ಹೆಸರು ಬೆಳೆಗಾರರಿಗೆ ನಾಲ್ಕುಕ್ವಿಂಟಲ್‌ ಸಂಕಷ್ಟ


Team Udayavani, Sep 23, 2018, 3:40 PM IST

23-sepctember-19.jpg

ನರಗುಂದ: ಈ ಹಿಂದೆ ನೀಡಲಾಗಿದ್ದ ಹತ್ತು ಕ್ವಿಂಟಲ್‌ ಹೆಸರು ಕಾಳು ಖರೀದಿಸುವ ಭರವಸೆಗೆ ಈಗ ಕೊಕ್ಕೆ ಬಿದ್ದಿದ್ದು, ರೈತರು ಸಂಕಷ್ಟ ಎದುರಿಸುವಂತಾಗಿದೆ. ಪ್ರತಿ ರೈತರಿಂದ ಕೇವಲ ನಾಲ್ಕು ಕ್ವಿಂಟಲ್‌ ಹೆಸರು ಖರೀದಿಸುವಂತೆ ಸರಕಾರ ಆದೇಶ ಹೊರಡಿಸಿದ್ದರಿಂದ ರೈತರು ಕಂಗಾಲಾಗಿದ್ದಾರೆ.

ಕ್ವಿಂಟಲ್‌ಗೆ 6975 ರೂ. ದರದಲ್ಲಿ ಪ್ರತಿ ರೈತನಿಂದ 10 ಕ್ವಿಂಟಲ್‌ನಂತೆ ರಾಜ್ಯದಿಂದ 23,250 ಮೆಟ್ರಿಕ್‌ ಟನ್‌ ಹೆಸರು ಕಾಳು ಖರೀದಿಗೆ ಕೇಂದ್ರ ಸರ್ಕಾರ ಆ.30ರಂದು ಅನುಮೋದನೆ ನೀಡಿದ ಬಳಿಕ ಆ.31ರಿಂದಲೇ ರಾಜ್ಯ ಸರ್ಕಾರ ಎಲ್ಲೆಡೆ ಖರೀದಿ ಕೇಂದ್ರ ತೆರೆಯಿತು. ಆದರೆ ವಾರಗಟ್ಟಲೇ ಮೊಬೈಲ್‌ ಆ್ಯಪ್‌ ಬಾರದೇ ನೋಂದಣಿಯೂ ವಿಳಂಬವಾಯಿತು. ಸೆ.7ಕ್ಕೆ ಮತ್ತೂಂದು ಆದೇಶದಲ್ಲಿ ರಾಜ್ಯ ಸರ್ಕಾರ 30 ದಿನದ ಪ್ರಕ್ರಿಯೆಯಲ್ಲಿ ನೋಂದಣಿಗೆ 10 ದಿನ ಹೆಚ್ಚಳ ಮಾಡಿತು. ಸೆ.16ಕ್ಕೆ ನೋಂದಣಿ ಮುಗಿದು ವಾರ ಗತಿಸಿದರೂ ಖರೀದಿ ಪ್ರಕ್ರಿಯೆ ಮಾತ್ರ ಇನ್ನೂ ಆರಂಭವಾಗಿಲ್ಲ.

ಇನ್ನು ಗದಗ ಜಿಲ್ಲೆಗೆ ರಾಜ್ಯ ಸರ್ಕಾರ ಕೇವಲ 4,883 ಟನ್‌ ಖರೀದಿಗೆ ಗುರಿ ನೀಡಿದೆ. ತಾಲೂಕಿನಲ್ಲೇ ಏಳು ಕೇಂದ್ರಗಳಿಂದ 6 ಸಾವಿರಕ್ಕೂ ಮೇಲ್ಪಟ್ಟು ರೈತರು ನೋಂದಣಿ ಮಾಡಿಸಿದ್ದರಿಂದ ಜಿಲ್ಲೆಯ ಗುರಿ ನರಗುಂದಕ್ಕೇ ಸಾಕಾಗುವುದಿಲ್ಲ.

