ಪೆಟ್ರೋಲ್‌, ಡೀಸೆಲ್‌ ದರ 2 ರೂ. ಇಳಿಕೆ


Team Udayavani, Sep 18, 2018, 6:00 AM IST

state-government-petrol-diesel.jpg

ಬೆಂಗಳೂರು: ನಿರೀಕ್ಷೆಯಂತೆ ರಾಜ್ಯ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ ವಿಧಿಸುತ್ತಿದ್ದ ಸೆಸ್‌ ಕಡಿಮೆಗೊಳಿಸಿದ್ದು, ಇದರಿಂದಾಗಿ ರಾಜ್ಯದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಪ್ರತಿ ಲೀಟರ್‌ಗೆ 2 ರೂ. ಇಳಿಕೆಯಾಗಿದೆ.

ರಾಜ್ಯ ಸರ್ಕಾರ ಪೆಟ್ರೋಲ್‌ ಮೇಲೆ ವಿಧಿಸುತ್ತಿದ್ದ ಸೆಸ್‌ ಶೇ. 3.25ರಷ್ಟು ಮತ್ತು ಡೀಸೆಲ್‌ ಮೇಲಿನ ಸೆಸ್‌ ಶೇ. 3.27ರಷ್ಟು ಇಳಿಕೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ. ಮಂಗಳವಾರದಿಂದ ಹೊಸ ದರ ಜಾರಿಗೆ ಬರಲಿದೆ. ಇದರೊಂದಿಗೆ ಗೋವಾ ಹೊರತುಪಡಿಸಿ ದಕ್ಷಿಣ ಭಾರತದಲ್ಲೇ ರಾಜ್ಯದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಅತಿ ಕಡಿಮೆ ಎನ್ನುವಂತಾಗಿದೆ.

ಇದರೊಂದಿಗೆ ರಾಜಸ್ತಾನ್‌, ಆಂಧ್ರಪ್ರದೇಶಗಳಂತೆ ರಾಜ್ಯ ಸರ್ಕಾರವೂ ತೆರಿಗೆ ಇಳಿಸುವ ಮೂಲಕ ದರ ಕಡಿಮೆ ಮಾಡಬೇಕು ಎಂದು ಒತ್ತಾಯಿಸುತ್ತಿದ್ದ ಪ್ರತಿಪಕ್ಷ ಬಿಜೆಪಿಗೆ, ನಾವು ತೆರಿಗೆ ಇಳಿಸಿದ್ದೇವೆ. ಈಗ ನೀವು ದರ ಇಳಿಸುವಂತೆ ಕೇಂದ್ರದ ಮೇಲೆ ಒತ್ತಡ ತನ್ನಿ ಎಂದು ರಾಜ್ಯ ಸರ್ಕಾರ ತಿರುಗೇಟು ನೀಡಿದೆ.

ದೇಶಾದ್ಯಂತ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಪ್ರತಿನಿತ್ಯ ಏರಿಳಿತವಾಗುತ್ತಿದೆ. ಸೋಮವಾರ ರಾಜ್ಯದಲ್ಲಿ (ಬೆಂಗಳೂರು) ಪೆಟ್ರೋಲ್‌ ದರ ಲೀಟರ್‌ಗೆ 84.80 ರೂ. ಇದ್ದು, ಮಂಗಳವಾರ ದೇಶಾದ್ಯಂತ ಬೆಲೆ ಬದಲಾವಣೆಯಾಗದಿದ್ದಲ್ಲಿ ಈ ದರ 82.80 ರೂ. ಆಗಲಿದೆ. ಅದೇ ರೀತಿ ಸೋಮವಾರ ಲೀಟರ್‌ಗೆ 76.21 ರೂ. ಇದ್ದದ್ದು ಮಂಗಳವಾರ 74.21ರೂ.ಗೆ ಇಳಿಯಲಿದೆ.

