ನಾನಾ ನೈವೇದ್ಯ: ಭಗವದ್ಗೀತೆಯಲ್ಲಿ ಕೃಷ್ಣ ಹೀಗೆನ್ನುತ್ತಾನೆ


Team Udayavani, Sep 22, 2018, 3:50 PM IST

2-bc.jpg

ಪತ್ರಂ ಪುಷ್ಪಂ ಫ‌ಲಂ ತೋಯಂ ಯೋ ಮೇ ಭಕ್ತಯ ಪ್ರಯಚ್ಛತಿ| ತದಹಂ ಭಕ್ತಯ ಪಹೃತಂ ಅಶ್ನಾಮಿ ಪ್ರಯತಾತ್ಮನಃ|| ಎಂದರೆ ಭಕ್ತರು ತನಗೆ ಭಕ್ತಿಯಿಂದ ನೀಡಿದ ಎಲೆಯಾಗಲಿ, ಹೂವಾಗಲಿ, ಹಣ್ಣಾಗಲಿ ನೀರಾಗಲಿ ನಾನು ಅದನ್ನು ಸ್ವೀಕರಿಸುತ್ತೇನೆ.

ಭಕ್ತಿಯಿಂದ ನೀಡಿದ ಯಾವುದೇ ವಸ್ತು ಭಗವಂತನಿಗೆ ಪ್ರಿಯವಾಗುತ್ತದೆ.ಅದಕ್ಕೆ ಮೃಷ್ಟಾನ್ನವೇ ಆಗಬೇಕಿಲ್ಲ. ಆದರೆ ಅರ್ಪಿಸುವ ನೈವೇದ್ಯ ಶುಚಿಯಾಗಿರಬೇಕು. ಭಕ್ತಿ ಭಾವದಿಂದ ಅರ್ಪಿಸಬೇಕು. ಪೂಜೆಯ ಬಳಿಕ ತೀರ್ಥ ಸೇವಿಸಿ ಅನಂತರ ನೈವೇದ್ಯವನ್ನು ಪ್ರಸಾದ ರೂಪದಲ್ಲಿ ಸ್ವೀಕರಿಸಬೇಕು.

ನೈವೇದ್ಯಗಳೆಂದು ನಾವು ದೇವರಿಗೆ ಅರ್ಪಿಸುವ ಪದಾರ್ಥ ಪೋಷಕಾಂಶಗಳ ಕಣಜ. ಅದು ನಮ್ಮ ದೇಹಕ್ಕೆ ಅತ್ಯಗತ್ಯವಾದ ಖನಿಜಗಳನ್ನು ಒದಗಿಸುತ್ತದೆ ಎಂಬುದು ನಿಸ್ಸಂಶಯ. ಸರ್ವಕಾಲಕ್ಕೂ ಪ್ರಸುತ ಎನಿಸುವ ಒಂದಷ್ಟು ನೈವೇದ್ಯಗಳ ಪಟ್ಟಿ ಇಲ್ಲಿದೆ. ಕೆಲವೊಮ್ಮೆ ಸ್ಥಳಿಯ ಸಂಪ್ರದಾಯಗಳಿಗೆ ಅನುಗುಣವಾಗಿ ಕೆಲವೊಂದು ದೇವರಿಗೆ ಅರ್ಪಿತವಾಗುವ ನೈವೇದ್ಯಗಳಲ್ಲಿ ವ್ಯತ್ಯಾಸವಿರಬಹುದು ಅಷ್ಟೇ.

