ಪುಸ್ತಕ ಪ್ರಕಟಣೆಯೊಂದಿಗೆ ಓದುಗರನ್ನು ಸೃಷ್ಟಿಸಿ: ಕೃಷ್ಣಾಜಿ


Team Udayavani, Sep 22, 2018, 2:10 PM IST

gul-1.jpg

ಕಲಬುರಗಿ: ಆಧುನಿಕ ಜೀವನ ಶೈಲಿಗೆ ಒಗ್ಗಿಕೊಂಡಿರುವ ಇಂದಿನ ದಿನಗಳಲ್ಲಿ ಸಾಹಿತ್ಯ ಓದುವವರ ಸಂಖ್ಯೆ ಕಡಿಮೆಯಾಗಿರುವ ನಡುವೆ ಹೆಚ್ಚಿನ ಸಂಖ್ಯೆಯಲ್ಲಿ ಪುಸ್ತಕಗಳು ಹೊರ ಬರುತ್ತಿವೆಯಾದರೂ ಮುಖ್ಯವಾಗಿ ಓದುಗರ ಕಡೆಗೆ ಗಮನಹರಿಸಬೇಕಾದ ಅಗತ್ಯವಿದೆ ಎಂದು ಉದ್ಯಮಿ ಕೃಷ್ಣಾಜಿ ಕುಲಕರ್ಣಿ ಹೇಳಿದರು.

ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನ, ಸಂಗಮೇಶ್ವರ ಮಹಿಳಾ ಮಂಡಳದ ಸಹಯೋಗದಲ್ಲಿ ಹಿರಿಯ ರಂಗತಜ್ಞ ಪ್ರಭಾಕರ ಸಾತಖೇಡ ಅನುವಾದಿಸಿದ “ರಕ್ತಬೀಜ’ ನಾಟಕ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಪುಸ್ತಕ ಸುಂದರವಾಗಿ ಪ್ರಕಟಿಸಬಹುದು. ಆದರೆ ಅದು ಓದುಗನಿಗೆ ತಲುಪಿದರೆ ಸಾರ್ಥಕತೆ ಹೊಂದಿದಂತಾಗುತ್ತದೆ ಎಂದು ನುಡಿದರು. 

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ| ವಿಕ್ರಮ ವಿಸಾಜಿ ಪುಸ್ತಕ ಕುರಿತು ಮಾತನಾಡಿ, ಬದುಕಿನ ವಿವಿಧ ಮಜಲುಗಳಲ್ಲಿ ಜ್ಞಾನ ಗಳಿಸಿಕೊಳ್ಳುವುದು ಒಂದು ಘಟ್ಟವಾದರೆ, ಅದನ್ನು ಬಳಕೆ ಮಾಡಿಕೊಳ್ಳುವುದು ಇನ್ನೊಂದು ಘಟ್ಟ. ಗಳಿಸಿದ ಜ್ಞಾನವನ್ನು ಅನೇಕರು ಬಳಸಿದ್ದೆಷ್ಟು ಎನ್ನುವುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ.

