆ. ರಾಜಕೀಯವೆಂದರೆ ಕೇವಲ ರಸ್ತೆ, ವಿದ್ಯುತ್, ನೀರು ಪೂರೈಸುವುದು ಅಷ್ಟೇ ಅಲ್ಲ. ಇಂಥ ಕಾರ್ಯಕ್ರಮಗಳಲ್ಲಿ ಜನರನ್ನೂ ಕೂಡಿಸಿಕೊಂಡು ಜನ ಸೇವೆ ಮಾಡುವುದು ರಾಜಕೀಯವಾಗಿದೆ. ಮೋದಿ ಹಾಕಿಕೊಟ್ಟ ಸ್ವತ್ಛತೆ ಅಭಿಯಾನ ಮುಂದುವರಿಸಬೇಕಾಗಿದೆ ಎಂದರು. ಬಿಜೆಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಧನಂಜಯ ಜಾಧವ ಮಾತನಾಡಿ, ನಾಲ್ಕು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸ್ವಚ್ಛತೆ ಬಗ್ಗೆ ವಿಶೇಷ ಗಮನ ಹರಿಸಿದ್ದಾರೆ ಎಂದರು. ಸಿದ್ದನಕೊಳ್ಳ ಮಠದ ಶ್ರೀ ಗಂಗಾಧರ ಸ್ವಾಮೀಜಿ ಮಾತನಾಡಿ, ಪೂರ್ವಜರ ಕಾಲದಿಂದಲೂ ಸ್ವಚ್ಛತೆಗೆ ವಿಶೇಷ ಸ್ಥಾನ ಇದೆ. ಅದನ್ನು ದೇಶದಲ್ಲಿ ಸರಿಯಾಗಿ ಅನುಷ್ಠಾನಕ್ಕೆ ತರುವ ಕೆಲಸ ಆಗಿರಲಿಲ್ಲ. ಈಗ ದೇಶಾದ್ಯಂತ ಸ್ವತ್ಛತೆ ಬಗ್ಗೆ ಅಭಿಯಾನ ನಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ರಾಜು ದೇಸಾಯಿ, ಗಣಪತಿ ಹೊಸಮನಿ, ಕಲ್ಲಪ್ಪ ರಾವಳ, ಶಹಾಜಿ ಜಾಧವ, ಚಂದ್ರಕಾಂತ ಕೆಂಗೇರಿ, ಗಜಾನನ ಜಾಧವ, ಕುಮಾರ ಮಠದ, ಡಾ| ಕೋತಿನ, ಅಭಯ ಅವಲಕ್ಕಿ, ಡಾ ಗುರು ಕೋಟಿನ್ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್
Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ
ರಾಜ್ಯಕ್ಕೆ ಬರುತ್ತಿದ್ದ ನೀರನ್ನು ತಡೆ ಹಿಡಿದ ಮಹಾ ಸರ್ಕಾರದ ಕ್ರಮಕ್ಕೆ ರೈತರು ಆಕ್ರೋಶ
Belagavi ಪ್ರೀತಿ ನಿರಾಕರಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿದ್ದಾತನ ಸೆರೆ
Belagavi ಅಳವಾನ್ ಗಲ್ಲಿಯಲ್ಲಿ ಗುಂಪು ಘರ್ಷಣೆ; ಪೊಲೀಸರೆದುರೇ ತಲ್ವಾರ್ ಪ್ರದರ್ಶಿಸಿದ ಯುವಕರು
MUST WATCH
ಹೊಸ ಸೇರ್ಪಡೆ
Meteorite; ಕೃಷಿಭೂಮಿಗೆ ಬಿದ್ದ ಉಲ್ಕಾಶಿಲೆ; ಗುಂಡಿಯಿಂದ ಹೊರಬರುತ್ತಿದೆ ಶಾಖ
Rebel star ಅಂಬರೀಶ್ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್
AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ
Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ
Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