ವೃತ್ತಿ ಘನತೆ ಮರೆತ ಶಿಕ್ಷಕರನ್ನು ಸಹಿಸಲ್ಲ
Team Udayavani, Sep 20, 2018, 5:36 PM IST
ಧಾರವಾಡ: ವೃತ್ತಿಯ ಘನತೆಯನ್ನು ಮರೆತು ದಕ್ಷತೆಯಿಲ್ಲದೇ ಜವಾಬ್ದಾರಿ ನಿರ್ವಹಣೆಯಲ್ಲಿ ನಿಷ್ಕಾಳಜಿ ತೋರುವ ಮುಖ್ಯ ಶಿಕ್ಷಕರನ್ನು ಇಲಾಖೆ ಎಂದಿಗೂ ಸಹಿಸುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ವಾಯವ್ಯ ಕರ್ನಾಟಕ ಶೈಕ್ಷಣಿಕ ವಲಯದ ಹೆಚ್ಚುವರಿ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಎಚ್ಚರಿಸಿದರು.
ಇಲ್ಲಿಯ ಡಯಟ್ ಸಭಾಭವನದಲ್ಲಿ ಬೆಳಗಾವಿ ವಿಭಾಗ ಮಟ್ಟದ 9 ಜಿಲ್ಲೆಗಳ ಸರಕಾರಿ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರ ಹಾಗೂ ತತ್ಸಮಾನ ಪತ್ರಾಂಕಿತ ಗ್ರುಪ್-ಬಿ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಯ ಗಣಕೀಕೃತ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಮೊದಲ ವರ್ಗಾವಣೆ ಆದೇಶವನ್ನು ಮುಖ್ಯಾಧ್ಯಾಪಕ ಮಹಾದೇವ ಜಿ. ನಾಯ್ಕ ಅವರಿಗೆ ವಿತರಿಸಿ ಅವರು ಮಾತನಾಡಿದರು.
ಜನಸಾಮಾನ್ಯರ ಮಕ್ಕಳಿಗೆ ಜ್ಞಾನ ದಾಸೋಹ ನೀಡುವ ಅತ್ಯಂತ ಮಹತ್ವದ ತಾಣಗಳಾಗಿರುವ ಸರಕಾರಿ ಶಾಲೆಗಳು ಉಳಿದು ಬೆಳೆದು ಬರಬೇಕಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ವ್ಯಾಪಕ ಪೈಪೋಟಿಯನ್ನು ನಾವಿಂದು ಎದುರಿಸುತ್ತಿದ್ದೇವೆ. ಸರಕಾರಿ ಶಾಲೆಗಳ ವಿಕಾಸಕ್ಕೆ ಮುಖ್ಯಾಧ್ಯಾಪಕರು ನಿರಂತರ ಕಾಳಜಿ ವಹಿಸಬೇಕಿದೆ. ಸರಕಾರಿ ಶಾಲೆಗಳನ್ನು ಬೆಳೆಸಲು ಶ್ರಮಿಸದೇ ತಮ್ಮ ಸಮೀಪದಲ್ಲಿಯೇ ಖಾಸಗಿ ಶಾಲೆಗಳನ್ನು ತೆರೆಯಲು ಅನುಮತಿಸಿ ಎನ್ಒಸಿ ನೀಡುವ ಮುಖ್ಯಾಧ್ಯಾಪಕರ ಮೇಲೆ ಇಲಾಖೆ ಶಿಸ್ತು ಕ್ರಮ ಕೈಕೊಳ್ಳುತ್ತದೆ ಎಂದರು.
ಇಲಾಖೆಯ ಜಂಟಿ ನಿರ್ದೇಶಕ ಡಾ|ಬಿ. ಕೆ.ಎಸ್.ವರ್ಧನ್ ಮಾತನಾಡಿ, ಶಾಲೆಯನ್ನು ಸಮರ್ಥವಾಗಿ ಮುನ್ನಡೆಸಿದ ಹಿರಿಮೆ ಎಲ್ಲ ಮುಖ್ಯಾಧ್ಯಾಪಕರಲ್ಲಿ ಇರಬೇಕಾಗುತ್ತದೆ. ಎಲ್ಲ ಸಹ ಶಿಕ್ಷಕ-ಶಿಕ್ಷಕಿಯರು ಬೋಧನೆಗೆ ತಕ್ಕುದಾದ ಪೂರ್ವಸಿದ್ಧತೆ ಮಾಡಿಕೊಳ್ಳದೇ ತರಗತಿ ಪ್ರವೇಶ ಮಾಡದಂತೆ ಮೇಲ್ವಿಚಾರಣೆ ಮಾಡಬೇಕು ಎಂದರು.
ಇಲಾಖೆಯ ಜಂಟಿ ನಿರ್ದೇಶಕ ಡಾ|ಬಿ.ಕೆ.ಎಸ್.ವರ್ಧನ್, ಉಪ ನಿರ್ದೇಶಕ ಮೃತ್ಯುಂಜಯ ಕುಂದಗೋಳ, ಸಾರ್ವಜನಿಕ ಸಂಪರ್ಕಾಧಿಕಾರಿ ಉಮೇಶ ಬಮ್ಮೊಕ್ಕನವರ, ಹಿರಿಯ ಸಹಾಯಕ ನಿರ್ದೇಶಕ ಅರ್ಜುನ ಕಂಬೋಗಿ, ಕಿರಿಯ ಸಂಶೋಧನಾ ಅಧಿಕಾರಿ ಮಹಾದೇವಿ ಮಾಡಲಗೇರಿ, ಇ-ಆಡಳಿತ ಕಾರ್ಯಕ್ರಮಾಧಿಕಾರಿ ಶಾಂತಾ ಮೀಸಿ, ಹಿರಿಯ ಚಿತ್ರಕಲಾ ವಿಷಯ ಪರಿವೀಕ್ಷಕ ಪುಂಡಲೀಕ ಬಾರಕೇರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
MUST WATCH
ಹೊಸ ಸೇರ್ಪಡೆ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