ಬೆಳ್ತಿಗೆ ಅನ್ನದ ನೈವೇದ್ಯ

ನಿತ್ಯ ಪೂಜೆ ನಡೆಸುವ ಎಲ್ಲಾ ಮನೆಗಳಲ್ಲಿ ಪ್ರತಿದಿನ ದೇವರಿಗೆ ಅರ್ಪಿತವಾಗುವ ಸಾಮಾನ್ಯ ನೈವೇದ್ಯವಿದು. ಬೆಳ್ತಿಗೆ ಅಕ್ಕಿಯನ್ನು ಚೆನ್ನಾಗಿ ತೊಳೆದು, ಅದಕ್ಕೆಂದೇ ಮೀಸಲಾದ ಪ್ರತ್ಯೇಕ ಪಾತ್ರೆಯಲ್ಲಿ ಅನ್ನ ಮಾಡಿ ದೇವರ ಮುಂದೆ ಇಡಲಾಗುತ್ತದೆ. ಸಾಮಾನ್ಯವಾಗಿ ಬೆಳ್ತಿಗೆ ಅನ್ನ ಮಾಡಲು ಹಿತ್ತಾಳೆಯ ಪಾತ್ರೆಯನ್ನೇ ಬಳಸುತ್ತಾರೆ. ದೇವರಿಗೆ ಸಮರ್ಪಣೆ ಮಾಡಿ ಪೂಜೆ ಮುಗಿದ ಬಳಿಕ, ಮನೆಮಂದಿಯೆಲ್ಲಾ ಇದನ್ನು ಸೇವಿಸುತ್ತಾರೆ. ನಿತ್ಯ ಪೂಜೆಯ ಹೊರತಾಗಿ ಮಹಾವಿಷ್ಣುವಿಗೆ ಬಿಳಿ ಅನ್ನ ಬಲು ಪ್ರಿಯ. ವಿಷ್ಣುವನ್ನು ಪೂಜಿಸುವಾಗ ಬಿಳಿ ಅನ್ನವನ್ನು ನೈವೇದ್ಯವಾಗಿ ಸಮರ್ಪಿಸುತ್ತಾರೆ. ಆ ಬಳಿಕ ಪ್ರಸಾದವನ್ನು ಹಸುಗಳಿಗೆ ತಿನ್ನಿಸುವವರೂ ಇ¨ªಾರೆ.

ಹಾಲು ಪಾಯಸ
ಪಾಯಸ ಎಂಬ ಪದವು ಪೀಯೂಷ ಎಂಬ ಪದದಿಂದ ಬಂದಿದೆ. ಇದರರ್ಥ- ಮಕರಂದ/ಸಿಹಿಯಾದದ್ದು. ಅಕ್ಕಿಯಿಂದ ತಯಾರಿಸಿದ ಹಾಲಿನ ಪಾಯಸಕ್ಕೆ ಹಿಂದೂ ಧಾರ್ಮಿಕ ಪರಂಪರೆಯಲ್ಲಿ ವಿಶಿಷ್ಟವಾದ ಸ್ಥಾನವಿದೆ. ಅಕ್ಕಿ ಪಾಯಸ ಚಂದ್ರಗ್ರಹನಿಗೆ ಬಲು ಪ್ರಿಯ. ಸುಬ್ರಹ್ಮಣ್ಯ ಹಾಗೂ ವಿಷ್ಣುವಿಗೆ ಬಲು ಪ್ರಿಯ ಈ ಕ್ಷೀರ ಪರಮಾನ್ನ.

ತುಪ್ಪದ ಅನ್ನ
ಶುಕ್ರದೇವನಿಗೆ ತುಪ್ಪದ ಅನ್ನ ಬಲು ಪ್ರಿಯ. ಭೋಗ ಜೀವನದ ಅನೇಕ ಸವಲತ್ತುಗಳನ್ನು ಒದಗಿಸುವವನು ಈ ಶುಕ್ರ. ಜತೆಗೆ ದುರ್ಗೆ ಹಾಗೂ ಸರಸ್ವತಿಯವರಿಗೂ ಇದು ಇಷ್ಟದ ನೈವೇದ್ಯ. ಮನಸ್ಸಿನ ಏಕಾಗ್ರತೆ ಪಡೆಯಲು ನೆರವಾಗುವ ಈ ಶಕ್ತಿಗಳನ್ನು ಒಲಿಸಿಕೊಳ್ಳಲು ತುಪ್ಪದ ಅನ್ನ ತಯಾರಿಸಿ ನೈವೇದ್ಯ ಮಾಡಬಹುದು. ಮನೆಯಲ್ಲಿ ಅನಾರೋಗ್ಯದಿಂದ ಬಳಲುವವರು, ವೈದ್ಯಕೀಯದಲ್ಲಿ ವಾಸಿಯಾಗದ ರೋಗವಿದ್ದರು ತುಪ್ಪದ ಅನ್ನ ಮಾಡಿ ನೈವೇದ್ಯವಿಟ್ಟರೆ ಒಳ್ಳೆಯದು ಎಂಬ ನಂಬಿಕೆಯಿದೆ.

