ಕನ್ನಡ ಸಂಘ ಪುಣೆ-ಕಾವೇರಿ ವಿದ್ಯಾ ಸಮೂಹ:ರಾಜ್ಯಮಟ್ಟದ ಭಾಷಣ ಸ್ಪರ್ಧೆ


Team Udayavani, Sep 25, 2018, 4:16 PM IST

2409mum06.jpg

ಪುಣೆ: ಕನ್ನಡ ಸಂಘ ಪುಣೆ -ಕಾವೇರಿ ವಿದ್ಯಾ ಸಮೂಹದಲ್ಲಿ ದಿ| ಡಾ ಶಾಮರಾವ್‌ ಕಲ್ಮಾಡಿ ಸ್ಮರಣಾರ್ಥವಾಗಿ ರಾಜ್ಯಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಯಿತು. ಸ್ಪರ್ಧೆಯಲ್ಲಿ ಈ ವರ್ಷ ನಲ್ವತ್ತಕ್ಕೂ ಮಿಕ್ಕಿ ಸ್ಪರ್ಧಿಗಳು ಮಹಾರಾಷ್ಟ್ರದ ವಿವಿಧ ವಿದ್ಯಾ ಸಂಸ್ಥೆಗಳಿಂದ ಆಗಮಿಸಿ  ಉತ್ಸಾಹದಿಂದ ಪಾಲ್ಗೊಂಡರು.

ದಿ| ಡಾ| ಶಾಮರಾವ್‌ ಕಲ್ಮಾಡಿಯವರ ಜನ್ಮಶತಾಬ್ದಿ ವರ್ಷದಲ್ಲಿ ನಡೆದ ಈ ಸ್ಪರ್ಧೆಯಲ್ಲಿ  ಪ್ಲಾಸ್ಟಿಕ್‌ ಮತ್ತು ಪರ್ಯಾವರಣ, ಜೆಆರ್‌ಡಿ ಟಾಟಾ, ಭಾರತದ ಔದ್ಯೋಗಿಕ ಕ್ರಾಂತಿಕಾರ, ಬದಲಾಗುತ್ತಿರುವ ಭಾರತೀಯ ವಿದ್ಯಾ ಕ್ಷೇತ್ರ ಮತ್ತು ಯುವ ಪೀಳಿಗೆ,  ಭಾರತೀಯ ಆಧ್ಯಾತ್ಮ ಹಾಗೂ  ಕ್ರೀಡೆ, ಕ್ರೀಡಾಪಟು ಮತ್ತು ಕ್ರೀಡಾ  ಮನೋಭಾವ ಮುಂತಾದ ಜ್ವಲಂತ ವಿಷಯಗಳನ್ನು ಆರಿಸಲಾಗಿತ್ತು.

ಸ್ಪರ್ಧೆಯನ್ನು ಕನ್ನಡ ಸಂಘದ ಅಧ್ಯಕ್ಷ  ಕುಶಲ್‌ ಹೆಗ್ಡೆ ಅವರು ಉದ್ಘಾಟಿಸಿ ಮಾತನಾಡಿ,  ವಿದ್ಯಾ ಕ್ಷೇತ್ರದಲ್ಲಿ ವಿದ್ಯೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ, ಭಾಷಣ, ಸಾಮಾಜಿಕ ಕಾಳಜಿ ಮತ್ತು ಆರೋಗ್ಯದ ಬಗ್ಗೆ ವಿಶೇಷ ಆಸಕ್ತಿಯ ಆವಶ್ಯಕತೆ ಮುಖ್ಯವಾಗಿದೆ. ಈ ಎÇÉಾ ವಿಷಯಗಳ ಬಗ್ಗೆ ಸಂಸ್ಥೆ ಕಾಳಜಿ ವಹಿಸುತ್ತಿದೆ. ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯವೇ ಹೊರತು ಬಹುಮಾನ ಗಳಿಸುವುದು ಮುಖ್ಯವಲ್ಲ. ಶ್ರದ್ಧೆ, ಪರಿಶ್ರಮದಿಂದ ಸ್ಪರ್ಧೆಗಳನ್ನು ಎದುರಿಸಲು ಸಾಧ್ಯವಿದೆ. ಮಕ್ಕಳು ಸ್ಪರ್ಧಾತ್ಮಕ ಗುಣಗಳನ್ನು ಎಳವೆಯಿಂದಲೇ ಬೆಳೆಸಿಕೊಂಡಾಗ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಸಾಧ್ಯವಿದೆ ಎಂದು ತಮ್ಮ ಮನೋಗತವನ್ನು ವ್ಯಕ್ತಪಡಿಸಿ ಸ್ಪರ್ಧಿಗಳಿಗೆ ಶುಭ ಹಾರೈಸಿದರು.

