ನಿರ್ಲಕ್ಷ್ಯದಿಂದ ಜನಸಂಚಾರಕ್ಕೆ ಅಪಾಯಕಾರಿಯಾದ ರಾ.ಹೆ. 66: ಬಾವಾ


Team Udayavani, Sep 21, 2018, 11:44 AM IST

21-sepctember-7.jpg

ಸುರತ್ಕಲ್‌ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಸಂಸದರ ನಿರ್ಲಕ್ಷ್ಯದಿಂದ ಹೆದ್ದಾರಿ 66ರ ಸಂಚಾರ ಅಪಾಯಕಾರಿಯಾಗಿ ಪರಿಣಮಿಸಿದೆ. ಅಲ್ಲದೆ ಕಡಿಮೆ ಅಂತರದಲ್ಲಿ ಮೂರು ಟೋಲ್‌ ಗೇಟ್‌ ಅಳವಡಿಸಿರುವುದು ಕಾನೂನು ಉಲ್ಲಂಘನೆಯಾಗಿದೆ ಎಂದು ಮಾಜಿ ಶಾಸಕ ಮೊಯಿದಿನ್‌ ಬಾವಾ ಹೇಳಿದರು. ಸುರತ್ಕಲ್‌ ಟೋಲ್‌ ಗೇಟ್‌ ಮುಂಭಾಗ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಸುರತ್ಕಲ್‌-ಮಂಗಳೂರು ರಸ್ತೆ ಸಂಚಾರಕ್ಕೆ ಅಯೋಗ್ಯವಾಗಿದ್ದು, ದ್ವಿಚಕ್ರ ಸವಾರರು ಪ್ರಾಣ ಭಯದಿಂದ ಓಡಾಡುವಂತಾಗಿದೆ. ಮಳೆಗಾಲ ಮುಗಿದರೂ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿಲ್ಲ. ಸಂಸದರು ಈ ರಸ್ತೆಯಲ್ಲಿ ಓಡಾಟ ಹೆಚ್ಚಾಗಿ ನಡೆಸದ ಕಾರಣ ಅವರಿಗೂ ದುರಸ್ತಿಯಾಗದಿದ್ದರೂ ಚಿಂತೆಯಿಲ್ಲ ಎಂಬ ಭಾವನೆ ಇದ್ದಂತಿದೆ. ದುಬಾರಿ ಟೋಲ್‌ ಪಡೆಯುತ್ತಿದ್ದರೂ ಸೌಲಭ್ಯ ಮಾತ್ರ ರಸ್ತೆ ಬಳಕೆದಾರರಿಗೆ ಸಿಗುತ್ತಿಲ್ಲ. ಹೀಗಾಗಿ ಸುರತ್ಕಲ್‌ ಟೋಲ್‌ ಗೇಟನ್ನು ಮುಚ್ಚಬೇಕು ಎಂದು ಆಗ್ರಹಿಸಿದರು.

ಹೆದ್ದಾರಿಯ ಕುಂದಾಪುರದಿಂದ ಸುರತ್ಕಲ್‌ವರೆಗೆ ಕಾಮಗಾರಿ ವಿಳಂಬವಾಗಿದೆ ಮಾತ್ರವಲ್ಲ, ಸರ್ವೀಸ್‌ ರಸ್ತೆ, ಅಪಘಾತವಲಯದಲ್ಲಿ ಬದಲಾವಣೆ ಬಸ್‌ ನಿಲ್ದಾಣ ಮತ್ತಿತರ ಸೌಲಭ್ಯ ನೀಡದೆ ಟೋಲ್‌ಸಂಗ್ರಹ ನಡೆಸಲಾಗುತ್ತಿದೆ. ಇದು ಜನರ ಸುಲಿಗೆ ಎಂದು ಸುರತ್ಕಲ್‌ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೇಶವ ಸನಿಲ್‌ ಆಪಾದಿಸಿದರು.

