ವನವಾಸಿಗಳಿಗೆ ಮುಖ್ಯವಾಹಿನಿಗೆ ತರುವ ಯತ್ನ
Team Udayavani, Sep 24, 2018, 5:44 PM IST
ಕುಮಟಾ: ವನವಾಸಿಗಳು ಸಮಾಜದಲ್ಲಿ ವಿಶೇಷ ಗೌರವ ಆದರ ಉಳಿಸಿಕೊಂಡಿದ್ದಾರೆ. ಇದರೊಟ್ಟಿಗೆ ಬಿಸಿಲು-ಮಳೆಗೆ ಧೃತಿಗೆಡದೇ ತಾಲೂಕಿನ ಕ್ರೀಡಾಳುಗಳು ವರ್ಷದಿಂದ ವರ್ಷಕ್ಕೆ ಸಾಕಷ್ಟು ಉನ್ನತ ಕ್ರೀಡಾ ಸಾಧನೆಯೊಂದಿಗೆ ಕೀರ್ತಿ ತಂದಿದ್ದಾರೆ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.
ವನವಾಸಿ ಕಲ್ಯಾಣದ ಜಿಲ್ಲಾಮಟ್ಟದ ಕ್ರೀಡಾ ಸ್ಪರ್ಧೆಯನ್ನು ಕಲಭಾಗ ವಿದ್ಯಾಗಿರಿಯ ಕೊಂಕಣ ಶಿಕ್ಷಣ ಸಂಸ್ಥೆ ಮೈದಾನದಲ್ಲಿ ರವಿವಾರ ಉದ್ಘಾಟಿಸಿ ಅವರು ಮಾತನಾಡಿದರು. ವನವಾಸಿ ಸಮುದಾಯಗಳ ಬದುಕು ಪಟ್ಟಣದಿಂದ ದೂರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿ ಕಾಡುಮೇಡುಗಳ ನಡುವೆ ಇದ್ದರೂ ವನವಾಸಿ ಕಲ್ಯಾಣದಂತಹ ಸಂಸ್ಥೆಗಳು ವನವಾಸಿಗಳನ್ನು ಮುಖ್ಯವಾಹಿನಿಗೆ ತರುವಲ್ಲಿ ಸಾಕಷ್ಟು ಯಶಸ್ಸು ಸಾಧಿಸುತ್ತಿರುವುದು ಸಂತಸದ ಸಂಗತಿ. ವನವಾಸಿ ಕಲ್ಯಾಣದ ಸೇವಾಕಾರ್ಯಗಳು ಶ್ಲಾಘನೀಯ ಎಂದರು.
ವನವಾಸಿಗಳಲ್ಲಿ ಕ್ರೀಡಾ ಸಾಮರ್ಥ್ಯ ವಿಶೇಷವಾಗಿದೆ. ವನವಾಸಿಗಳಲ್ಲಿನ ಸುಪ್ತ ಪ್ರತಿಭೆಗಳನ್ನು ಬೆಳೆಸುವುದಕ್ಕಾಗಿ ಇಲ್ಲಿ ನಡೆಸುತ್ತಿರುವ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಎಲ್ಲ ಕ್ರೀಡಾಪಟುಗಳು ಕ್ರೀಡಾಮನೋಭಾವದಿಂದ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತರುವಂತಾಗಲಿ ಎಂದರು. ಉದ್ಯಮಿ ವೆಂಕಟೇಶ ನಾಯಕ ಮಾತನಾಡಿ, ದೇಶ ಕಟ್ಟುವ ಕಾರ್ಯದಲ್ಲಿ ನಿರತವಾಗಿರುವ ವನವಾಸಿ ಕಲ್ಯಾಣ ಸಂಸ್ಥೆ ವ್ಯಕ್ತಿತ್ವ ನಿರ್ಮಾಣದ ಜೊತೆಯಲ್ಲಿ ದೇಶಾಭಿಮಾನವನ್ನೂ ಬೆಳೆಸುತ್ತಿದೆ. ವನವಾಸಿಗಳು ತೀರಾ ಹಿಂದುಳಿದ ಜನಾಂಗದವರಾಗಿದ್ದು, ಅವರನ್ನು ಮುಖ್ಯವಾಹಿನಿಗೆ ತರುವ ಕಾರ್ಯವನ್ನು ವನವಾಸಿ ಕಲ್ಯಾಣವು ನಡೆಸುತ್ತಿದೆ ಎಂದರು.
ಪ್ರಮುಖರಾದ ವನವಾಸಿ ಜಿಲ್ಲಾಧ್ಯಕ್ಷ ಗಿರಿಯಾ ಗೌಡ, ಬಿ.ಎಸ್. ಗೌಡ, ಚಂದ್ರಶೇಖರ ನಾಯ್ಕ, ಜಿ.ಬಿ. ಮರಾಠಿ, ದಯಾನಂದ ಶೇಟ್, ಎಂ.ಐ. ಭಟ್ಟ, ಜಯರಾಜ ಮತ್ತಿತರರು ಇದ್ದರು. ವನವಾಸಿ ಕಲ್ಯಾಣದ ಜಿಲ್ಲಾ ಕಾರ್ಯದರ್ಶಿ ಗಣೇಶ ಶಿಂಗನಕುಳಿ ಸ್ವಾಗತಿಸಿದರು. ಜಿಲ್ಲಾ ಗ್ರಾಮವಿಕಾಸ ಪ್ರಮುಖ ಶ್ರೀಧರ ಸಾಲೆಹಕ್ಕಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಯೋಗೇಶ ಪಟಗಾರ ನಿರೂಪಿಸಿದರು. ವಿಜೇತರಾದ ಕ್ರೀಡಾಪಟುಗಳಿಗೆ ಪದಕ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