ತ್ರಿಕೋನದಲ್ಲಿ ಅಜ್ಜ-ಅಜ್ಜಿ ಕಥೆ


Team Udayavani, Sep 19, 2018, 11:54 AM IST

trikona.jpg

ಕನ್ನಡದಲ್ಲಿ ಕಳೆದ ನಾಲ್ಕು ವರ್ಷಗಳ ಹಿಂದೆ ಅಂದರೆ, 2014 ರಲ್ಲಿ “143′ ಎಂಬ ಚಿತ್ರ ಬಂದಿದ್ದು ನೆನಪಿರಬಹುದು. ನಿರ್ದೇಶಕ ಚಂದ್ರಕಾಂತ್‌, ನಾಯಕ ಮತ್ತು ನಾಯಕಿ ಎರಡು ಪಾತ್ರಗಳನ್ನಿಟ್ಟುಕೊಂಡು ಹೊಸಬಗೆಯ ಚಿತ್ರವನ್ನು ಕಟ್ಟಿಕೊಟ್ಟಿದ್ದರು. ಆ ಚಿತ್ರಕ್ಕೆ ಜನಮೆಚ್ಚುಗೆ ಸಿಕ್ಕಿದ್ದಷ್ಟೇ ಅಲ್ಲ, ರಾಜ್ಯ ಪ್ರಶಸ್ತಿಯೂ ಲಭಿಸಿತ್ತು. ಹೊಸ ಪ್ರಯೋಗದ ಚಿತ್ರ ಕೊಟ್ಟಿದ್ದ ಚಂದ್ರಕಾಂತ್‌ ಎಲ್ಲಿ ಹೋಗಿದ್ದರು ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.

ಹೌದು, ಅವರೀಗ ಹೊಸದೊಂದು ಚಿತ್ರದೊಂದಿಗೆ ಪ್ರೇಕ್ಷಕರೆದುರು ಬರಲು ಸಜ್ಜಾಗಿದ್ದಾರೆ. ಅವರ ಎರಡನೇ ನಿರ್ದೇಶನದ ಚಿತ್ರಕ್ಕೆ ಇಟ್ಟ ಹೆಸರು “ತ್ರಿಕೋನ’. ಈ ಚಿತ್ರದಲ್ಲಿ ಅವರು ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯ ಬರೆದು ನಿರ್ದೇಶನವಷ್ಟೇ ಮಾಡಿದ್ದಾರೆ. ಅವರ “ತ್ರಿಕೋನ’ ಚಿತ್ರದ ಹೀರೋ ಸುರೇಶ್‌ ಹೆಬ್ಳೀಕರ್‌. ಅವರಿಗೆ ನಾಯಕಿ ಲಕ್ಷ್ಮೀ. ಹೌದು ಇದು 60 ಪ್ಲಸ್‌ ಜೋಡಿಯ ಹೊಸ ಕಥೆ.

ಇವರೊಟ್ಟಿಗೆ 45 ಪ್ಲಸ್‌ ಜೋಡಿಯ ಕಥೆಯೂ ಸಾಗಲಿದೆ. ಅಚ್ಯುತ್‌ ಕುಮಾರ್‌ ಮತ್ತು ಸುಧಾರಾಣಿ ಜೋಡಿಯ ಕಥೆಯೂ ಇಲ್ಲೊಂದು ವಿಶೇಷತೆ ಹೊಂದಿದೆ. ಇದಷ್ಟೇ ಅಲ್ಲ, 25 ಪ್ಲಸ್‌ ಹುಡುಗನ ಕಥೆಯೂ ಒಳಗೊಂಡಿದೆ. ರಾಜ್‌ವೀರ್‌ ಎಂಬ ಹುಡುಗ ಆ ವಯಸ್ಸಿನ ಕಥೆಯ ಹೈಲೆಟ್‌. ಎಲ್ಲಾ ಸರಿ, 25, 45 ಮತ್ತು 60 ಪ್ಲಸ್‌ ವಯಸ್ಸಿನವರ ಕಥೆಯಲ್ಲೇನಿದೆ ಅಂದರೆ, “ಇದೊಂದು ಆ್ಯಕ್ಷನ್‌ ಕಮ್‌ ಥ್ರಿಲ್ಲರ್‌ ಬೇಸ್ಡ್ ಸಿನಿಮಾ. ಇಲ್ಲಿ ಎಲ್ಲವೂ ಇರಲಿದೆ.

