ದೇವರಬಾಳು; ಬಸ್‌ ಇಲ್ಲದಿರುವುದೇ ಗೋಳು


Team Udayavani, Sep 22, 2018, 6:00 AM IST

2109kdpp1.jpg

ಹಳ್ಳಿಹೊಳೆ: ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳೆರಡರ ಗಡಿಭಾಗದಲ್ಲಿ ಇರುವ ನಕ್ಸಲ್‌ ಪೀಡಿತ ಪ್ರದೇಶವಾದ ದೇವರಬಾಳುವಿಗೆ ಇನ್ನೂ ಕೂಡ ಬಸ್‌ ಸಂಚಾರ ವ್ಯವಸ್ಥೆಯೇ ಇಲ್ಲ. 

ಹಳ್ಳಿಹೊಳೆಯಿಂದ ಚಕ್ರಾ ಮೈದಾನದವರೆಗೆ ಬಸ್‌ ಸಂಪರ್ಕವಿದೆ. ಆದರೆ ಅಲ್ಲಿಂದ ಮುಂದಕ್ಕೆ ದೇವರಬಾಳು, ಕಬ್ಬಿನಾಲೆ, ಕಟ್ಟಿನಾಡಿ ಊರಿಗೆ ಸುಮಾರು 6 ಕಿ.ಮೀ. ದೂರದವರೆಗೆ ಬಸ್‌ ಸಂಪರ್ಕವೇ ಇಲ್ಲ. ಇಲ್ಲಿನ ನಿವಾಸಿಗಳು ಸ್ವಂತ ವಾಹನವನ್ನೇ ಅವಲಂಬಿಸಬೇಕಾದ ಅನಿವಾರ್ಯತೆಯಿದೆ. 

ಹಳ್ಳಿಹೊಳೆ ಗ್ರಾ.ಪಂ. ವ್ಯಾಪ್ತಿಯ ದೇವರಬಾಳುವಿನಲ್ಲಿ 2005 ರ ಜೂ. 23ರಂದು ನಕ್ಸಲರೆಂದು ಗುರುತಿಸಿಕೊಂಡ ಅಜಿತ್‌ ಹಾಗೂ ಉಮೇಶ್‌ ಅವರನ್ನು ಆಗಿನ ಉಡುಪಿ ಎಸ್ಪಿಯಾಗಿದ್ದ ಮುರುಗನ್‌ ನೇತೃತ್ವದ ವಿಶೇಷ ಪೊಲೀಸ್‌ ತಂಡ ಹಾಗೂ ನಕ್ಸಲ್‌ ನಿಗ್ರಹ ಪಡೆಯ ಜಂಟಿ ಕಾರ್ಯಾಚರಣೆಯಲ್ಲಿ ಎನ್‌ಕೌಂಟರ್‌ ಮಾಡಲಾಗಿತ್ತು. ಅಲ್ಲಿಯವರೆಗೆ ಈ ಊರಿನ ಬಗ್ಗೆ ಹೆಚ್ಚು ಮಂದಿಗೆ ತಿಳಿದಿರಲಿಲ್ಲ. 