ಬಿಸಿಬೇಳೆ ಬಾತ್‌
ಪ್ರತ್ಯಂಗೀರಾ ದೇವಿಯ ಬಗ್ಗೆ ನೀವೆಲ್ಲಾ  ಕೇಳಿರುತ್ತಿತಲ್ಲಾ. ಈಕೆ ನರಸಿಂಹನ ಸ್ತ್ರೀರೂಪ. ನಾರಸಿಂಹೀ ಅಥವಾ ನರಸಿಂಹಿಕಾ ಎಂದೂ ಕರೆಯಿಸಿಕೊಳ್ಳುವ ಈಕೆಯ ದೇಹದ ಅರ್ಧ ಮಹಿಳೆಯ ರೂಪದಲ್ಲಿದೆ. ಉಳಿದರ್ಥ ಸಿಂಹರೂಪದಲ್ಲಿದೆ. ಶಕ್ತಿಯ ಪ್ರತಿರೂಪವಾಗಿರುವ ಈಕೆಯನ್ನು ವಿಜಯ/ಗೆಲುವಿನ ಅಧಿದೇವತೆಯಾಗಿಯೂ ಪೂಜಿಸುತ್ತಾರೆ.

ಒಳ್ಳೆತನ ಹಾಗೂ ಕೆಡಕುಗಳನ್ನು ಸಮಾನವಾಗಿ ಸ್ವೀಕರಿಸಿ ಬದುಕು ನಡೆಸಬೇಕು ಎಂದು ಸಂದೇಶ ಸಾರುತ್ತಾಳೆ ಈ ಪ್ರತ್ಯಂಗೀರಾ ದೇವಿ. ಹೀಗಾಗಿ ಕೆಡಕುಗಳನ್ನೆಲ್ಲಾ  ದೂರಮಾಡಲು ಅನೇಕ ದೇವಸ್ಥಾನಗಳಲ್ಲಿ ಪ್ರತ್ಯಂಗೀರಾ ದೇವಿಗೆ ಹೋಮ, ಹವನ ನಡೆಸುತ್ತಾರೆ. ಶತ್ರು ಭೀತಿ ಇರುವವರು ಮನೆಯಲ್ಲೂ ಈ ದೇವಿಯನ್ನು ತೃಪ್ತಿಪಡಿಸಬಹುದು. ಹೇಗೆನ್ನುತ್ತೀರಾ?

ಆಕೆಗೆ ಇಷ್ಟವಾದ ಬಿಸಿಬೇಳೆ ಬಾತನ್ನು ನೈವೇದ್ಯ ರೂಪದಲ್ಲಿ ಸಮರ್ಪಇಸುವ ಮೂಲಕ. ಈರುಳ್ಳಿ, ಬೆಳ್ಳುಳ್ಳಿಗಳನ್ನು ಬಳಸದೆ ಸರಳವಾಗಿ ಮನೆಯಲ್ಲೇ  ಬಿಸಿಬೇಳೆ ಬಾತ್‌ ತಯಾರಿಸಬಹುದು. ಮಧ್ಯಾಹ್ನದ ನೈವೇದ್ಯದ ವೇಳೇಗಾದರೆ ಅಕ್ಕಿಯನ್ನುಬಳಸಬಹುದು. ಬೆಳಗ್ಗಿನ ಪೂಜೆಯ ವೇಳೆಗೆ ನೈವೇದ್ಯ ಮಾಡುವವರಾದರೆ, ಅಕ್ಕಿಯ ಬದಲು ದಪ್ಪ ಅವಲಕ್ಕಿಯನ್ನು ಬಳಸಬಹುದು.