ಪಾಲಿಕೆ ಮುಖ್ಯ ಸಚೇತಕ ಶಶಿಧರ ಹೆಗ್ಡೆ ಮಾತನಾಡಿ, ರಾಷ್ಟ್ರೀಯ ಹೆದ್ದಾರಿಯ ಉತ್ತಮ ಸೌಲಭ್ಯ ಪಡೆಯಲು ಜನರ ಹೋರಾಟವೇ ಪ್ರಮುಖ ಅಸ್ತ್ರ . ಎಲ್ಲರೂ ಕೈ ಜೋಡಿಸಿದಾಗ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲು ಸಾಧ್ಯವಿದೆ ಎಂದರು.

ಹೋರಾಟದಿಂದ ಬೇಡಿಕೆ ಈಡೇರಿಕೆ
ಕಾಂಗ್ರೆಸ್‌ ಮುಖಂಡ ರಾಘವೇಂದ್ರ ರಾವ್‌ ಮಾತನಾಡಿ, ಕೂಳೂರು ಸೇತುವೆ ಬೀಳುವ ಸ್ಥಿತಿಯಲ್ಲಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ. ಜನರ ಪ್ರಬಲ ಹೋರಾಟದಿಂದ ಮಾತ್ರ ನಮ್ಮ ಬೇಡಿಕೆ ಈಡೇರಿಸಿಕೊಳ್ಳಲು ಸಾಧ್ಯ ಎಂದು ಅವರು ಹೇಳಿದರು.

ಎಸ್‌ಡಿಪಿಐ ಅಧ್ಯಕ್ಷ ಅತಾವುಲ್ಲ ಖಾನ್‌, ಕಾರ್ಪೊರೇಟರ್‌ಗಳಾದ ದೀಪಕ್‌ ಪೂಜಾರಿ, ಬಶೀರ್‌ ಅಹ್ಮದ್‌, ಅಶೋಕ್‌ ಶೆಟ್ಟಿ, ಪ್ರತಿಭಾ ಕುಳಾಯಿ, ಬಾಲಕೃಷ್ಣ ಶೆಟ್ಟಿ ಕೆಂಚನೂರು, ಟಿ.ಎನ್‌. ರಮೇಶ್‌, ಚಿತ್ತರಂಜನ್‌ ಭಂಡಾರಿ, ಮಹಾಬಲ ರೈ ಮುಕ್ಕ, ಬಶೀರ್‌ ಬೈಕಂಪಾಡಿ, ರಾಜೇಶ್‌ ಕುಳಾಯಿ, ಹಿಲ್ಡಾ ಆಳ್ವ, ರೇಶ್ಮಾ ಕಾಟಿಪಳ್ಳ, ಮಮತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಬೇಡಿಕೆಗಳು
ಎಂಟು ವರ್ಷಗಳಿಂದ ಅಪೂರ್ಣಗೊಂಡ ಕಾಮಗಾರಿ ಪೂರ್ಣಗೊಳಿಸಿ, ಹೆದ್ದಾರಿಯಲ್ಲಿನ ಹೊಂಡ ಮುಚ್ಚಬೇಕು. ಟೋಲ್‌ ತೆರವು, ಚರಂಡಿ, ಬಸ್‌ ನಿಲ್ದಾಣ-ಅಂಡರ್‌ ಪಾಸ್‌ ನಿರ್ಮಾಣ, ದೀಪದ ವ್ಯವಸ್ಥೆ, ಅಪಾಯಕಾರಿ ಸ್ಥಳಗಳಲ್ಲಿ ಹೆದ್ದಾರಿ ನಿರ್ಮಾಣ ಪುನರ್‌ ವಿಮರ್ಶೆ, ಬದಲಾವಣೆ ಮತ್ತಿತರ ಬೇಡಿಕೆಯನ್ನು ಮಂಡಿಸಲಾಯಿತು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.