ಭಾವೈಕ್ಯದ ಮೊಹರಂಗೆ ತೆರೆ
Team Udayavani, Sep 22, 2018, 3:49 PM IST
ಬಾಗಲಕೋಟೆ: ಹಿಂದೂ-ಮುಸ್ಲಿಂರ ಭಾವೈಕ್ಯತೆಯ ಹಬ್ಬವಾಗಿರುವ ಮೊಹರಂ ಹಬ್ಬವನ್ನು ಜಿಲ್ಲಾದ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಜಿಲ್ಲೆಯ ಎಲ್ಲ ನಗರ ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ ಎಲ್ಲೆಡೆ ಮೊಹರಂ ಹಬ್ಬದ ಸಡಗರ ಮನೆ ಮಾಡಿದ್ದು, ವಿವಿಧೆಡೆ ಹಿಂದೂ-ಮುಸ್ಲಿಂರ ಜೊತೆ ಜೊತೆಯಾಗಿ ಅಲಾಯಿ ದೇವರನ್ನು (ಪಂಜಾ) ಪ್ರತಿಷ್ಠಾಪಿಸಿದ್ದಾರೆ. ಸಕ್ಕರೆ, ಬೆಲ್ಲ ಸಮರ್ಪಿಸಿ ಪೂಜೆ ಸಲ್ಲಿಸಿದರು. ನಗರದ ಪಂಖಾ ಮಸೀದಿ ಹತ್ತಿರ ಅಲ್ಲಾ ದೇವರು ಸಮ್ಮಿಲನವಾದವು. ಮೊಹರಂ ಹಬ್ಬದಲ್ಲಿ ಹುಲಿಗಳ ಆರ್ಭಟ ಜೋರಾಗಿತ್ತು.
ಮೊಹರಂ ಹಬ್ಬದ ನಿಮಿತ್ಯ ಭಕ್ತರು ಬೇಡಿಕೆ ಪೂರೈಸಿಕೊಳ್ಳಲು ದೇವರಲ್ಲಿ ಹರಕೆ ತೀರಿಸಲು ಹುಲಿ ವೇಷವನ್ನು ತೊಟ್ಟು ದೇವರ ಮುಂದೆ ಹುಲಿ ನೃತ್ಯ ಮಾಡುತ್ತ ಹರಕೆ ತೀರಿಸಿದರು. ಜೊತೆಗೆ ಹಿಂದೂ-ಮುಸ್ಲಿಂರು ಭಾವೈಕತೆ ಸಂಕೇತವಾಗಿರುವ ಮೊಹರಂ ಹಬ್ಬದಲ್ಲಿ ಒಬ್ಬರಿಗೊಬ್ಬರು ಶುಭಾಶಯ ವಿನಿಮಯ ಮಾಡಿಕೊಂಡು ಭಕ್ತರು ಉತ್ತತ್ತಿಗಳನ್ನು ದೇವರ ಮೇಲೆ ಎಸೆದು ಪುನೀತರಾದರು. ನಗರದ ವಿವಿಧ ಭಾಗಗಳಲ್ಲಿ ಪ್ರತಿಷ್ಠಾಪನೆಗೊಂಡಿದ್ದ ದೇವರುಗಳು ಶುಕ್ರವಾರ ಸಂಜೆ ನದಿಗಳಿಗೆ ತೆರಳಿ ವಿಸರ್ಜನೆಗೊಂಡ ನಂತರ ಮೊಹರಂ ಹಬ್ಬದ ಸಂಭ್ರಮಕ್ಕೆ ತೆರೆ ಬಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