ಡಿಇಸಿ ಮಾತ್ರೆ ಸೇವಿಸಿ ಆನೆಕಾಲು ರೋಗ ತಡೆಯಿರಿ
Team Udayavani, Sep 25, 2018, 3:01 PM IST
ರಾಯಚೂರು: ಸಾರ್ವಜನಿಕರು ವಯಸ್ಸಿಗನುಗುಣವಾಗಿ ಊಟದ ನಂತರ ಕಡ್ಡಾಯವಾಗಿ ಡಿಇಸಿ ಮತ್ತು ಅಲ್ಬೆಂಡ್
ಜೋಲ್ ಮಾತ್ರೆ ಸೇವಿಸಿ ಆನೆಕಾಲು ರೋಗದಿಂದ ತಪ್ಪಿಸಿಕೊಳ್ಳಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ವಿಜಯಾ ಕೆ. ಹೇಳಿದರು.
ನಗರದ ಸಿಯಾತಲಾಬ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆನೆಕಾಲು ರೋಗದ ಕುರಿತು ಹಮ್ಮಿಕೊಂಡ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಮನೆ ಮನೆಗೆ ಭೇಟಿ ನೀಡುತ್ತಾರೆ. ಭೇಟಿ ನೀಡಿದ ಸಮಯದಲ್ಲಿ ಸಾರ್ವಜನಿಕರು ನಮ್ಮ ಇಲಾಖೆಯೊಂದಿಗೆ ಕೈ ಜೋಡಿಸಿ ಆನೆಕಾಲು ರೋಗದಿಂದ ತುತ್ತಾಗುವುದನ್ನು ತಪ್ಪಿಸಿಕೊಳ್ಳಿ ಎಂದು ಮನವಿ ಮಾಡಿದರು.
ತಾಲೂಕು ಆರೋಗ್ಯ ಅಧಿಕಾರಿ ಡಾ| ಮಹ್ಮದ್ ಶಾಕೀರ್ ಮೊಯಿದ್ದೀನ್ ಮಾತನಾಡಿ, ಮಾತ್ರೆ ವಿತರಣೆ ಕಾರ್ಯಕ್ರಮದ
ರೂಪುರೇಷೆಗಳನ್ನು ವಿವರಿಸಿ, 2 ವರ್ಷಕ್ಕಿಂತ ಕಡಿಮೆ ಇರುವ ಮಕ್ಕಳಿಗೆ, ಗರ್ಭಿಣಿಯರಿಗೆ ಹಾಗೂ ತೀವ್ರತರವಾದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಡಿಇಸಿ ಮಾತ್ರೆಗಳನ್ನು ವಿತರಿಸಬಾರದು. ಆರೋಗ್ಯವಂತರಾಗಿರುವ 2ರಿಂದ 5 ವರ್ಷದವರಿಗೆ ಒಂದು ಮಾತ್ರೆ, 6ರಿಂದ 14 ವರ್ಷದವರಿಗೆ ಎರಡು ಮಾತ್ರೆ, ಹಾಗೂ 15 ವರ್ಷದಿಂದ ಮೇಲ್ಪಟ್ಟವರಿಗೆ ಮೂರು ಮಾತ್ರೆ ನೀಡಬೇಕು. ಇದರ ಜತೆಗೆ ಒಂದು ಅಲ್ಬೆಂಡ್ಜೋಲ್ ಮಾತ್ರೆ ಚೀಪಿಸಬೇಕೆಂದು ತಿಳಿಸಿದರು.
ಕೀಟ ಜನ್ಯ ಶಾಸ್ತ್ರಜ್ಞೆ ರೇಖಾ ಮಾತನಾಡಿ, ಕಳೆದ 14 ಸುತ್ತುಗಳು ಮುಗಿದರೂ ಆನೆಕಾಲು ರೋಗದ ಪ್ರಕರಣಗಳು ಕಂಡುಬರುತ್ತಿವೆ. ಇದನ್ನು ತಡೆಗಟ್ಟಬೇಕಾದರೆ ಈ ಅಭಿಯಾನ ಯಶಸ್ವಿಯಾಗಬೇಕು ಎಂದರು.
ತಾಲೂಕು ಹಿರಿಯ ಆರೋಗ್ಯ ಸಹಾಯಕ ರಂಗರಾವ್ ಕುಲಕರ್ಣಿ ಐಕೂರ್, ಸರೋಜಾ ಕೆ., ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಹಾಗೂ ಮಲೇರಿಯಾ ತಾಂತ್ರಿಕ ಮೇಲ್ವಿಚಾರಕಿ ಸಂಧ್ಯಾ ಸೇರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’