ಕುಂದಾಪುರ ಮೂಲದ ಉದ್ಯಮಿ ಬೆಂಗಳೂರಿನಲ್ಲಿ ಹತ್ಯೆ


Team Udayavani, Sep 23, 2018, 11:11 AM IST

santhosh-shetty.jpg

ಬೆಂಗಳೂರು / ಕುಂದಾಪುರ: ಆಸ್ತಿ ಹಂಚಿಕೆ ವಿಚಾರವಾಗಿ ಕುಂದಾಪುರ ಮೂಲದ ಹೊಟೇಲ್‌ ಉದ್ಯಮಿ ಯನ್ನು ಪತ್ನಿ ಹಾಗೂ ಆಕೆಯ ಸ್ನೇಹಿತ ಸೇರಿ ಕೊಲೆಗೈದ ಘಟನೆ ಬೆಂಗಳೂರಿನ ಶೇಷಾದ್ರಿಪುರ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಭವಿಸಿದೆ.  ಕುಂದಾಪುರ ತಾಲೂಕಿನ ವಂಡ್ಸೆ – ನಂದ್ರೋಳ್ಳಿ ನಿವಾಸಿ, ಬೆಂಗಳೂರಿನಲ್ಲಿ ಹೋಟೆಲ್‌ ಉದ್ಯಮಿಯಗಿದ್ದ ಸಂತೋಷ್‌ ಕುಮಾರ ಶೆಟ್ಟಿ (54) ಕೊಲೆಗೀಡಾದವರು. ಈ ಸಂಬಂಧ  ಮೃತರ ಪತ್ನಿ ಅನ್ನಪೂರ್ಣಾ (44) ಹಾಗೂ ಅವರ ಕುಟುಂಬ ಸ್ನೇಹಿತ ಪ್ರಕಾಶ್‌ (24)  ಅವರನ್ನು ಶನಿವಾರ ಬಂಧಿಸಿ, ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

ಮೃತದೇಹವನ್ನು ಶನಿವಾರ ಸಂಜೆ ಮರಣೋತ್ತರ ಪರೀಕ್ಷೆ ಬಳಿಕ ಬೆಂಗಳೂರಿನಿಂದ ಹುಟ್ಟೂರಿಗೆ ಕಳುಹಿಸಲಾಗಿದೆ. ಸಂತೋಷ್‌ – ಅನ್ನಪೂರ್ಣಾ ದಂಪತಿಗೆ ಓರ್ವ ಪುತ್ರ, ಓರ್ವ ಪುತ್ರಿಯಿದ್ದಾರೆ. ಸಂತೋಷ್‌ ಗಾಂಧಿ ನಗರದಲ್ಲಿ ಮಹಾಲಕ್ಷ್ಮಿ ಸೆಲ್ಫ್ ಸರ್ವಿಸ್‌  ಹೆಸರಿನ ಹೊಟೇಲ್‌ ನಡೆಸುತ್ತಿದ್ದು, ಆರ್ಥಿಕವಾಗಿ ಸ್ಥಿತಿವಂತರಾಗಿದ್ದರು. ಅನ್ನಪೂರ್ಣಾ ಅವರು  ಪ್ರಕಾಶ್‌ ಜತೆ ಆತ್ಮೀಯವಾಗಿದ್ದು, ಈ ವಿಷಯದಲ್ಲಿ ದಂಪತಿ ನಡುವೆ ಹಲವು ಬಾರಿ ಜಗಳವಾಗಿತ್ತು ಎನ್ನಲಾಗಿದೆ.

ಶುಕ್ರವಾರ ಬೆಳಗ್ಗೆ ಮಕ್ಕಳು ಮನೆಯಲ್ಲಿಲ್ಲದ ವೇಳೆ ದಂಪತಿ ನಡುವೆ ಜಗಳ ನಡೆದಿದ್ದು, ಕೂಡಲೇ ಅನ್ನಪೂರ್ಣಾ ಅವರು  ಪ್ರಕಾಶ್‌ನನ್ನು ಕರೆಸಿಕೊಂಡಿದ್ದಳು. ಬಳಿಕ ಮನೆಯ ಒಳಗೆ ಸಂತೋಷ್‌  ತಲೆಗೆ ದೊಣ್ಣೆಯಿಂದ ಹೊಡೆದಿದ್ದಾರೆ.  ಪರಿಣಾಮ ತೀವ್ರ ಅಸ್ವಸ್ಥಗೊಂಡ ಅವರನ್ನು ಪತ್ನಿ ಹಾಗೂ ಪ್ರಕಾಶ್‌ ಸೇರಿ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. 

