ಕಾರಂಜಾ ಸಂತ್ರಸ್ತರಿಂದ ಉಗ್ರ ಹೋರಾಟಕ್ಕೆ ನಿರ್ಧಾರ


Team Udayavani, Sep 21, 2018, 11:54 AM IST

bid-2.jpg

ಬೀದರ: ಜಿಲ್ಲಾಧಿಕಾರಿಗಳ ಕಚೇರಿ ಎದುರು 43 ದಿನಗಳಿಂದ ನಿರಂತರ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸದಿರುವುದರಿಂದ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಯಲಿದೆ.

ಇದರಿಂದ ಮುಂದಾಗುವ ಅನಾಹುತಗಳಿಗೆ ರಾಜ್ಯ ಮತ್ತು ಕೇಂದ್ರ ಸರಕಾರವೇ ಹೊಣೆಯಾಗಿತ್ತದೆ ಎಂದು ಕಾರಂಜಾ
ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹೊಚ್ಚಕನಳ್ಳಿ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂತ್ರಸ್ತರು ಕಪ್ಪು ಬಟ್ಟೆ ಧರಿಸಿ ಧರಣಿಯಲ್ಲಿ ಭಾಗವಹಿಸುವರು. ಪಂಜಿನ ಮೇರವಣಿಗೆ ನಡೆಸುವರು. ಜನ ಪ್ರತಿನಿಧಿಗಳ ಮನೆ ಎದುರು ಅರೆಬೆತ್ತಲೆ ಮೆರವಣಿಗೆ, ಧರಣಿ ಸ್ಥಳದಲ್ಲಿ ಕೇಶ ಮುಂಡನ ಮಾಡಿಕೊಳ್ಳವುದು ಸೇರಿದಂತೆ ವಿವಿಧ ಮಾದರಿಯಲ್ಲಿ ಹೊರಾಟ ಮಾಡಲಾಗುವುದು. ಬೀದರ ನಗರದಲ್ಲಿ ರಸ್ತೆ ತಡೆ ಚಳವಳಿ, ರೈಲ್ವೆ ನಿಲ್ದಾಣದಲ್ಲಿ ರೈಲು ರೋಖೋ ಆಂದೋಲನ, ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-65 ರಸ್ತೆ ತಡೆ ಚಳವಳಿ, ಜೈಲ್‌ ಭರೋ ಆಂದೋಲನ ಹಂತಹಂತವಾಗಿ ನಡೆಸಲಾಗುವುದು. ಹೋರಾಟದ
ಸಂದರ್ಭದಲ್ಲಿ ಯಾವುದೇ ಅಹಿತರಕ ಘಟನೆಗಳು ನಡೆದರೆ ಅದಕ್ಕೆ ನೇರವಾಗಿ ಸರ್ಕಾರವೆ ಹೊಣೆಯಾಗುತ್ತದೆ ಎಂದರು.

1972ರಲ್ಲಿ ಕೇವಲ 9 ಕೋಟಿ ವೆಚ್ಚದ ಕಾರಂಜಾ ಜಲಾಶಯ ಯೋಜನೆ ಇತ್ತು. ಆದರೆ, ಈ ವರೆಗೆ ಕೋಟ್ಯಂತರ ರೂಪಾಯಿ ಖರ್ಚಾಗಿದೆ. ಮುಳುಗಡೆಯಾದ ಬೀದರ ದಕ್ಷಿಣ ಭಾಗದ 14 ಹಳ್ಳಿಗಳು, ಹುಮನಾಬಾದ ತಾಲೂಕಿನ 8 ಹಳ್ಳಿಗಳು, ಭಾಲ್ಕಿ ತಾಲೂಕಿನ 6 ಹಳ್ಳಿಗಳ ಭೂಮಿ ಭಾಗಶಃ ಜಲಾವೃತವಾಗಿದ್ದು, ಈ ಜಲಾಶಯದಲ್ಲಿ 14,550 ಎಕರೆ ಭೂಮಿ ಅಲ್ಲದೆ ಹೆಚ್ಚುವರಿಯಾಗಿ 1200 ಎಕರೆ ಭೂಮಿ ಮುಳುಗಡೆ ಪ್ರದೇಶದಲ್ಲಿ ಸೇರಿರುತ್ತದೆ. ಭೂ ಸ್ವಾ ಧೀನ ಮಾಡಿಕೊಂಡ ಸರಕಾರ ಎಲ್ಲ ಸಂತ್ರಸ್ತ ರೈತರಿಗೆ ಸಮಾನವಾಗಿ ಪರಿಹಾರ ಧನ ನೀಡದೆ ತಾರತಮ್ಯ ಮಾಡಿ ಅನ್ಯಾಯ ಮಾಡಿದೆ. 28 ಹಳ್ಳಿಗಳ 14,550 ಎಕರೆ ಕೃಷಿ ಯೋಗ್ಯಭೂಮಿ ಮತ್ತು 8ರಿಂದ 9 ಹಳ್ಳಿಗಳು ಸಂಪೂರ್ಣ ಮುಳುಗಡೆಯಾಗಿವೆ ಎಂದರು.

5000 ಕುಟುಂಬಗಳು 18,500ಎಕರೆ ಭೂಮಿ ಸಂತ್ರಸ್ತರಿಗೆ ವೈಜ್ಞಾನಿಕವಾಗಿ ಮೌಲ್ಯಮಾಪನ ಮಾಡಿ ಪರಿಹಾರ
ನೀಡಬೇಕಾಗಿತ್ತು. ಬೆರಳೆಣಿಕೆಯಷ್ಟು ಜನ ನ್ಯಾಯಾಲಯದ ಮೊರೆ ಹೋದಾಗ ಬಡ್ಡಿ ಸೇರಿಸಿ 12 ಲಕ್ಷ ರೂ. ಪಾವತಿಸುವಂತೆ ಸೂಚಿಸಿದೆ. ಅದೇ ಮಾದರಿಯಲ್ಲಿ ಇನ್ನುಳಿ ಬಡ ರೈತರಿಗೂ ನ್ಯಾಯ ಸಿಗಬೇಕಾಗಿದೆ. ಕಾರಂಜಾ ಸಂತ್ರಸ್ತರ ಮಾದರಿಯಲ್ಲಿಯೇ ಪರಿಹಾರ ಧನ ವಿತರಣೆ ಆಗಬೇಕು ಎಂದು ಆಗ್ರಹಿಸಿದರು.

ಸಮಿತಿ ಕಾರ್ಯಾಧ್ಯಕ್ಷ ಜಿಲಾನಿ ಪಟೇಲ, ಪ್ರಧಾನ ಕಾರ್ಯದರ್ಶಿ ನಾಗಶೆಟ್ಟೆಪ್ಪಾ ಹಚ್ಚಿ, ಜಂಟಿ ಕಾರ್ಯದರ್ಶಿ ದತ್ತಾತ್ರೆಯರಾವ್‌ ಕುಲಕರ್ಣಿ, ಸಲಹೆಗಾರ ವೀರಭದ್ರಪ್ಪ ಉಪ್ಪಿನ, ಜಾಕೀರ ಪಟೇಲ, ಬಸವರಾಜ ಮೂಲಗೆ ಇದ್ದರು.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.