ಸರ್ಕಾರದ ರಕ್ಷಣೆಗೆ ಸಿಎಂ ಟೆಂಪಲ್ ರನ್: ಶೆಟ್ಟರ್
Team Udayavani, Sep 23, 2018, 6:20 AM IST
ಹುಬ್ಬಳ್ಳಿ: ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಹದಗೆಟ್ಟಿದೆ. ಸಿಎಂ ಕುಮಾರಸ್ವಾಮಿ ಅಧಿಕಾರ ಕೈ ತಪ್ಪುವ ಭಯದಲ್ಲಿ ದೇವಸ್ಥಾನಗಳನ್ನು ಸುತ್ತುವ ಬದಲು ಆಡಳಿತದತ್ತ ಲಕ್ಷÂ ವಹಿಸಲಿ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಸಲಹೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸುವಾಗಲೇ ಜನರ ಆಶೀರ್ವಾದದಿಂದ ನಾನು ಸಿಎಂ ಆಗಿಲ್ಲ. ದೇವರ ಕೃಪೆಯಿಂದ ಆಗಿದ್ದೇನೆ ಎಂದಿದ್ದರು. ಹೀಗಾಗಿ, ದೇವರ ಆಶೀರ್ವಾದ ತಪ್ಪುತ್ತದೆ ಇಲ್ಲವೇ ಅಧಿಕಾರ ಕೈ ತಪ್ಪುತ್ತದೆ ಎಂಬ ಭಯದಿಂದಾಗಿ ಎರಡು ದಿನಕ್ಕೊಮ್ಮೆ ದೇವಸ್ಥಾನಗಳನ್ನು ಸುತ್ತುವರಿಯುವುದನ್ನು ಮುಂದುವರಿಸಿದ್ದಾರೆ. ಸರ್ಕಾರದ ಅಸ್ಥಿರತೆಯಿಂದ ಅವರು ದೇವಸ್ಥಾನ ಸುತ್ತುತ್ತಿದ್ದಾರೆ. ದೇವಸ್ಥಾನಗಳನ್ನು ಸುತ್ತಾಡುವಾಗಲೂ ತಾರತಮ್ಯ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕದ ದೇವಸ್ಥಾನಗಳಿಗೂ ಸುತ್ತಾಡಲಿ. ಇಲ್ಲಿನ ತಾಲೂಕುಗಳಲ್ಲಿನ ಭೀಕರ ಬರ ಹಾಗೂ ಇನ್ನಿತರ ಸಮಸ್ಯೆಗಳ ಕುರಿತು ಅಧ್ಯಯನ ಮಾಡಲಿ ಎಂದರು.
ಜವಾಬ್ದಾರಿ ಸ್ಥಾನದಲ್ಲಿರುವ ಸಿಎಂ ಕುಮಾರಸ್ವಾಮಿ ದಂಗೆ ಏಳಿ ಎಂದು ಹೇಳುವ ಮೂಲಕ ಆ ಸ್ಥಾನಕ್ಕೆ ಅನರ್ಹರಾಗಿದ್ದಾರೆ. ಸಿಎಂ ಸ್ಥಾನಕ್ಕೆ ಕಪ್ಪುಚುಕ್ಕೆ ತಂದಿದ್ದಾರೆ. ಸಮ್ಮಿಶ್ರ ಸರ್ಕಾರದ ಸಚಿವರು, ಶಾಸಕರು ಅಸಮಾಧಾನಗೊಂಡು ಬೀದಿಗೆ ಬಂದು ಹೋರಾಟ ಮಾಡುತ್ತಿದ್ದಾರೆ. ಆ ಸಿಟ್ಟನ್ನು ತೀರಿಸಿಕೊಳ್ಳಲು ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಇನ್ನು ಆರು ತಿಂಗಳು ಮಾತ್ರ ಕುಮಾರಸ್ವಾಮಿ ಅಧಿಕಾರ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