ಐದನೇ ಮಹಡಿಯಿಂದ ಬಿದ್ದು ಮಹಿಳೆ ಸಾವು: ಕೊಲೆ ಶಂಕೆ


Team Udayavani, Sep 18, 2018, 12:23 PM IST

idane.jpg

ಬೆಂಗಳೂರು: ಉತ್ತರಹಳ್ಳಿಯ ಮಂತ್ರಿ ಅಫೈನ್‌ ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಿಂದ ಭಾನುವಾರ ಬಿದ್ದು ಮೃತಪಟ್ಟ ಛತ್ತಿಸ್‌ಘಡ ಮೂಲದ ಸೋನಾಲ್‌ ಅಗರ್‌ವಾಲ್‌  ಸಾವಿಗೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರ ಠಾಣೆ ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಮೃತ ಮಹಿಳೆ ಸೋನಾಲ್‌ ಅಗರ್‌ವಾಲ್‌ ಪತಿ ವೈದ್ಯ ಅವಿನಾಶ್‌ ಅಗರ್‌ವಾಲ್‌ ನೀಡಿದ ದೂರಿನ ಅನ್ವಯ, ಐಪಿಸಿ ಕಲಂ 302ರ ಅನ್ವಯವೇ ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ, ತನಿಖೆ ಪೂರ್ಣಗೊಂಡ ಬಳಿಕವೇ ಮಹಿಳೆಯ ಸಾವಿನ ಬಗ್ಗೆ ಸ್ಪಷ್ಟತೆ ಸಿಗಲಿದೆ ಎಂದು ಪೊಲೀಸರು ತಿಳಿಸಿದರು.

ತಾನು ಕೆಲಸ  ಮಾಡುವ ಆಸ್ಪತ್ರೆಯಿಂದ ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಮನೆಗೆ ಆಗಮಿಸಿದ್ದಾಗ, ಪತ್ನಿ, ನಾದಿನಿ ಹಾಗೂ ಮಗ ಮನೆಯಲ್ಲಿಯೇ ಇದ್ದರು. ನಾದಿನಿ ಹಾಗೂ ಮಗ ಇಬ್ಬರೂ ಮೊದಲಿಗೆ ಸಾಂಸ್ಕೃತಿಕ ಕಾರ್ಯಕ್ರಮ ನೋಡಿಕೊಂಡು ಬರುತ್ತೇವೆ ಎಂದು ಹೊರಗಡೆ ಹೋದರು. ಇದಾದ ಕೆಲ ಸಮಯದ ಬಳಿಕ ನಾನು ಸ್ನಾನಕ್ಕೆ ಹೊರಟಾಗ ಪತ್ನಿ ಸೋನಾ ಕೂಡ ಹೊರಗಡೆ ಹೋಗಿ ಬರುತ್ತೇನೆ ಎಂದು ತೆರಳಿದ್ದರು.

ಇದಾದ ಅರ್ಧ ಗಂಟೆ ಬಳಿಕ ವಾಪಾಸ್‌ ಬಂದ ನಾದಿನಿ ಹಾಗೂ ಮಗ ಸೋನಾಲ್‌  ಅಪಾಟ್‌ಮೆಂಟ್‌ ಕೆಳಗೆ ಬಿದ್ದಿರುವುದನ್ನು ತಿಳಿಸಿದಾಗ ಹೋಗಿ ನೋಡಿದರೆ ಮೃತಪಟ್ಟಿದ್ದರು. ಆಕೆಯ ಕೊಲೆಯಾಗಿರುವ ಸಾಧ್ಯತೆಯಿದೆ ಎಂದು ದೂರಿನಲ್ಲಿ ಅವಿನಾಶ್‌ ತಿಳಿಸಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ವಿವರಿಸಿದರು. 

