ರೀಲ್ ಅಲ್ಲ ರಿಯಲ್ :ರಾತ್ರೋ ರಾತ್ರಿ ನಟ ದುನಿಯಾ ವಿಜಿ ಅರೆಸ್ಟ್!
Team Udayavani, Sep 23, 2018, 8:17 AM IST
ಬೆಂಗಳೂರು: ನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ ರಾತ್ರಿ ನಡೆದ ಜಗಳವೊಂದು ಘರ್ಷಣೆಗೆ ತಿರುಗಿ ಖ್ಯಾತ ನಟ ದುನಿಯಾ ವಿಜಯ್ ಮತ್ತು ಬೆಂಬಲಿಗರ ಬಂಧನಕ್ಕೆ ಕಾರಣವಾಗಿದೆ.
ಜಿಮ್ ಟ್ರೈನರ್ ಆಗಿರುವ ಪಾನಿಪುರಿ ಕಿಟ್ಟಿ ಅವರ ತಮ್ಮನ ಮಗ ಮಾರುತಿ ಗೌಡ ಎನ್ನುವ ಯುವಕನನ್ನು ದುನಿಯಾ ವಿಜಿ ಮತ್ತು ಮೂವರು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಲಾಗಿದೆ.
ಅಂಬೇಡ್ಕರ್ ಭವನದಲ್ಲಿ ಬಾಡಿ ಬಿಲ್ಡಿಂಗ್ ಸ್ಪರ್ಧೆ ನಡೆಯುತ್ತಿದ್ದ ವೇಳೆ ಜಗಳ ಆರಂಭವಾಗಿದ್ದು ಆ ಬಳಿಕ ಮಾರುತಿಗೆ ದುನಿಯಾ ವಿಜಿ ಅವಾಚ್ಯ ಶಬ್ಧಗಳಿಂದ ಬೈದು ಕಾರಿನಲ್ಲಿ ಅಪಹರಿಸಿ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಲಾಗಿದೆ.
ತಕ್ಷಣ ಪೊಲೀಸರಿಗೆ ದೂರು ನೀಡಲಾಗಿದ್ದು , ಹೈಗ್ರೌಂಡ್ಸ್ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ದುನಿಯಾ ವಿಜಯ್ ಸೇರಿ ಮೂವರನ್ನು ಬಂಧಿಸಿದ್ದಾರೆ.
ಎಸಿಪಿ ರವಿಶಂಕರ್ ಅವರು ದುನಿಯಾ ವಿಜಯ್ ಅವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಪ್ರಸಾದ್ ಎನ್ನುವ ವ್ಯಕ್ತಿ ಜಗಳಕ್ಕೆ ಕಾರಣ ಎಂದು ಪಾನಿಪುರಿ ಕಿಟ್ಟಿ ಹೇಳಿಕೆ ನೀಡಿದ್ದಾರೆ.
ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನಲೆಯಲ್ಲಿ ಕೆಎಸ್ಆರ್ಪಿ ತುಕಡಿಯನ್ನು ನಿಯೋಜಿಸಲಾಗಿತ್ತು.
ಗಂಭೀರವಾಗಿ ಹಲ್ಲೆಗೊಳಗಾದ ಮಾರುತಿ ಗೌಡ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ತುಟಿಗಳು ಒಡೆದಿದ್ದು, ಕಣ್ಣಿಗೂ ಗಂಭೀರ ಸ್ವರೂಪದ ಗಾಯಗಳಾಗಿವೆ. ಆಸ್ಪತ್ರೆಗೆ ಸಿಸಿಬಿ ಪೊಲೀಸರು ಆಗಮಿಸಿ ಹೇಳಿಕೆ ಪಡೆದುಕೊಂಡಿದ್ದಾರೆ.
ದುನಿಯಾ ವಿಜಯ್ ಅವರನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಹಲ್ಲೆ ನಡೆಸಿದ್ದು ನಾನೇ ಎಂದು ವಿಜಯ್ ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸಂಜೆ ವಿಜಯ್ ಮತ್ತು ಇತರ ಆರೋಪಿಗಳನ್ನು ಜಡ್ಜ್ ನಿವಾಸದಲ್ಲಿ ಜಾಮೀನಿಗಾಗಿ ಹಾಜರು ಪಡಿಸುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