3 ವರ್ಷದ ನಂತರ ಮತ್ತೆ ಬರ್ತೇನೆ ಎಂದ ಮೋದಿ
Team Udayavani, Sep 23, 2018, 6:00 AM IST
ಭುವನೇಶ್ವರ: ಪ್ರಧಾನಿ ನರೇಂದ್ರ ಮೋದಿ ಒಡಿಶಾದಲ್ಲಿ ಆರಕ್ಕೂ ಹೆಚ್ಚು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದು, ಈ ಪೈಕಿ ತಲಚೇರ್ ಮತ್ತು ಝರ್ಸಗುಡಾ ವಿಮಾನ ನಿಲ್ದಾಣದಲ್ಲಿನ ರಸಗೊಬ್ಬರ ತಯಾರಿಕೆ ಘಟಕದ ಉದ್ಘಾಟನೆಗೆ ಮೂರು ವರ್ಷದ ನಂತರ ಪುನಃ ಆಗಮಿಸುತ್ತೇನೆ ಎಂದಿದ್ದಾರೆ. ಇದು 2019ರ ಲೋಕಸಭೆ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂಬ ಮೋದಿ ವಿಶ್ವಾಸವನ್ನು ಪ್ರತಿಫಲಿಸಿದೆ. ಅಲ್ಲದೆ ಒಡಿಶಾ ಸಿಎಂ ನವೀನ್ ಪಾಟ್ನಾಯಕ್ ವಿರುದ್ಧವೂ ತೀವ್ರ ವಾಗ್ಧಾಳಿ ನಡೆಸಿದ್ದಾರೆ.
ರಸಗೊಬ್ಬರ ಘಟಕ ಸ್ಥಾಪನೆ ನಿರ್ಧಾರವನ್ನು 2000 ನೇ ಇಸ್ವಿಯಲ್ಲೇ ತೆಗೆದುಕೊಳ್ಳಲಾಗಿತ್ತು. ಆದರೆ ಘಟಕದ ಕೆಲಸ ಆರಂಭವೇ ಆಗಿಲ್ಲ. ಯಾವಾಗ ಮುಗಿಸುತ್ತೀರಿ ಎಂದು ಕೇಳಿದ್ದಕ್ಕೆ 3 ವರ್ಷದಲ್ಲಿ ಮುಗಿಸುತ್ತೇವೆ ಎಂದಿದ್ದಾರೆ. ಹೀಗಾಗಿ ನಾನು ಮೂರು ವರ್ಷ ಬಿಟ್ಟು ಇದರ ಉದ್ಘಾಟನೆಗೆ ಆಗಮಿಸುತ್ತೇನೆ ಎಂದಿದ್ದಾರೆ. ಒಡಿಶಾದಲ್ಲಿ ಯಾವುದೇ ಯೂರಿಯಾ ಘಟಕವಿಲ್ಲ. ಈ ಘಟಕವು ಒಡಿಶಾಗೆ ಅಗತ್ಯ ಯೂರಿಯಾವನ್ನು ಪೂರೈಸಲಿದೆ.
ಪಿಸಿ ಸಂಸ್ಕೃತಿ: ಪಾಟ್ನಾಯಕ್ ಸಂಪುಟವು ಪಿಸಿ (ಪರ್ಸಂಟೇಜ್ ಕಮಿಷನ್) ಸಂಸ್ಕೃತಿಗೆ ಕುಖ್ಯಾತಿ ಪಡೆದಿದೆ. ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಳಂಬ ಮಾಡುವುದು ಈ ಸರ್ಕಾರದ ಗುರುತೇ ಆಗಿಹೋಗಿದೆ ಎಂದು ಮೋದಿ ಕಿಡಿಕಾರಿದ್ದಾರೆ. ಅಲ್ಲದೆ ಆಯುಷ್ಮಾನ್ ಭಾರತ ಆರೋಗ್ಯ ವಿಮೆ ಯೋಜನೆಗೆ ಒಡಿಶಾ ಸರ್ಕಾರ ಸಮ್ಮತಿ ನೀಡಿಲ್ಲ. ಎಲ್ಲರಿಗೂ ಆಯುಷ್ಮಾನ್ನ ಪ್ರಾಮುಖ್ಯತೆ ತಿಳಿದಿದೆ. ಆದರೆ ನವೀನ್ ಬಾಬುಗೆ ಈ ವಿಚಾರ ಅರ್ಥವಾಗಿಲ್ಲ. ಒಡಿಶಾ ಸರ್ಕಾರ ಸಹಕಾರ ನೀಡದಿದ್ದರೆ, ನಾನು ನಿಮ್ಮ ಸೇವೆ ಮಾಡಲಾಗುವುದಿಲ್ಲ ಎಂದು ಮೋದಿ ಹೇಳಿದ್ದಾರೆ.
ಛತ್ತೀಸ್ಗಡದಲ್ಲಿ ಸುಭದ್ರ ಸರ್ಕಾರ: ಛತ್ತೀಸ್ಗಡದ ಜನರು ಬಹುಮತದ ಸರ್ಕಾರವನ್ನು ಆಯ್ಕೆ ಮಾಡುತ್ತಲೇ ಬಂದಿದ್ದಾರೆ. ಹೀಗಾಗಿ ಈ ಬಾರಿಯೂ ಬಹುಮತ ಸರ್ಕಾರವನ್ನೇ ಜನರು ಆರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಮೋದಿ ಛತ್ತೀಸ್ಗಡದಲ್ಲಿ ನಡೆಸಿದ ರ್ಯಾಲಿಯಲ್ಲಿ ಹೇಳಿದ್ದಾರೆ. ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿದ್ದು, ಜಂಜಿರ್ ಚಂಪಾದಲ್ಲಿ ರ್ಯಾಲಿ ನಡೆಸುವ ಮೂಲಕ ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಅವರು ಕಳೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