ಚಿತ್ರಾನ್ನ
ಕೇತುವಿನಿಂದಾಗಿ ದೋಷಗಳಿದ್ದರೆ ಚಿತ್ರಾನ್ನ ತಯಾರಿಸಿ ನೈವೇದ್ಯ ಮಾಡಿದ್ದಲ್ಲಿ ಕಷ್ಟಗಳು ಪರಿಹಾರವಾಗುತ್ತದೆ ಎಂಬುದು ನಂಬಿಕೆ. ಕೇತುಗ್ರಹದ ಅಭಿಮಾನಿ ದೇವತೆ ಮಹಾಗಣಪತಿ. ಹೀಗಾಗಿ ಅಷ್ಟದ್ರವ್ಯ ಪಂಚಕಚ್ಚಾಯವೂ ಕೇತುವಿನ ಕಾಟವನ್ನೂ ಶಮನಗೊಳಿಸುತ್ತದೆ. ಹಳದಿ ಬಣ್ಣದ ಚಿತ್ರಾನ್ನ ದೇವಿಗೂ ಬಲು ಪ್ರಿಯ. ಮಾಂಗಲ್ಯ ದೋಷಗಳನ್ನು ಇದು ನಿವಾರಿಸುತ್ತದೆ ಹಾಗೂ ದಾಂಪತ್ಯ ಕಲಹಗಳು ಕಡಿಮೆಯಾಗುತ್ತವೆ ಎಂದೂ ಹೇಳಲಾಗುತ್ತದೆ.

ಕುಜದೋಷ ಇದ್ದವರು, ಕಂಕಣ ಭಾಗ್ಯ ಕೂಡಿಬಾದರೆ ಇದ್ದವರೂ ಚಿತ್ರಾನ್ನ ತಯಾರಿಸಿ ನೈವೇದ್ಯ ಮಾಡಿ ಸುಮಂಗಲಿಯರಿಗೆ ಹಂಚಬೇಕು. ಇದರಿಂದ ವಿವಾಹ ದೋಷಗಳೂ ನಿವಾರಣೆಯಾಗುತ್ತವೆ ಎನ್ನಲಾಗಿದೆ.

ಮೊಸರನ್ನ
ಮನೆದೇವರಿಗೆ ಮೊಸರನ್ನ ನೈವೇದ್ಯ ಮಾಡುವುದು ವಾಡಿಕೆ. ಅದರ ಹೊರತು ಶುಕ್ರವಾರ ಮಹಾಲಕ್ಷ್ಮೀ ದೇವಿಗೆ ಮೊಸರನ್ನ ಇಟ್ಟು ಪೂಜೆ ಮಾಡಿದರೆ ಲಕ್ಷ್ಮೀ ಒಲಿಯುತ್ತಾಳೆ ಎಂಬ ನಂಬಿಕೆಯಿದೆ. ಮೊಸರನ್ನ ಮಾಡುವ ವೇಳೆ ದಾಳಿಂಬೆ ಹಣ್ಣಿನ ಬೀಜ ಸೇರಿಸಿದರೆ ಶತ್ರು ಭಯ ನಾಶವಾದರೆ, ಒಣಖರ್ಜೂರ ಸಣ್ಣಗೆ ಕತ್ತರಿಸಿ ಹಾಕಿದರೆ ಹಣಕಾಸಿನ ತೊಂದರೆ ಕಾಣಿಸಿಕೊಳ್ಳುವುದಿಲ್ಲ, ಕೊಬ್ಬರಿ ಹಾಕಿ ನೈವೇದ್ಯ ಮಾಡಿ ಗಣಪತಿಗೆ ಅರ್ಪಿಸಿದರೆ ಸಂಕಷ್ಟಗಳು ದೂರವಾಗುತ್ತವೆ ಎಂದೂ ಹೇಳಲಾಗುತ್ತದೆ.