ಕಾವೇರಿ ಕಾಲೇಜಿನ ಪ್ರಾಧ್ಯಾಪಕ ಡಾ| ಅಶೋಕ್‌ ಅಗರವಾಲ್‌ ತಮ್ಮ  ಪ್ರಾಸ್ತಾವಿಕ ಭಾಷಣದಲ್ಲಿ  ವಿವಿಧ ವಿದ್ಯಾ ಸಂಸ್ಥೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಬರುತ್ತಿರುವ ಬೇರೆ ಬೇರೆ ವಿದ್ಯಾಲಯಗಳ ಸ್ಪರ್ಧಿಗಳಿಗೆ ಭವಿಷ್ಯದಲ್ಲಿ  ಇನ್ನಷ್ಟು ಉತ್ತಮ ವ್ಯವಸ್ಥೆಯನ್ನು ಮಾಡಲಾಗುವುದೆಂದು ತಿಳಿಸಿದರು. ಸ್ಪರ್ಧೆಯಲ್ಲಿ ಪುಣೆ ಇಂಜಿನಿಯರಿಂಗ್‌ ಕಾಲೇಜಿನ ಹೃಷಿಕೇಶ್‌  ದೇಶಪಾಂಡೆ ಅವರು ಪ್ರಥಮ ಸ್ಥಾನ ಗಳಿಸಿದರು.

ಪರ್ಗುಸನ್‌ ಕಾಲೇಜಿನ  ಕು| ಅಬೋಲಿ ಧವಡೆ ದ್ವಿತೀಯ ಸ್ಥಾನಿಯಾದರು. ಅಬಾಸಹೇಬ್‌ ಗರ್ವಾರೆ ಕಾಲೇಜಿನ ಕೃಷ್ಣ ತಾವಲೆ ತೃತೀಯ ಸ್ಥಾನ ಪಡೆದರು. ಸ್ವತಂತ್ರ ವಿಷಯಗಳ ಆಯ್ಕೆ ವಿಭಾಗದಲ್ಲಿ ಕೃಷ್ಣ ತಾವಲೆ ಪ್ರಥಮ  ಯಶವಂತ ಖಾಡೆ  ದ್ವಿತೀಯ ಹಾಗೂ  ಇಮದ್‌ ಉಲ್‌ ಹಸನ್‌ ಅವರು ತೃತೀಯ ಸ್ಥಾನ ಗಳಿಸಿದರು. ಡಾ| ಸುಪ್ರಿಯಾ ಸಹಸ್ರಬುದ್ಧೆ, ಡಾ|  ಬಾಲಚಂದ್ರ ಕಪೆìಕರ್‌, ಪ್ರೊ| ವೈಶಾಲಿ ದೇವಧರ್‌ ಪರೀಕ್ಷಕರಾಗಿ ಸಹಕರಿಸಿದರು.

ಕಾರ್ಯಕ್ರಮದಲ್ಲಿ ಪುಣೆ ಕನ್ನಡ ಸಂಘದ ಉಪಾಧ್ಯಕ್ಷೆ  ಇಂದಿರಾ ಸಾಲಿಯಾನ್‌, ಕಾರ್ಯದರ್ಶಿ ಮಾಲತಿ ಕಲ್ಮಾಡಿ, ವಿಶ್ವಸ್ಥೆ ರಾಧಿಕಾ ಶರ್ಮ, ಜನಸಂಪರ್ಕಾಧಿಕಾರಿ ರಾಮದಾಸ್‌ ಆಚಾರ್ಯ ಮತ್ತು ಕಾವೇರಿ ವಿದ್ಯಾಲಯದ ಡಾ| ಮುಕ್ತ ಕರ್ಮಾಕರ್‌, ಶ್ವೇತಾ ಬಾಪಟ…,  ಡಾ| ರಾಜೇಂದ್ರ ಕುಂಭಾರ್‌ ಉಪಸ್ಥಿತರಿದ್ದರು. ಪ್ರೊ| ಭಕ್ತಿ ದಾಂಡೇಕರ್‌  ಕಾರ್ಯ ಕ್ರಮ ನಿರೂಪಿಸಿದರು. ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉತ್ಸಾಹದಿಂದ ಭಾಗವಹಿಸಿದರು. 

ವರದಿ : ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.