ಕೊಡಗು ನೆರೆ: ದಸರಾ ಕ್ರೀಡಾಕೂಟಕ್ಕೆ ಬರೆ!


Team Udayavani, Sep 24, 2018, 10:48 AM IST

dasa.jpg

ಉಡುಪಿ: ಕೊಡಗು ಜಿಲ್ಲೆಯಲ್ಲಿ ಉಂಟಾದ ನೆರೆ, ಭೂಕುಸಿತ ಹಿನ್ನೆಲೆಯಲ್ಲಿ ಈ ಬಾರಿಯ ದಸರಾವನ್ನು ಸರಳವಾಗಿ ಆಚರಿಸಲು ಸರಕಾರ ನಿರ್ಧರಿಸಿರುವುದರಿಂದ ದಸರಾ ಕ್ರೀಡಾಕೂಟವೂ ನಡೆದಿಲ್ಲ. ವಿಶೇಷವೆಂದರೆ ಕ್ರೀಡಾಕೂಟಗಳಿಗಾಗಿ ಅನುದಾನ ಸಿದ್ಧವಿದ್ದು, ಕ್ರಿಯಾ ಯೋಜನೆಗೆ ಅನುಮೋದನೆಯೂ ದೊರೆತಿದೆ. ಆದರೆ ನಡೆಸಲು ಸರಕಾರದ ಆದೇಶ ಮಾತ್ರ ಬಂದಿಲ್ಲ.

ದಸರಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಲ್ಲದೆ ಸಾರ್ವ ಜನಿಕರು ಪಾಲ್ಗೊಳ್ಳಲು ಅವಕಾಶವಿತ್ತು. ತಾಲೂಕು, ಜಿಲ್ಲೆ ಮತ್ತು ವಲಯ ಮಟ್ಟದಲ್ಲಿ ಸ್ಪರ್ಧೆಗಳು ನಡೆಯುತ್ತಿದ್ದವು. ಪಾಲ್ಗೊಳ್ಳುವವರಿಗೆ ಪ್ರಯಾಣ ಭತ್ತೆ, ಸಮವಸ್ತ್ರ ನೀಡಲಾಗುತ್ತಿತ್ತು. ಉಡುಪಿ ಜಿ.ಪಂ.ನಲ್ಲಿ ಹಲವು ತಿಂಗಳ ಹಿಂದೆಯೇ ಕ್ರಿಯಾಯೋಜನೆಗೆ ಅನುಮೋದನೆ ಪಡೆಯಲಾಗಿದೆ. ತಾಲೂಕು ಮಟ್ಟಕ್ಕೆ ಪ್ರತೀ ತಾಲೂಕಿಗೆ ತಲಾ 50,000 ರೂ. ಹಾಗೂ ಜಿಲ್ಲಾ ಮಟ್ಟಕ್ಕೆ 1.5 ಲ. ರೂ. ತೆಗೆದಿರಿಸಲಾಗಿದೆ. ಸರಕಾರದ ಆದೇಶ ಬಾರದೆ ಜಿಲ್ಲೆಯ ಆಡಳಿತ ವರ್ಗ ಮುಂದುವರೆದಿಲ್ಲ. ಹಣ ಇದೆಯಾದರೂ ಖರ್ಚು ಮಾಡಿದರೆ ವಾಪಸು ನೀಡಬೇಕು ಎಂದು ಸರಕಾರ ಆದೇಶಿಸಿದರೆ  ಎಂಬ ಆತಂಕ ಅಧಿಕಾರಿಗಳಲ್ಲಿದೆ. ಜಿ.ಪಂ. ಸಭೆಯಲ್ಲಿಯೂ ಈ ಬಗ್ಗೆ ಚರ್ಚೆ ನಡೆದಿತ್ತು. ಕ್ರೀಡಾಕೂಟ ನಡೆಸಬಹುದಿತ್ತು ಎಂಬ ಅಭಿಪ್ರಾಯವೂ ಕೇಳಿಬಂದಿದೆ. 

