ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ
Team Udayavani, Sep 17, 2018, 4:38 PM IST
ಹಗರಿಬೊಮ್ಮನಹಳ್ಳಿ: ಪಟ್ಟಣದ ಜ್ಯೋತಿ ವೃಂದದಿಂದ ಗಣೇಶ ಪ್ರತಿಷ್ಠಾಪನೆಯ ಪ್ರಯುಕ್ತ ರಾಜ್ಯಮಟ್ಟದ ಆಹ್ವಾನಿತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಪಂದ್ಯಾವಳಿಯಲ್ಲಿ ವಿವಿಧ ಜಿಲ್ಲೆಗಳಿಂದ 18ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಪ್ರಾರಂಭದ ಪಂದ್ಯದಲ್ಲಿ ಬೆಂಗಳೂರು ಹೊಯ್ಸಳ ತಂಡದ ವಿರುದ್ಧ ಹಾಸನ ತಂಡದ ಕ್ರೀಡಾಪಟುಗಳು ಉತ್ತಮ ಶಾಟ್ ಹೊಡೆಯುವ ಮೂಲಕ ಬೆಂಗಳೂರು ತಂಡವನ್ನು ಸೋಲುಣಿಸಿದರು.
ರಾಯಚೂರು, ಕೊಪ್ಪಳ, ಬಳ್ಳಾರಿ ತಂಡಗಳು ಭಾರೀ ಪೈಪೋಟಿಯನ್ನೊಡ್ಡಿದ್ದವು. ರಾಷ್ಟ್ರೀಯ ಹಿರಿಯ ಆಟಗಾರರಾದ ಪ್ರಮೋದ್ ಹೆಗಡೆ, ವಿಶ್ವನಾಥ್, ಭರತ್ ಅವರ ಆಟಕ್ಕೆ ಪ್ರೇಕ್ಷಕರು ನೃತ್ಯದ ಮೂಲಕ ರಂಜಿಸಿದರು.
ರಾಷ್ಟ್ರೀಯ ಯುವ ಎಡಗೈ ಆಟಗಾರ ಸಂಪ್ರೀತ್ ಹೊಡೆಯುವ ಶಾಟ್ಗಳು ನೆಲಕ್ಕಪ್ಪಳಿಸಿ ಮೇಲೆರುತ್ತಿದ್ದದ್ದನ್ನು ಪ್ರೇಕ್ಷಕರು ಕುತೂಹಲದಿಂದ ವೀಕ್ಷಿಸಿದರು. ಯುವ ಆಟಗಾರರಾದ ಅನುಷ್, ರಾಕೇಶ್ ವಿಶೇಷ ಗಮನ ಸೆಳೆದರು.
ಬಾಲಕಿಯರ ಪಂದ್ಯಾಟದಲ್ಲಿ ಹೊಸಪೇಟೆ, ಸಿರ್ಸಿ, ಬಾಗಲಕೋಟೆ, ರಾಯಚೂರು ಬಾಲಕಿಯರು ತೋರಿದ ಚಾಕಚಕ್ಯತೆ ಪ್ರೇಕ್ಷಕರನ್ನು ಮಂತ್ರಮುಗªರನ್ನಾಗಿಸಿತ್ತು. ಜಿಲ್ಲಾ ವಾಲಿಬಾಲ್ ಸಂಸ್ಥೆ ಕಾರ್ಯದರ್ಶಿ ಎಂ.ವೆಂಕಟೇಶ್, ರೆಫ್ರಿ
ಮಲ್ಲಿಕಾರ್ಜುನ ಇದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಸತ್ಸಂಗ ಸಮಿತಿ ಅಧ್ಯಕ್ಷ ಲಕ್ಷ್ಮೀಪತಿ, ಜ್ಯೋತಿ ವೃಂದ ಪ್ರತಿವರ್ಷ ವಿಶೇಷ ಕಾರ್ಯಕ್ರಮಗಳ ಮೂಲಕ ಗಮನ ಸೆಳೆದಿದೆ. ವಾಲಿಬಾಲ್ ಪಂದ್ಯವನ್ನು ಏರ್ಪಡಿಸಿ ಇಲ್ಲಿನ ಯುವ ಪ್ರತಿಭೆಗಳಿಗೆ
ಸದಭಿರುಚಿಯನ್ನು ಹೆಚ್ಚಿಸಿದೆ. ರಾಷ್ಟ್ರೀಯ ವಾಲಿಬಾಲ್ ಪಟುಗಳು ಪಟ್ಟಣಕ್ಕೆ ಆಗಮಿಸಿ ವಿಶೇಷ ಪ್ರದರ್ಶನದ ನೀಡುತ್ತಿರುವುದು ಅತ್ಯಂತ ಸಂತೋಷಕರ ಸಂಗತಿ ಎಂದರು.
ಜ್ಯೋತಿ ವೃಂದದ ಅಧ್ಯಕ್ಷ ಸುರೇಶ್ ಚಿನಮಳ್ಳಿ, ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್, ಪುರಸಭೆ ಸದಸ್ಯರಾದ ಬದಾಮಿ ಮೃತ್ಯುಂಜಯ, ಹುಳ್ಳಿ ಮಂಜುನಾಥ್, ಚೋಳರಾಜ, ಹುಡೇದ್ ಗುರುಬಸವರಾಜ, ಭರತ್, ಸಂದೀಪ್
ಶಿವಮೊಗ್ಗ, ನವೀನ್, ಡಾ| ಅಜ್ಜಯ್ಯ, ಡಾ| ವಿಶ್ವನಾಥ ಇನ್ನಿತರರಿದ್ದರು. ಅಶೋಕ ಉಪ್ಪಾರ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