ಸಂತೋಷ್‌ ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಸಂಬಂಧಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದರು. ಪ್ರಕಾಶ್‌ ಎಲ್‌ಎಲ್‌ಬಿ  ಪದವೀಧರನಾಗಿದ್ದು, ಬಾರ್‌ ಕೌನ್ಸಿಲ್‌ನಲ್ಲಿ ಇತ್ತೀಚೆಗೆ ಸದಸ್ಯತ್ವ ನೋಂದಣಿ ಮಾಡಿಸಿದ್ದ.

ಕಾರಣ  ಹಲವು
ಆಸ್ತಿ ಹಂಚಿಕೆ, ಹಣದ ವಿಚಾರ ಹಾಗೂ ಪ್ರಕಾಶ್‌ ಜತೆ ಪತ್ನಿ ಹೊಂದಿದ್ದ ಆತ್ಮೀಯತೆಗೆ ಸಂತೋಷ್‌ ಅಡ್ಡಿಯಾಗಿದ್ದು, ಈ ಕಾರಣದಿಂದ ಇಬ್ಬರೂ ಪೂರ್ವ ನಿರ್ಧಾರದಂತೆ ಯೋಜನೆ ರೂಪಿಸಿ ಕೊಲೆ ಮಾಡಿರುವ ಸಾಧ್ಯತೆಯಿದೆ. ಈ ಕುರಿತು ಬೆಂಗಳೂರಿನ ಶೇಷಾದ್ರಿಪುರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 

ಕುಂದಾಪುರದ   ಹಕ್ಲಾಡಿಯವರು
ಸಂತೋಷ್‌  ಕುಮಾರ್‌ ಅವರ ತಂದೆ ಮನೆ ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮದ ಯಳೂರು- ತೋಪು ಆಗಿದ್ದು, ಆದರೆ ಈಗ ಅವರ ಸಹೋದರ ಹಾಗೂ ತಾಯಿ ಎಲ್ಲ ನೆಲೆಸಿರುವ ಮನೆ ವಂಡ್ಸೆ ನಂದೊಳ್ಳಿಯ ಕೊಳಕುಮಣ್ಣುವಿನಲ್ಲಿದೆ. ದಿ| ಮಹಾಬಲ ಶೆಟ್ಟಿ ಹಾಗೂ ಜಲಜಮ್ಮ ಶೆಡ್ತಿ ದಂಪತಿಯ ಎರಡನೇ ಪುತ್ರರಾಗಿದ್ದು, ಅಣ್ಣ ನಾರಾಯಣ ಶೆಟ್ಟಿ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ತಮ್ಮ ರಘುರಾಮ ಶೆಟ್ಟಿ ಊರಿನಲ್ಲಿ ಸಣ್ಣ ಅಂಗಡಿ ನಡೆಸುತ್ತಿದ್ದಾರೆ. ಮೊದಲು ಹುಬ್ಬಳ್ಳಿಯಲ್ಲಿ ಹೊಟೇಲ್‌ ಉದ್ಯಮ, ಬಳಿಕ ಕಳೆದ 19 ವರ್ಷಗಳಿಂದ ಬೆಂಗಳೂರಿನ ಗಾಂಧಿ ನಗರದಲ್ಲಿ ಹೊಟೇಲ್‌  ನಡೆಸುತ್ತಿದ್ದಾರೆ. ಸಂತೋಷ್‌  25 ವರ್ಷಗಳ ಹಿಂದೆ ವಿವಾಹವಾಗಿದ್ದು, ಪತ್ನಿ ಅನ್ನಪೂರ್ಣಾ ಅವರು  ಮಾರಣಕಟ್ಟೆ ಸಮೀಪದ ಶಾರ್ಕೆಯವ ರು ಎಂದು ತಿಳಿದು ಬಂದಿದೆ. ಕಳೆದ ಫೆಬ್ರವರಿಯಲ್ಲಿ ಊರಿಗೆ ಬಂದಿದ್ದರು ಎನ್ನಲಾಗಿದೆ. 

ಟಾಪ್ ನ್ಯೂಸ್

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.