ಆದೇಶದ ಗೊಂದಲದಿಂದ ಎಲ್ಲಿ ಬೆಳೆದ ಧಾನ್ಯವನ್ನೂ ಕಳೆದುಕೊಳ್ಳುತ್ತೇವೋ ಎಂಬ ಆತಂಕ ರೈತರಲ್ಲಿದೆ. ಸಾಲದೆಂಬಂತೆ ಖರೀದಿ ಪ್ರಮಾಣ ಕಡಿತದ ಬೆನ್ನಲ್ಲೇ ಮಾರುಕಟ್ಟೆಯಲ್ಲಿ 5400 ಇದ್ದ ಹೆಸರು ಕಾಳಿನ ಬೆಲೆಯೂ 4800ಕ್ಕೆ ಕುಸಿರುವುದು ರೈತನ್ನು ಕಂಗಾಲು ಮಾಡಿದೆ. ಕೇಂದ್ರ ಸರಕಾರ ಅನುಮೋದನೆ ನೀಡಿದ್ದರೂ ಇತ್ತ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡುವಲ್ಲಿ ರಾಜ್ಯ ಸರ್ಕಾರದ ಗೊಂದಲದ ನೀತಿ ರೈತರಲ್ಲಿ ಆತಂಕ ಸೃಷ್ಟಿಸುತ್ತಿದೆ. ಖರೀದಿ ಕೇಂದ್ರ ಯಾವಾಗ ಪ್ರಾರಂಭಿಸುತ್ತಾರೋ ಎಂಬ ರೈತರ ಪ್ರಶ್ನೆಗೆ ಸರ್ಕಾರ ಉತ್ತರಿಸಬೇಕಿದೆ.

ನಾಲ್ಕು ಕ್ವಿಂಟಲ್‌ ಸಾಕಾಗಲ್ಲ
ಇನ್ನೊಂದು ಸಂಗತಿ ಎಂದರೆ ಸರ್ಕಾರದ ನಿಗದಿಯಂತೆ ನಾಲ್ಕು ಕ್ವಿಂಟಲ್‌ ಪ್ರಮಾಣವೂ ತಾಲೂಕಿಗೆ ಸಾಕಾಗದು. ತಾಲೂಕಿನಲ್ಲಿ 6454 ರೈತರು ನೋಂದಣಿ ಮಾಡಿಸಿದ್ದಾರೆ. 64, 540 ಕ್ವಿಂಟಲ್‌ ಬೇಡಿಕೆಯಿದೆ. ಆದರೆ ತಾಲೂಕಿಗೆ ಇರುವ ಗುರಿ 9,700 ಕ್ವಿಂಟಲ್‌ ಮಾತ್ರ.

ಸರ್ಕಾರ ಆದೇಶಕ್ಕೆ ಕಾಯುತ್ತಿದ್ದೇವೆ
ಪ್ರತಿ ರೈತರಿಂದ ಸರ್ಕಾರ 4 ಕ್ವಿಂಟಲ್‌ ಖರೀದಿಗೆ ಆದೇಶ ನೀಡಿದೆ. ರೈತರು 10 ಕ್ವಿಂಟಲ್‌ ಬೇಡಿಕೆ ಇಟ್ಟಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಮಾಹಿತಿ ನೀಡಿದ್ದೇವೆ. ಅವರು ರಾಜ್ಯ ಸರ್ಕಾರಕ್ಕೆ ಮನವರಿಕೆ ಮಾಡಿದ್ದಾರೆ. ಸರ್ಕಾರದ ಮುಂದಿನ ಆದೇಶಕ್ಕೆ ಕಾಯುತ್ತಿದ್ದೇವೆ.
ಪ್ರಕಾಶ ಹೊಳೆಪ್ಪಗೋಳ,
ತಹಶೀಲ್ದಾರ್‌, ನರಗುಂದ 

ಸಿದ್ಧಲಿಂಗಯ್ಯ ಮಣ್ಣೂರಮಠ

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.