ವಿಷ್ಣು ಸಹಸ್ರನಾಮ ಇಲ್ಲವೇ ಲಕ್ಷ್ಮೀ ಸಹಸ್ರನಾಮ ಜಪಿಸುವ ವೇಳೇಯಲ್ಲಿ ಮೊಸರನ್ನಕ್ಕೆ ಜೇನುತುಪ್ಪ ಸೇರಿಸಿ ನೈವೇದ್ಯ ಮಾಡುವುದುಂಟು.ಇದರಿಂದ ಆರೋಗ್ಯದ ಸಮಸ್ಯೆಗಳೂ ದೂರವಾಗುತ್ತವೆ. ವೈಷ್ಣದ ದೇವಾಲಯಗಳಲ್ಲಿ ಇದನ್ನು ದೇವರಿಗೆ ಅರ್ಪಿಸಿದ ಬಳಿಕ ನೈವೇದ್ಯವಾಗಿ ಭಕ್ತರಿಗೆ ಹಂಚಲಾಗುತ್ತದೆ.

ಹೆಸರುಬೇಳೆ ಪೊಂಗ ಲ್‌  ಸಂಕ್ರಾತಿ ಬಂತೆಂದರೆ ಸಿಹಿಖಾರದ ಥರಥರದ ಪೊಂಗಲ್‌ ಗಳು ಪ್ರತಿ ಮನೆಯಲ್ಲೂ ತಯಾರಾಗುತ್ತವೆ.ಕೈ ತುಂಬಾ ಫ‌ಸಲು ಕೊಟ್ಟ ಸೂರ್ಯದೇವನಿಗೆ ನಮಿಸುವ ದಿನವದು. ಈ ಹಬ್ಬದ ದಿನ ಎಳ್ಳುಬೆಲ್ಲವನ್ನೂ ಮೊದಲು ದೇವರ ಮುಂದಿಟ್ಟು ಬಳಿಕ ಎಲ್ಲರಿಗೂ ಹಂಚಿ ತಿನ್ನುವ ಪ್ರತೀತಿ ಇದೆ. ಇದು ಧ್ಯಾನ್ಯಲಕ್ಷ್ಮೀಯನ್ನು ಪೂಜಿಸುವ ದಿನ. ಈ ದಿನ ಪೊಂಗಲ್‌   ತಯಾರಿಸಿ ದೇವರಿಗೆ ನೈವೇದ್ಯ ಮಾಡುವುದು ರೂಢಿ.

ಇದರ ಹೊರತಾಗಿ, ವಿಷ್ಣು, ಮಹಾಲಕ್ಷ್ಮೀ, ದುರ್ಗೆ ಹಾಗೂ ಸೂರ್ಯದೇವರಿಗೂ ಇದು ಪ್ರೀತಿಯ ನೈವೇದ್ಯ. ಕೋಪ ಕಡಿಮೆಯಾಗಲು, ಗ್ರಹಣ ಶಕ್ತಿ, ನೆನಪಿನ ಶಕ್ತಿ ಹೆಚ್ಚಲು, ಚರ್ಮಕ್ಕೆ ಸಂಬಂಧಿಸಿದ ಕಾಯಿಲೆಗಳು ಗುಣವಾಗಲು, ವಿದ್ಯಾಭ್ಯಾಸದಲ್ಲಿ ನಿಪುಣತೆ ಹೊಂದಲು ಈ ದೇವರನ್ನು ಬೇಡಿಕೊಳ್ಳುತ್ತಿರಾದರೆ ಹೆಸರುಬೇಳೆ ಪೊಂಗಲ್‌ ತಯಾರಿಸಿ ಆತನ ಮುಂದಿಡಿ. ನಿಮ್ಮ ಕೋರಿಕೆ ಈಡೇರಿದಂತೆಯೇ!

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.