ಮುಸ್ಲಿಮರಿಂದ ದೇಹದಂಡನೆ


Team Udayavani, Sep 22, 2018, 2:21 PM IST

gul-2.jpg

ಕಲಬುರಗಿ: ಮೊಹರಂ ಹಬ್ಬದ ಅಂಗವಾಗಿ ಶಿಯಾ ಮುಸ್ಲಿಮರು ನಗರದಲ್ಲಿ ಶುಕ್ರವಾರ ದೇಹದಂಡನೆ ಮಾಡಿಕೊಂಡರು. ಚಿಕ್ಕ ಬಾಲಕರಿಂದಹಿಡಿದು ವೃದ್ಧರವರೆಗೆ ಕಬ್ಬಿಣದ ಸರಳು,  ಬ್ಲೇಡ್‌ಗಳಿಂದ ದೇಹ ದಂಡಿಸಿಕೊಳ್ಳುತ್ತ ದೇಹವನ್ನು ರಕ್ತಸಿಕ್ತವಾಗಿಸಿಕೊಂಡು ಮೆರವಣಿಗೆಯಲ್ಲಿ ಪಾಲ್ಗೊಂಡರು.

ಮೊಹರಂ ಹಬ್ಬ ಹಿಂದೂ-ಮುಸ್ಲಿಮರ ಭಾವೈಕ್ಯತೆಯ ಪ್ರತೀಕವಾಗಿದ್ದು, ಈ ಹಬ್ಬ ಚಾರಿತ್ರಿಕ ಹಾಗೂ ಧಾರ್ಮಿಕ ಹಿನ್ನೆಲೆ ಹೊಂದಿದೆ. ಮೊಹಮ್ಮದ್‌ ಪೈಗಂಬರ್‌ ಅವರ ಮೊಮ್ಮಗ ಇಮಾಮ್‌ ಹುಸೇನ್‌ ಧರ್ಮದ ಉಳಿವಿಗಾಗಿ ನಡೆದ ಯುದ್ಧದಲ್ಲಿ ಹುತಾತ್ಮರಾದ ಶೋಕಾಚರಣೆ ನಿಮಿತ್ತ ಶಿಯಾ ಮುಸ್ಲಿಮರು ತಮ್ಮ ದೇಹವನ್ನು ತಾವೇ ದಂಡಿಸಿಕೊಳ್ಳುತ್ತಾರೆ.

ನಗರದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಸಾವಿರಾರು ಜನರ ಮಧ್ಯೆ ಸುಮಾರು ಜನರು ರೈಲ್ವೆ ನಿಲ್ದಾಣದಿಂದ ಸರ್ದಾರ್‌ ವಲ್ಲಭಭಾಯಿ ವೃತ್ತದವರೆಗೆ ದೇಹದಂಡಿಸಿಕೊಳ್ಳುತ್ತಾ ಮೆರವಣಿಗೆ ನಡೆಸಿದರು. ಬಾಲಕರು,
ಯುವಕರು ಸೇರಿದಂತೆ ವೃದ್ಧರು ರಕ್ತ ಸುರಿಯುತ್ತಿದ್ದರೂ ಲೆಕ್ಕಿಸದೆ ಕಬ್ಬಿಣದ ಸಂಕೋಲೆ, ಸರಳಿನಿಂದ ದೇಹ
ದಂಡಿಸಿಕೊಂಡರು.

ನಂತರ ವೃತ್ತದಲ್ಲಿ ಸಮಾವೇಶಗೊಂಡ ಧರ್ಮಗುರುಗಳು ಇಮಾಮ್‌ ಹುಸೇನ್‌ರ ಹೋರಾಟದ ಬಗ್ಗೆ ವಿವರಿಸಿದರು. ನೂರಾರು ಮುಸ್ಲಿಂ ಮಹಿಳೆಯರು ಪಾಲ್ಗೊಂಡಿದ್ದರು. ಈ ವೇಳೆ ವಾಹನ ಸವಾರರು ಸೇರಿದಂತೆ ಅನೇಕ ಜನರು ನೆರೆದಿದ್ದರು. ಮುಂಜಾಗ್ರತೆ ಕ್ರಮವಾಗಿ ಪೊಲೀಸ್‌ ಬಿಗಿ ಭದ್ರತೆ ಏರ್ಪಡಿಸಲಾಗಿತು

ಚಿಂಚೋಳಿ ಬಡಿದರ್ಗಾದಲ್ಲಿ ಮೊಹರಂ ಆಚರಣೆ 
ಚಿಂಚೋಳಿ: ಹಿಂದೂ ಮುಸ್ಲಿಮರ ಭಾವೈಕ್ಯತೆ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಪಟ್ಟಣ ಸೇರಿದಂತೆ
ತಾಲೂಕಿನ ಅನೇಕ ಗ್ರಾಮಗಳಲ್ಲಿ ಆಚರಿಸಲಾಯಿತು. ಪಟ್ಟಣದಲ್ಲಿ ಮೊಹರಂ ಹಬ್ಬದ ನಿಮಿತ್ತವಾಗಿ ಅಲಾಯಿ ಕೂಡಿಸುವ ಸ್ಥಳಗಳನ್ನು ವಿವಿಧ ಬಣ್ಣ ಅಲಂಕಾರಗಳಿಂದ ಸಿಂಗರಿಸಲಾಗಿತ್ತು.