ನೆರೆ ರಾಜ್ಯಗಳಿಗೆ ಹೋಲಿಸಿದರೆ ಈಗಾಗಲೇ ಪೆಟ್ರೋಲ್‌ ಮತ್ತು ಡೀಸೆಲ್‌ ದರ ರಾಜ್ಯದಲ್ಲಿ ಕಡಿಮೆಯಿದೆ. ಆದರೂ ರಾಜ್ಯದ ಜನರ ಹಿತದೃಷ್ಟಿಯಿಂದ ರಾಜ್ಯದ ತೆರಿಗೆ ದರ ಇಳಿಸುವ ಮೂಲಕ ಗ್ರಾಹಕರ ಮೇಲಿನ ದರ ಏರಿಕೆ ಹೊರೆಯನ್ನು ತಪ್ಪಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರುಮುಖದಲ್ಲಿ ಸಾಗುತ್ತಿದ್ದು, ಇದನ್ನು ಖಂಡಿಸಿ ಕಳೆದ ಸೋಮವಾರ ಕಾಂಗ್ರೆಸ್‌ ಸೇರಿದಂತೆ ವಿವಿಧ ಪಕ್ಷಗಳು ಭಾರತ್‌ ಬಂದ್‌ಗೆ ಕರೆ ನೀಡಿದ್ದವು. ಅಂದು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಇಳಿಸುವ ಉದ್ದೇಶದಿಂದ ಸೆಸ್‌ ಕಡಿಮೆ ಮಾಡುವ ಬಗ್ಗೆ ಪ್ರಕಟಿಸಿದ್ದರಲ್ಲದೆ, ಈ ಕುರಿತು ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದರು. ಈ ಮಧ್ಯೆ ಮಿತ್ರಪಕ್ಷ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ಅವರೂ ತೆರಿಗೆ ಇಳಿಸುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ಮಾಡಿದ್ದರು.

ಬೆಂಗಳೂರಿಗೆ ವಾಪಸಾದ ಬಳಿಕ ಆರ್ಥಿಕ ಇಲಾಖೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿಗಳು, ದರ ಇಳಿಕೆ ಕುರಿತು ಪ್ರಸ್ತಾವನೆ ಸಿದ್ಧಪಡಿಸುವಂತೆ ಸೂಚಿಸಿದ್ದರು. ಅದರಂತೆ ಅಧಿಕಾರಿಗಳು ಸಿದ್ಧಪಡಿಸಿದ ಪ್ರಸ್ತಾವನೆ ಆಧರಿಸಿ ಸೋಮವಾರ ದರ ಇಳಿಕೆ ಆದೇಶ ಹೊರಡಿಸಲಾಗಿದೆ. ಜತೆಗೆ ಮುಂದಿನ ದಿನಗಳಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಇಳಿದಲ್ಲಿ ಮತ್ತೆ ತೆರಿಗೆ ದರ ಪರಿಷ್ಕರಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದೂ ಸರ್ಕಾರ ಹೇಳಿದೆ.

ಮಂಗಳವಾರದ ದರ (ರಾಷ್ಟ್ರ ಮಟ್ಟದಲ್ಲಿ ದರ ಬದಲಾವಣೆ ಆಗದಿದ್ದಲ್ಲಿ)
ಸ್ಥಳ    ಪೆಟ್ರೋಲ್‌    ಡೀಸೆಲ್‌

ಬೆಂಗಳೂರು (ಕರ್ನಾಟಕ)    82.80 ರೂ.    74.21 ರೂ.
ಹೊಸೂರು (ತಮಿಳುನಾಡು) 86.98 ರೂ.    79.58 ರೂ.
ಕಾಸರಗೋಡು (ಕೇರಳ)    84.93 ರೂ.    78.53 ರೂ.
ಅನಂತಪುರ (ಆಂಧ್ರಪ್ರದೇಶ)    86.47 ರೂ.    79.37 ರೂ.
ಹೈದರಾಬಾದ್‌ (ತೆಲಂಗಾಣ)    87.01 ರೂ.    80.25 ರೂ.
ಕಾಗಲ್‌ (ಮಹಾರಾಷ್ಟ್ರ)    89.71 ರೂ.    77.40 ರೂ.
ಪಣಜಿ (ಗೋವಾ)    75.60 ರೂ.    75.09 ರೂ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.