ಹಳಕರ್ಟಿ: ವಿಶೇಷ ರೈಲಿನಲ್ಲಿ ಬಂತು ಸಂದಲ್‌


Team Udayavani, Sep 24, 2018, 10:49 AM IST

gul-4.jpg

ವಾಡಿ: ಹೈದ್ರಾಬಾದ್‌ನಿಂದ ವಿಶೇಷ ರೈಲಿನಲ್ಲಿ ರವಿವಾರ ಸಂಜೆ ಪಟ್ಟಣದ ರೈಲು ನಿಲ್ದಾಣಕ್ಕೆ ಆಗಮಿಸಿದ ಸಂದಲ್‌ ಲಕ್ಷಾಂತರ ಭಕ್ತರ ಸಂಭ್ರಮಕ್ಕೆ ಕಾರಣವಾಯಿತು. ಸಂದಲ್‌ ಸ್ವಾಗತಿಸುವ ಮೂಲಕ ಮುಸ್ಲಿಂರು ಹಳಕರ್ಟಿ ದರ್ಗಾ ಶರೀಫ್‌ ಉರೂಸ್‌ಗೆ ಅದ್ಧೂರಿ ಚಾಲನೆ ನೀಡಿದರು.

ಹಳಕರ್ಟಿಯ ಆಸ್ತಾನ್‌-ಇ-ಖ್ವಾದ್ರಿ ದರ್ಗಾ ಶರೀಫ್‌ ಉರೂಸ್‌ನಲ್ಲಿ ಪಾಲ್ಗೊಳ್ಳಲು ಹೈದ್ರಾಬಾದ್‌ ನಿಂದ 25 ಬೋಗಿಗಳ ವಿಶೇಷ ರೈಲಿನಲ್ಲಿ ಜನಸಾಗರವೇ ಹರಿದು ಬಂದಿತು.

ರೈಲು ಪಟ್ಟಣದ ನಿಲ್ದಾಣ ಪ್ರವೇಶಿಸುತ್ತಿದ್ದಂತೆ ಭಕ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತು. ರೈಲಿನ ಎಂಜಿನ್‌ಗೆ ಅಳವಡಿಸಲಾಗಿದ್ದ ಇಸ್ಲಾಂ ಧರ್ಮದ ಪವಿತ್ರ ಯಾತ್ರಾ ಸ್ಥಳಗಳ ಸ್ತಬ್ದ ಚಿತ್ರಗಳು ಗಮನ ಸೆಳೆದವು. ಬುರ್ಖಾ ಧರಿಸಿದ್ದ ಮುಸ್ಲಿಂ ಮಹಿಳೆಯರ ಸಂಖ್ಯೆಯೂ ಹೆಚ್ಚಿತ್ತು. ರೈಲು ನಿಲ್ದಾಣದ ನಾಲ್ಕೂ ಪ್ಲಾಟ್‌ಫಾರ್ಮ್ ಸೇರುತ್ತಿದ್ದಂತೆ ಅಂಬೇಡ್ಕರ್‌
ವೃತ್ತದಿಂದ ಬಸ್‌ ನಿಲ್ದಾಣದ ವರೆಗಿನ ರಸ್ತೆಗಳು ಜನರಿಂದ ಭರ್ತಿಯಾಗಿದ್ದವು.

ಹಳಕರ್ಟಿ ದರ್ಗಾದ ಗುರು ಅಬುತುರಾಬಶಹಾ ಖ್ವಾದ್ರಿ ಚಿಸ್ತಿ ಯಮುನಿ (ದರ್ಗಾ ಸಾಹೇಬ) ನೇತೃತ್ವದಲ್ಲಿ ಸಂದಲ್‌ ಸ್ವಾಗತ ಕಾರ್ಯಕ್ರಮಗಳು ನಡೆದವು. ಪಟ್ಟಣದಲ್ಲಿ ರೈಲು ನಿಲ್ದಾಣ ಆವರಣದಲ್ಲಿ ನಿರ್ಮಿಸಲಾದ ವೇದಿಕೆಯಲ್ಲಿ ಖವ್ವಾಲಿ ಗಾಯನದ ಜತೆಗೆ ಧಾರ್ಮಿಕ ಪ್ರಾರ್ಥನೆಗಳು ಜರುಗಿದವು.

ಇದೇ ವೇಳೆ ವಿಶೇಷ ಸಾಮೂಹಿಕ ನಮಾಜ್‌ ಕೈಗೊಳ್ಳುವ ಮೂಲಕ ಸಂದಲ್‌ ಮೆರವಣಿಗೆಗೆ ಚಾಲನೆ ನೀಡಲಾಯಿತು. ವಾಡಿ ರೈಲು ನಿಲ್ದಾಣದಿಂದ ಹಳಕರ್ಟಿ ದರ್ಗಾ ವರೆಗೆ 4 ಕಿ.ಮೀ. ವರೆಗೆ ಸಂದಲ್‌ ಮೆರವಣಿಗೆ ಸಂಭ್ರಮದಿಂದ
ನಡೆಯಿತು. ದರ್ಗಾ ಆವರಣದಲ್ಲಿ ಜಾತ್ರೆಯ ಸಡಗರ ಮನೆಮಾಡಿತ್ತು. ದರ್ಗಾ ಶರೀಫರ ಸಮಾಧಿಗಳಿಗೆ ಗುಲಾಬಿ ಹೂಗಳನ್ನು ಸಮರ್ಪಿಸುವ ಮೂಲಕ ಅನುಯಾಯಿಗಳು ಭಕ್ತಿ ಮೆರೆದರು.

ಸಿಪಿಐ ಶಂಕರಗೌಡ ಪಾಟೀಲ, ಪಿಎಸ್‌ಐ ವಿಜಯಕುಮಾರ ಭಾವಗಿ ಸಂದಲ್‌ ಮೆರವಣಿಗೆಗೆ ವಿಶೇಷ ಬಂದೋಬಸ್ತ್ ಒದಗಿಸಿದ್ದರು. 

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.