ದಸರಾ ಕ್ರೀಡಾಕೂಟ ಮಾತ್ರ 
ಹಿಂದೆ ಪೈಕಾ (ಪಂಚಾಯತ್‌ ಯುವ ಕ್ರೀಡಾ ಔರ್‌ ಖೇಲ್‌ ಅಭಿಯಾನ್‌) ಕ್ರೀಡಾಕೂಟವಿತ್ತು. ಅನಂತರ ರಾಜೀವ್‌ಗಾಂಧಿ ಖೇಲ್‌ ಅಭಿಯಾನವಿತ್ತು. ಬಳಿಕ ಇವೆರಡನ್ನೂ ರದ್ದು ಮಾಡಿ ಖೇಲೋ ಇಂಡಿಯಾ ಕ್ರೀಡಾಕೂಟಗಳನ್ನು ನಡೆಸಲಾಯಿತು. ಕಳೆದ ವರ್ಷದಿಂದ ಇದೂ ಸ್ಥಗಿತವಾಗಿದೆ. ಹೀಗಾಗಿ ಕ್ರೀಡಾಕೂಟಗಳೇ ಅಪರೂಪ ಎನ್ನುವಂತಾಗಿದೆ. ಸದ್ಯ ಶಾಲೆ ಕಾಲೇಜುಗಳಲ್ಲಿ ಆಯೋಜಿಸುವಂಥವು ಮಾತ್ರವೇ ಕ್ರೀಡಾ ಸಾಧನೆ ಪ್ರದರ್ಶನಕ್ಕೆ ಅವಕಾಶ. ಹೀಗಾಗಿ ವಿದ್ಯಾರ್ಥಿಗಳು ಮಾತ್ರವಲ್ಲ, ಇತರ ಕ್ರೀಡಾಳುಗಳು, ವಿಶೇಷವಾಗಿ ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಅವಕಾಶ ಕೈತಪ್ಪಿದಂತಾಗಿದೆ ಎಂಬ ಅಸಮಾಧಾನ ವ್ಯಕ್ತವಾಗಿದೆ. 

ದಸರಾ ಕ್ರೀಡಾಕೂಟಕ್ಕೆ ಜಿಲ್ಲೆಗಳಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿತ್ತು. ಉಡುಪಿ ಜಿಲ್ಲೆಯಿಂದ ವಿಭಾಗ ಮಟ್ಟಕ್ಕೆ 190 ರಷ್ಟು ಮಂದಿ ಆಯ್ಕೆಯಾಗುತ್ತಿದ್ದರು. ಆದರೆ ಈ ಬಾರಿ ಆದೇಶ ಬಾರದೆ ಕ್ರೀಡಾಳುಗಳಲ್ಲಿ ನಿರುತ್ಸಾಹ ಕಂಡುಬಂದಿದೆ. ಇಷ್ಟರಲ್ಲಿ ಕ್ರೀಡಾಕೂಟ ನಡೆಯಬೇಕಿತ್ತು. 

ಇದು ಇಡೀ ರಾಜ್ಯಕ್ಕೆ ಅನ್ವಯವಾಗುತ್ತದೆ. ನಮ್ಮ ಜಿ.ಪಂ.ನಲ್ಲಿ ಅನುದಾನ ನಿಗದಿಪಡಿಸಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಕ್ರಿಯಾ ಯೋಜನೆ  ಮಾಡಿದ್ದೇವೆ. ಆದರೆ ಸರಕಾರದ ಆದೇಶ ಬಂದಿಲ್ಲ. ಹಿಂದೆ ನಾಲ್ಕೈದು ಕ್ರೀಡಾಕೂಟಗಳಿಂದಾಗಿ ಕ್ರೀಡಾಳುಗಳಿಗೆ ಅನುಕೂಲವಾಗುತ್ತಿತ್ತು. ಈಗ ಒಂದೊಂದೇ ರದ್ದಾಗುತ್ತಿದೆ. ದಸರಾ ಕ್ರೀಡಾಕೂಟವೂ ರದ್ದಾಗುತ್ತಿರುವುದು ಬೇಸರ ಉಂಟು ಮಾಡಿದೆ. ಸರಳ ದಸರಾ ಎಂದು ಬೇರೆ ಎಲ್ಲ ಚಟುವಟಿಕೆಗಳನ್ನು ನಡೆಸಿ ಕ್ರೀಡಾಕೂಟ ಮಾತ್ರ ರದ್ದು ಮಾಡುವುದಾದರೆ ಅದು ಸರಿಯಲ್ಲ. ಅನುದಾನ ಇರುವುದರಿಂದ ಕ್ರೀಡಾಕೂಟಕ್ಕೆ ತೊಂದರೆಯಾಗುತ್ತಿರಲಿಲ್ಲ. 
ದಿನಕರ ಬಾಬು,  ಅಧ್ಯಕ್ಷರು, ಉಡುಪಿ ಜಿ.ಪಂ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.