“ರಕ್ತಬೀಜ’ ನಾಟಕ ಕೃತಿ ಲೋಕಾರ್ಪಣೆ ನಾಟಕ ಮೂರು ವಿಭಾಗಗಳಲ್ಲಿ ನೋಡುವಂತಹ ಸನ್ನಿವೇಶ ಸೃಷ್ಟಿಯಾಗಿದೆ. ಸಣ್ಣವ, ದೊಡ್ಡವ ಮತ್ತು ಕೀರ್ತಿ (ಯಶಸ್ಸು) ಎಂಬ ಪಾತ್ರಗಳ ಮೂಲಕ ಬದುಕನ್ನು ತೆರೆದಿಡುವ ಸಂಗತಿ ಪ್ರಸ್ತಾಪಗೊಂಡಿದೆ. ನಾಟಕದ ಮಧ್ಯೆ ಪಾತ್ರಗಳು ಪ್ರೇಕ್ಷಕರೊಂದಿಗೆ ಮಾತನಾಡುವ ಮೂಲಕ ರಂಗಕೃತಿಯಾಗುವ ಕುತೂಹಲ ತರುವ ಸಂಗತಿಯಾಗಿದೆ ಎಂದು ಹೇಳಿದರು. ಮೂಲ ಶಂಕರ ಶೇಷ ಅವರು ಬರೆದ ಈ ನಾಟಕವನ್ನು ಸಮರ್ಥವಾಗಿ ಅನುವಾದಿಸಿರುವ ಪ್ರಭಾಕರ ಸಾತಖೇಡ ಅವರಿಗೆ ಸಾಹಿತ್ಯಕೃತಿಯನ್ನು ರಂಗಕೃತಿಯಾಗಿಸುವ ಬಗೆ ಗೊತ್ತಿದೆ. ಹೀಗಾಗಿ ಈ ನಾಟಕ ಕೃತಿ ಯಶಸ್ಸು ಪಡೆಯುತ್ತದೆ ಎನ್ನುವ ವಿಶ್ವಾಸವಿದೆ ಎಂದು ಶ್ಲಾಘಿಸಿದರು.

ಹಿರಿಯ ರಂಗತಜ್ಞ ಗವೀಶ ಹಿರೇಮಠ, ಕೃತಿ ಅನುವಾದಿಸಿದ ಪ್ರಭಾಕರ ಸಾತಖೇಡ ಮಾತನಾಡಿದರು. ಹಿರಿಯ ರಂಗತಜ್ಞೆ ಶೋಭಾ ರಂಜೋಳಕರ್‌ ಅಧ್ಯಕ್ಷತೆ ವಹಿಸಿದ್ದರು. ಬಿ.ಎಚ್‌.ನಿರಗುಡಿ ಸ್ವಾಗತಿಸಿದರು, ಪ್ರೊ| ಶರಣಬಸಪ್ಪ ವಡ್ಡನಕೇರಿ ನಿರೂಪಿಸಿದರು. ಸುರೇಶ ಬಡಿಗೇರ ವಂದಿಸಿದರು. ಶಿವಶಾಂತರೆಡ್ಡಿ ಮುನ್ನೋಳಿ ಪ್ರಾರ್ಥನಾಗೀತೆ ಹಾಡಿದರು. ಕಿರಣ ಪಾಟೀಲ ಕನ್ನಡಪರ ಗೀತಗಾಯನ ನಿರೂಪಿಸಿದರು.

ಲೇಖಕರಾದ ಪ್ರೊ| ರವೀಂದ್ರ ಕರ್ಜಗಿ, ಏ.ಕೆ. ರಾಮೇಶ್ವರ, ಡಾ| ಸ್ವಾಮಿರಾವ್‌ ಕುಲಕರ್ಣಿ, ನಾಟಕಕಾರ ಎಲ್‌.ಬಿ.ಕೆ. ಆಲ್ದಾಳ, ಕೆ.ಎಂ. ಮಠ, ಕಲ್ಯಾಣರಾವ್‌ ಭಕ್ಷಿ, ಸುಬ್ರಾವ್‌ ಕುಲಕರ್ಣಿ, ಡಾ| ಸುಜಾತಾ ಜಂಗಮಶೆಟ್ಟಿ, ಡಾ| ಶಾಂತಾ ಭೀಮಸೇನರಾವ್‌, ಶಂಕ್ರಯ್ಯ ಘಂಟಿ, ಪಿ.ಎಂ. ಮಣೂರ, ಡಾ| ಎಸ್‌.ಎಸ್‌. ಗುಬ್ಬಿ, ಪ್ರೊ| ಹೇಮಂತ ಕೊಲ್ಲಾಪುರ, ಎಂ. ಸಂಜೀವ್‌, ಕೆ.ಪಿ. ಗಿರಿಧರ, ರಾಜಶೇಖರ ಮಾಂಗ್‌ ಮುಂತಾದವರಿದ್ದರು. 

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.