ಮೂರು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ದಂಪತಿ ಅನೂನ್ಯವಾಗಿದ್ದರು. ಯಾವುದೇ ವೈಮನಸ್ಸು ಇರಲಿಲ್ಲ ಎಂದು ಸಂಬಂಧಿಕರಿಂದ ತಿಳಿದು ಬಂದಿದೆ. ತನಿಖೆಯನ್ನು° ಹಲವು ಆಯಾಮಗಲ್ಲಿ ಕೂಲಂಕುಶವಾಗಿ ವಿಚಾರಣೆ ನಡೆಸುತ್ತಿದ್ದೇವೆ. ಮರಣೋತ್ತರ ಪರೀಕ್ಷೆಯ ವರದಿಯೂ ಬರಬೇಕಿದೆ. ಇನ್ನು ಎರಡು ಮೂರು ದಿನಗಳಲ್ಲಿ ಸೋನಾಲ್‌ ಸಾವಿನ ಬಗ್ಗೆ ಖಚಿತತೆ ಸಿಗಲಿದೆ ಎಂದು ಅಧಿಕಾರಿ ತಿಳಿಸಿದರು.

ಕಳ್ಳತನ ಆರೋಪಕ್ಕೆ ಹೆದರಿದಳೇ?: ಮೃತ ಸೋನಾ ಎದುರುಗಡೆ ಮನೆಯ ಫ್ಲ್ಯಾಟ್‌ನಿಂದ ಹಾರಿ ಕೆಳಗೆ ಬಿದ್ದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸಾಫ್ಟ್ವೇರ್‌ ಕಂಪೆನಿಯೊಂದರ ಮಾಲೀಕರು ಆಗಿರುವ  ಆ ಫ್ಲ್ಯಾಟ್‌ನ ಮಾಲೀಕರು ಒಂದು ವಾರದಿಂದ ಬೀಗ ಹಾಕಿಕೊಂಡು ಹೊರಗೆ ತೆರಳಿದ್ದಾರೆ ಎಂಬ ಮಾಹಿತಿಯಿದೆ. ಜತೆಗೆ, ಮೃತ ಸೋನಾಳ  ಒಳಉಡುಪಿನಲ್ಲಿ ಡಾಲರ್‌, ಚಿನ್ನಾಭರಣ, ಹಣ, ಫ್ಲ್ಯಾಟ್‌ನ ಕೀ ಕೂಡ ಇತ್ತು. ಹೀಗಾಗಿ ಹಲವು ಅನುಮಾನಗಳು ಉದ್ಭವಿಸಿವೆ.

ಆಕೆ ಕಳ್ಳತನ ಉದ್ದೇಶದಿಂದ ಫ್ಲ್ಯಾಟ್‌ಗೆ ತೆರಳಿ ಯಾರಾದರೂ ಬಂದಿದ್ದರಿಂದ ಹೆದರಿ ಕೆಳಕ್ಕೆ ಹಾರಿದ್ದಳೇ? ಆಕೆಯನ್ನು ಯಾರಾದರೂ ತಳ್ಳಿದ್ದಾರೆಯೇ? ಎಂಬುದು  ಗೊತ್ತಾಗಬೇಕಿದೆ.ಈಗಾಗಲೇ ಮೃತ ಸೋನಾಳ ಪತಿ, ಅಕ್ಕ-ಪಕ್ಕದ ಫ್ಲ್ಯಾಟ್‌ಗಳ ನಿವಾಸಿಗಳು, ಸೆಕ್ಯೂರಿಟಿ ಗಾರ್ಡ್‌ ಸೇರಿದಂತೆ ಹಲವರಿಂದ ಮಾಹಿತಿ ಕಲೆ ಹಾಕಲಾಗಿದೆ. ಮಹಿಳೆಯ ಬಳಿ ದೊರೆತ ಡಾಲರ್‌, ಚಿನ್ನಾಭರಣ, ಆಕೆ ಕೆಳಗೆ ಹಾರಿದ ಫ್ಲ್ಯಾಟ್‌ ಮಾಲೀಕರ ವಿವರಗಳನ್ನು ತನಿಖಾ ದೃಷ್ಟಿಯಿಂದ ಹಂಚಿಕೊಳ್ಳಲು ಸಾಧ್ಯವಿಲ್ಲ.

ಟಾಪ್ ನ್ಯೂಸ್

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.