ಸುತ್ತೋಲೆ ವಾಪಸ್ ಪಡೆದ ರಾಜ್ಯ ಸರ್ಕಾರ
Team Udayavani, Sep 18, 2018, 6:35 AM IST
ಬೆಂಗಳೂರು: ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಲೋಕಾಯುಕ್ತ ಸಂಸ್ಥೆ ಮಾಡಿರುವ ಶಿಫಾರಸುಗಳಿಗೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹೊರಡಿಸಿದ ಸುತ್ತೋಲೆಯಲ್ಲೇ ಲೋಪ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆಯನ್ನು ವಾಪಸ್ ಪಡೆದಿದೆ.
ಲೋಕಾಯುಕ್ತ ಶಿಫಾರಸುಗಳ ಜಾರಿ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರಿಗಳು ಕೈಗೊಳ್ಳುವ ಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯ ಕಾರ್ಯದರ್ಶಿಯವರು ಸೆ. 11ರಂದು ಹೊರಡಿಸಿದ ಸುತ್ತೋಲೆಯಲ್ಲಿ ದಿನಾಂಕವನ್ನು 2017ರ ಸೆ. 11 ಎಂದು ನಮೂದಿಸಲಾಗಿತ್ತು. ಅಲ್ಲದೆ, ಸುತ್ತೋಲೆ ಸಂಖ್ಯೆಯಲ್ಲೂ “ಸಿಆಸುಇ 27 ಸೇಲೋಯು 2017′ ಎಂದು ನಮೂದಾಗಿತ್ತು. ಈ ಸುತ್ತೋಲೆಗೆ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರೇ ಸಹಿ ಮಾಡಿದ್ದರು.
ಆದರೆ, ಸುತ್ತೋಲೆಯಲ್ಲಿ ನಮೂದಾಗಿದ್ದ ದಿನಾಂಕದ (2017ರ ಸೆ. 11) ವೇಳೆ ಮುಖ್ಯ ಕಾರ್ಯದರ್ಶಿಯಾಗಿದ್ದವರು ಕೆ.ರತ್ನಪ್ರಭಾ. ಹಾಲಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರು ಅಧಿಕಾರ ವಹಿಸಿಕೊಂಡಿದ್ದು 2018ರ ಜುಲೈ 1ರಂದು. ಈ ತಾಂತ್ರಿಕ ಲೋಪದ ಹಿನ್ನೆಲೆಯಲ್ಲಿ ಸುತ್ತೋಲೆ ವಾಪಸ್ ಪಡೆಯಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮೂಲಗಳು ತಿಳಿಸಿವೆ.
ಏನಿದು ಸುತ್ತೋಲೆ?:
ಸರ್ಕಾರಿ ಅಧಿಕಾರಿಗಳು, ನೌಕರರ ವಿರುದ್ಧ ಬರುವ ಆರೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಅಥವಾ ಉಪಲೋಕಾಯುಕ್ತರು ಲೋಕಾಯುಕ್ತ ಕಾಯ್ದೆ 12(3)ರ ಅನ್ವಯ ತನಿಖೆ ನಡೆಸಿ ಆರೋಪ ಭಾಗಷಃ ಅಥವಾ ಪೂರ್ಣ ಸಾಬೀತಾಗಿದೆ ಎಂದು ಮನದಟ್ಟಾದಾಗ ಆ ಕುರಿತಂತೆ ಅಧಿಕಾರಿಗಳು, ನೌಕರರ ವಿರುದ್ಧ ಕ್ರಮಕ್ಕೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರಕ್ಕೆ ಶಿಫಾರಸು ಮಾಡುತ್ತದೆ. ಈ ಶಿಫಾರಸನ್ನು ಸಕ್ಷಮ ಪ್ರಾಧಿಕಾರವು ಕಾಯ್ದೆಯ ನಿಯಮ 12(4)ರ ಅನ್ವಯ ಪರಿಶೀಲಿಸಿ ಮೂರು ತಿಂಗಳೊಳಗೆ ಕ್ರಮ ಕೈಗೊಂಡಿರುವ ಕುರಿತ ವರದಿಯನ್ನು ಲೋಕಾಯುಕ್ತ ಅಥವಾ ಉಪಲೋಕಾಯುಕ್ತಕ್ಕೆ ಕಳುಹಿಸಿಕೊಡಬೇಕು.
ನಿಯಮಾವಳಿಯಂತೆ ಲೋಕಾಯುಕ್ತರ ಶಿಫಾರಸಿನನ್ವಯ ಸಕ್ಷಮ ಪ್ರಾಧಿಕಾರವು ಕ್ರಮ ಕೈಗೊಳ್ಳುವಾಗ ತನ್ನ ವಿವೇಚನೆ ಬಳಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆಯಾದರೂ ನಿಯಮ ಉಲ್ಲಂ ಸಿ ಸಕ್ಷಮ ಪ್ರಾಧಿಕಾರವು ಲೋಕಾಯುಕ್ತರ ಶಿಫಾರಸನ್ನು ಆರೋಪಿತ ಅಧಿಕಾರಿ ಅಥವಾ ನೌಕರರಿಗೆ ಕಳುಹಿಸಿಕೊಟ್ಟು ಅದರ ಕುರಿತಂತೆ ಅವರಿಂದ ಲಿಖೀತ ಹೇಳಿಕೆಗಳನ್ನು ಪಡೆಯುತ್ತಿತ್ತು. ಬಳಿಕ ಈ ಲಿಖೀತ ಹೇಳಿಕೆ ಆಧರಿಸಿ ಕ್ರಮ ಕೈಗೊಳ್ಳುತ್ತಿತ್ತು.
ಈ ಲೋಪವನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರು ಎಲ್ಲಾ ಇಲಾಖೆ ಮುಖ್ಯಸ್ಥರಿಗೆ ಸುತ್ತೋಲೆ ಕಳುಹಿಸಿ, ಶಿಸ್ತು ಕ್ರಮ ಕುರಿತಂತೆ ಲೋಕಾಯುಕ್ತರು ಮಾಡಿದ ಶಿಫಾರಸಿನ ಕುರಿತು ಸಕ್ಷಮ ಪ್ರಾಧಿಕಾರಿಗಳು ಕ್ರಮ ಕೈಗೊಳ್ಳುವಾಗ ಶಿಫಾರಸನ್ನು ಆರೋಪಿತ ನೌಕರರಿಗೆ ಕಳುಹಿಸಿಕೊಟ್ಟು ಅವರಿಂದ ಹೇಳಿಕೆ ಪಡೆಯಲು ಅವಕಾಶವಿಲ್ಲ. ಸಕ್ಷಮ ಪ್ರಾಧಿಕಾರವೇ ತನ್ನ ವಿವೇಚನೆ ಬಳಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್