ಶಿರಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಮೀನಮೇಷ


Team Udayavani, Sep 22, 2018, 10:06 AM IST

shiradi.jpg

ಸುಬ್ರಹ್ಮಣ್ಯ: ಅತಿವೃಷ್ಟಿ ಸಂದರ್ಭ ಭೂಕುಸಿತದಿಂದಾಗಿ ಹಾನಿಗೀಡಾಗಿರುವ ಶಿರಾಡಿ ಘಾಟಿ ರಾಷ್ಟ್ರೀಯ ಹೆದ್ದಾರಿಯ ದುರಸ್ತಿ ಕಾರ್ಯಕ್ಕೆ ಇನ್ನೂ ಚಾಲನೆಯೇ ಸಿಕ್ಕಿಲ್ಲ. ಇಲ್ಲಿ ಘನ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲವಾದ್ದರಿಂದ ಸರಕು ಸಾಗಾಟ ಲಾರಿಗಳ ಚಾಲಕರು, ವ್ಯಾಪಾರಸ್ಥರು, ಶ್ರಮಿಕ ವರ್ಗದವರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಜನರ ಸಹನೆಯ ಕಟ್ಟೆಯೂ ಒಡೆಯುತ್ತಿದೆ. ಗುಂಡ್ಯದಿಂದ ಹೆಗ್ಗದ್ದೆ ತನಕ ಕಾಂಕ್ರೀಟ್‌ ರಸ್ತೆ 12 ಕಡೆ ಭೂಕುಸಿದಿದೆ. ಹಲವು ಕಡೆ ಹೊಳೆ ಬದಿಯ ರಸ್ತೆಯ ಮಣ್ಣು ಜರಿದಿದೆ. ಅಲ್ಲೆಲ್ಲ ಮರಳಿನ ಚೀಲ ಜೋಡಿಸಿ ಟರ್ಪಾಲು ಮುಚ್ಚಿ ಎಚ್ಚರಿಕೆ ಫಲಕ ಅಳವಡಿಸಲಾಗಿದೆ. ಇದರ ಹೊರತು ಈ ಮಾರ್ಗದಲ್ಲಿ ಯಾವುದೇ ತುರ್ತು ಕಾಮಗಾರಿಗೆ ಗಮನ ಹರಿಸಿಲ್ಲ.

ಇಂದು ಗುಂಡ್ಯದಲ್ಲಿ  ಪ್ರತಿಭಟನೆ
ಶಿರಾಡಿ ಘಾಟಿ ರಸ್ತೆ ಬಂದ್‌ ಮಾಡಿ ದ.ಕ. ಜಿಲ್ಲೆಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ವ್ಯವಸ್ಥೆಗೆ ಧಕ್ಕೆ ಮಾಡಿರುವ ಆಡಳಿತ ವ್ಯವಸ್ಥೆಯ ಕ್ರಮ ಖಂಡಿಸಿ, ಸಾರಿಗೆ ಬಸ್‌ ಸಹಿತ ಅಗತ್ಯ ಘನವಾಹನಗಳಿಗೆ ಸಂಚಾರಕ್ಕೆ ರಸ್ತೆಯನ್ನು ಮುಕ್ತಗೊಳಿಸುವಂತೆ ಆಗ್ರಹಿಸಿ ಮಲೆ ನಾಡು ಜನಹಿತ ರಕ್ಷಣಾ ವೇದಿಕೆ ಸೆ. 22ರಂದು ಗುಂಡ್ಯ ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಮಲೆ ನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್‌ ಶಿರಾಡಿ ತಿಳಿಸಿದ್ದಾರೆ.