ಗುರುವಾರ ಸಂಜೆ ಪಟ್ಟಣ ಬೀಬೀ ಫಾತಿಮಾ, ಚಂದಾ ಹುಸೇನಿ, ಹಸೇನ ಹುಸೇನಿ ಅಲಾಯಿ ಪೀರ ಬಡಿದರ್ಗಾ, ಚೋಟಿ ದರ್ಗಾ ಅಲ್ಲಿಸಾಬ್‌, ಮದರಸಾಬ್‌ ದರ್ಗಾ ಕೂಡಿಸಿದ ಪೀರ್‌ ಅಲಾಯಿಗಳಿಗೆ ಹಿಂದೂ-ಮುಸ್ಲಿಂ ಮಹಿಳೆಯರು ಹಸಿರು ಬಳೆ, ಉಡಿ ತುಂಬಿ ತಮ್ಮ ಹರಕೆ ಅರ್ಪಿಸಿದರು.

ಶುಕ್ರವಾರ ಮೊಹರಂ ಕೊನೆ ದಿನವಾಗಿರುವುದರಿಂದ ಅಲಾಯಿಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಲಾಗಿತ್ತು. ಪಟ್ಟಣದ 15 ಸ್ಥಳಗಳಲ್ಲಿ ಕೂಡಿಸಿದ ಅಲಾಯಿಗಳು ಬಡಿದರ್ಗಾಕ್ಕೆ ಬಂದು ಹಸೇನ-ಹುಸೇನಿ, ಚಂದಾ ಹುಸೇನಿ ಭೇಟಿ ಮಾಡಿ ತಮ್ಮ ಸ್ಥಳಗಳಿಗೆ ತೆರಳಿದರು.  ಬಡಿದರ್ಗಾದಲ್ಲಿ ಹುಲಿವೇಷ ಕುಣಿತ ಮತ್ತು ಮೊಹರಂ ಪದಗಳನ್ನು ಜನರು ನೋಡಿ ಆನಂದಿಸಿದರು.

364 ವರ್ಷಗಳಿಂದ ಆಚರಿಕೊಂಡು ಬರುತ್ತಿರುವ ಮೊಹರಂ ಹಬ್ಬವನ್ನು ನೋಡಲು ಸುತ್ತಲಿನ ಜನರು ಆಗಮಿಸಿದ್ದರು. ಬಡಿದರ್ಗಾ ಸಜ್ಜಾದೇ ನಶಿನ ಅಕಬರ ಹುಸೇನಿ ಸಾಹೇಬ ನೇತೃತ್ವದಲ್ಲಿ ಮೊಹರಂ ಅಚರಣೆ ಅದ್ಧೂರಿಯಾಗಿ ನಡೆಯಿತು.
 
ಪುರಸಭೆ ಮಾಜಿ ಅಧ್ಯಕ್ಷ ಕೆ.ಎಂ. ಬಾರಿ, ಮಕಬೂಲಖಾನ್‌, ಶಿವಕುಮಾರ ಕೊಳ್ಳೂರ, ಎಸ್‌.ಕೆ. ಮುಕ್ತಾರ, ನಿಯಾಜ್‌ ಅಲಿ, ಶ್ರೀಕಾಂತ ಜಾನಕಿ, ಸುಬ್ಬಣ್ಣ ತೋಡಿ ಇನ್ನಿತರರು ಭಾಗವಹಿಸಿದ್ದರು.

ತಾಲೂಕಿನ ಮರನಾಳ, ಹೂವಿನಬಾವಿ, ಸುಲೇಪೇಟ, ಚಂದನಕೇರಾ, ಕೋಡ್ಲಿ, ರಟಕಲ್‌, ಗಡಿಕೇಶ್ವಾರ, ನಿಡಗುಂದಾ, ಕುಂಚಾವರಂ ಇನ್ನಿತರ ಗ್ರಾಮಗಳಲ್ಲಿ ಮೊಹರಂ ಹಬ್ಬ ಆಚರಿಸಲಾಯಿತು. ಸಿಪಿಐ ಇಸ್ಮಾಯಿಲ್‌ ಶರೀಫ, ಪಿಎಸ್‌ಐ ಎ. ಎಸ್‌. ಪಟೇಲ್‌, ರಾಜಶೇಖರ ರಾಠೊಡ ಸೂಕ್ತ ಬಂದೋಬಸ್ತ್ ಮಾಡಿದ್ದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.