ನೋವು, ನಲಿವು, ತಮಾಷೆ ಇತ್ಯಾದಿಯೊಂದಿಗೆ ಒಂದು ಹೊಸತನದ ಹೂರಣ ಇಲ್ಲಿ ಉಣಬಡಿಸುವ ಪ್ರಯತ್ನ ಮಾಡುತ್ತಿದ್ದೇನೆ. ಒಂದೇ ಮಾತಲ್ಲಿ ಹೇಳುವುದಾದರೆ, ಅಜ್ಜ-ಅಜ್ಜಿಯ ಕಥೆಯೇ ಇಲ್ಲಿ ಪ್ರಮುಖವಾಗಿದೆ ಎನ್ನುವ ನಿರ್ದೇಶಕ ಚಂದ್ರಕಾಂತ್‌, ಸುಮಾರು 40 ದಿನಗಳ ಕಾಲ ಬೆಂಗಳೂರು, ಕುಕ್ಕೆ ಸುಬ್ರಹ್ಮಣ್ಯ ಇತ್ಯಾದಿ ಸ್ಥಳದಲ್ಲಿ ಚಿತ್ರೀಕರಿಸಲಾಗಿದೆ.  ಇನ್ನು, ಈ ಚಿತ್ರಕ್ಕೆ ರಾಜ್‌ಶೇಖರ್‌ ನಿರ್ಮಾಪಕರು.

ಅವರದೇ ಒನ್‌ಲೈನ್‌ ಸ್ಟೋರಿ. ಅದನ್ನಿಟ್ಟುಕೊಂಡು ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾಗಿ’ ಹೇಳುತ್ತಾರೆ ಚಂದ್ರಕಾಂತ್‌. “143′ ಚಿತ್ರದ ಬಳಿಕ ಸಾಕಷ್ಟು ನಿರ್ಮಾಪಕರು ಬಂದು ಚಿತ್ರ ಮಾಡಿಕೊಡುವಂತೆ ಹೇಳಿದರಾದರೂ, ರೆಗ್ಯುಲರ್‌ ಕಥೆ ಫಾರ್ಮೆಟ್‌ ಹೊರತಾಗಿ ಬೇರೇನೋ ಮಾಡಬೇಕು ಅಂದುಕೊಂಡಿದ್ದೆ. ನನ್ನ ಕಲ್ಪನೆಗೆ ತಕ್ಕಂತಹ ಕಲಾವಿದರು ಬೇಕಿತ್ತು,

ಅದನ್ನು ಪ್ರೋತ್ಸಾಹಿಸಿ, ಬೆಂಬಲಿಸುವ ನಿರ್ಮಾಪಕರೂ ಬೇಕಿತ್ತು. ಹಾಗಾಗಿ ಎರಡನೇ ಚಿತ್ರ ಶುರುವಾಗಲು ತಡವಾಗಿದೆ. ಈಗ “ತ್ರಿಕೋನ’ ಚಿತ್ರ ಮುಗಿದಿದ್ದು, ಎಡಿಟಿಂಗ್‌ ಕೆಲಸದಲ್ಲಿ ತೊಡಗಿಕೊಂಡಿದೆ’ ಎನ್ನುತ್ತಾರೆ ಚಂದ್ರಕಾಂತ್‌. ಈ ಚಿತ್ರಕ್ಕೆ ಸುರೇಂದ್ರನಾಥ್‌ ಸಂಗೀತವಿದ್ದು, ಎರಡು ಹಾಡುಗಳಿಗೆ ಸಂಯೋಜನೆ ಮಾಡಿದ್ದಾರೆ. ಶ್ರೀನಿವಾಸ್‌ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.