ಭರವಸೆ ಮಾತ್ರ
ಆ ಎನ್‌ಕೌಂಟರ್‌ ಪ್ರಕರಣ ನಡೆದು 13 ವರ್ಷಗಳು ಕಳೆದಿವೆ. ಆ ಬಳಿಕ ನಕ್ಸಲ್‌ ಪ್ಯಾಕೇಜ್‌ನಡಿ ಅನುದಾನ ಬಂದರೂ ಇಲ್ಲಿನ ಅರಣ್ಯ ವಾಸಿ ಜನರ ಬದುಕು ಮಾತ್ರ ಯಾವುದೇ ಅಭಿವೃದ್ಧಿ ಕಂಡಿಲ್ಲ. ದೇವರಬಾಳು, ಕಬ್ಬಿನಾಲೆ, ಕಟ್ಟಿನಾಡಿ, ಭಾಗದಲ್ಲಿ ಸುಮಾರು 40 ರಿಂದ 50 ಮನೆಗಳಿವೆ. ಇಲ್ಲಿನ ಜನರಿಗೆ ಮೂಲಸೌಕರ್ಯ ವ್ಯವಸ್ಥೆ ಕಲ್ಪಿಸಲು ಜನಪ್ರತಿನಿಧಿಗಳು, ಸರಕಾರ ಅನೇಕ ಭರವಸೆಗಳನ್ನು ನೀಡಿತ್ತು. 5 ವರ್ಷಗಳ ಹಿಂದೆ ನಕ್ಸಲ್‌ ಪ್ಯಾಕೇಜ್‌ ಅನುದಾನದಡಿ ಇಲ್ಲಿನ ಮನೆಗಳಿಗೆ ವಿದ್ಯುತ್‌ ಸಂಪರ್ಕವನ್ನು ಕಲ್ಪಿಸಿದ್ದು, ಬಿಟ್ಟರೆ ಬೇರೆ ಯಾವುದೇ ಅಭಿವೃದ್ಧಿಯಾಗಿಲ್ಲ. 

ಬಸ್‌ ಸೌಕರ್ಯ ವಿಸ್ತರಿಸಲಿ
ಹಳ್ಳಿಹೊಳೆಯಿಂದ ದೇವರಬಾಳುವಿಗೆ ಸುಮಾರು 8 ಕಿ.ಮೀ. ದೂರವಿದ್ದು, ಈಗಿರುವ ಚಕ್ರಾ ಮೈದಾನದವರೆಗೆ ಇರುವ ಬಸ್‌ ಸೌಕರ್ಯವನ್ನು ದೇವರಬಾಳುವರೆಗೂ ವಿಸ್ತರಿಸಿದರೆ ಇಲ್ಲಿನ ನೂರಾರು ಮಂದಿಗೆ ಪ್ರಯೋಜನವಾಗಲಿದೆ. ಇಲ್ಲಿಂದ ಶಂಕರನಾರಾಯಣ, ಕೊಲ್ಲೂರು ಕಡೆಗೆ ತೆರಳುವವರಿಗೂ ಪ್ರಯೋಜನವಾಗಲಿದೆ.  
-ಶಂಕರ, ದೇವರಬಾಳು ನಿವಾಸಿ

ಬಸ್‌ ಬೇಡಿಕೆ ಸಲ್ಲಿಕೆ
ಹಳ್ಳಿಹೊಳೆಯಿಂದ ದೇವರಬಾಳುವಿಗೆ ಬಸ್‌ ಸೌಕರ್ಯ ಕಲ್ಪಿಸುವ ಸಂಬಂಧ ಹಳ್ಳಿಹೊಳೆ ಗ್ರಾ.ಪಂ. ವತಿಯಿಂದ ಈಗಾಗಲೇ ಕೆಎಸ್‌ಆರ್‌ಟಿಸಿಗೆ ಬೇಡಿಕೆಯನ್ನು ಸಲ್ಲಿಸಲಾಗಿದೆ. 
– ಸುದರ್ಶನ್‌, ಹಳ್ಳಿಹೊಳೆ ಗ್ರಾ.ಪಂ. ಪಿಡಿಒ

ಹಲವೆಡೆಯಿಂದ ಬೇಡಿಕೆಗಳಿವೆ
ದೇವರಬಾಳು ಸೇರಿದಂತೆ ಕರಾವಳಿಯ ಅನೇಕ ಕಡೆಗಳಿಗೆ ಬಸ್‌ ಸಂಪರ್ಕ ಕಲ್ಪಿಸಲು ಬೇಡಿಕೆಗಳು ಬಂದಿವೆ. ಆದರೆ ಈಗ ಸದ್ಯಕ್ಕೆ ಹೊಸ ಬಸ್‌ ಆರಂಭಿಸುವ ಯಾವುದೇ ಪ್ರಸ್ತಾವನೆ ಇಲಾಖೆ ಮುಂದಿಲ್ಲ. 
– ಜೈಶಾಂತ್‌, ಕೆಎಸ್‌ಆರ್‌ಟಿಸಿ ಡಿಟಿಒ

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.