9 ತಿಂಗಳು ಬಂದ್‌
ಈ ರಾ.ಹೆ.ಯನ್ನು 2ನೇ ಹಂತದಲ್ಲಿ ಕಾಂಕ್ರೀಟ್‌ ಹಾಸಲು ಜನವರಿ 19ರಿಂದ ಬಂದ್‌ ಮಾಡಲಾಗಿತ್ತು. ಬಳಿಕ ಜೂನ್‌ 15ರಿಂದ ಲಘು ವಾಹನಗಳಿಗೆ ಸಂಚರಿಸಲು ಅವಕಾಶ ಮಾಡಲಾಗಿತ್ತು. ಈ ಅವಧಿಯಲ್ಲಿ ಮಳೆ ಬಂದು ಅಲ್ಲಲ್ಲಿ ಭೂಕುಸಿತವಾದ ಕಾರಣ ಪುನಃ ವಾಹನ ಸಂಚಾರ ನಿಷೇಧಿಸಲಾಗಿತ್ತು. ಕೇವಲ 10 ದಿನ ಮಾತ್ರ ಲಘು ವಾಹನ ಸಂಚಾರಕ್ಕೆ ರಸ್ತೆ ಮುಕ್ತವಾಗಿತ್ತು. 

ಕಳೆದ 9 ತಿಂಗಳಿಂದ ಈ ಮಾರ್ಗದಲ್ಲಿ ವಾಹನ ಓಡಾಟವಿಲ್ಲದೆ ಲಾರಿ ಚಾಲಕ-ಮಾಲಕರು, ಗುಂಡ್ಯ, ನೆಲ್ಯಾಡಿ, ಮಾರನಹಳ್ಳಿಯ ವ್ಯಾಪಾರಸ್ಥರು ವ್ಯಾಪಾರ ವಿಲ್ಲದೆ ಭಾರೀ ನಷ್ಟಕ್ಕೆ ಒಳಗಾಗಿದ್ದಾರೆ. ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ತೆರಳಲೂ ಅಸಾಧ್ಯವಾಗಿದೆ. ಸಾಲ ಮಾಡಿ ವಾಹನ ಖರೀದಿಸಿದ ಕೆಲವರು ಕಂತು ಕಟ್ಟಲು ಸಾಧ್ಯವಾಗದೆ ವಾಹನ ಮಾರಿದ್ದಾರೆ. ಕಷ್ಟ ಕೇಳಲು ಯಾರೂ ಬಂದಿಲ್ಲ ಎಂದು ಗುಂಡ್ಯದ ಗ್ಯಾರೇಜ್‌ ಮೆಕ್ಯಾನಿಕ್‌ ಸುರೇಶ್‌ ಅಳಲು ತೋಡಿಕೊಂಡರು.

ಒಂದೇ ದಿನ 9 ಅಪಘಾತ !
ರಸ್ತೆ ಕುಸಿತದ ಸ್ಥಳಗಳಲ್ಲಿ ಲಘು ವಾಹನಗಳು ಏಕಮುಖವಾಗಿ ಸಂಚರಿಸುತ್ತಿವೆ. ಬುಧವಾರ ಒಂದೇ ದಿನ ಈ ಮಾರ್ಗದಲ್ಲಿ 9 ಕಡೆ ಅಪಘಾತ ಸಂಭವಿಸಿದೆ. ದೊಡ್ಡತಪ್ಪಲು ಮತ್ತು ದೋಣಿಗಲ್‌ನಲ್ಲಿ ದೊಡ್ಡ ಮಟ್ಟದ ಸಮಸ್ಯೆ ಕಂಡುಬರುತ್ತಿದೆ. ಹೆದ್ದಾರಿ ಮೇಲೆ ಬಿದ್ದ ಮಣ್ಣನ್ನು ತೆರವುಗೊಳಿಸುವ ಕಾರ್ಯ ಕೂಡ ಅರ್ಧಕ್ಕೆ ನಿಂತಿದೆ. ಮಣ್ಣನ್ನು ತೆರವುಗೊಳಿಸಿದರೆ ವಾಹನಗಳ ಸಂಚಾರಕ್ಕೆ ಮತ್ತಷ್ಟು ಅನುಕೂಲ ವಾಗುತ್ತಿತ್ತು. 

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.