ದರ್ಶನ್ಗೆ ಚಿಕಿತ್ಸೆ ಮುಂದುವರಿಕೆ
Team Udayavani, Sep 26, 2018, 6:00 AM IST
ಮೈಸೂರು: ಕಾರು ಅಪಘಾತದಲ್ಲಿ ಗಾಯಗೊಂಡಿರುವ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಎರಡನೇ ದಿನವೂ ಚಿಕಿತ್ಸೆ ಮುಂದುವರಿದಿದೆ. ಆದರೆ, ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಅವರು ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ನಗರದ ಹೆಬ್ಟಾಳು ರಿಂಗ್ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಬಲಗೈ ಮೂಳೆ ಮುರಿತಕ್ಕೆ ಒಳಗಾಗಿರುವ ದರ್ಶನ್ಗೆ ಕೊಲಂಬಿಯಾ ಏಷಿಯಾ ಆಸ್ಪತ್ರೆ ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ. ಅವರ ಆರೋಗ್ಯದಲ್ಲಿ ಹೆಚ್ಚಿನ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ಎರಡನೇ ದಿನವೂ ಚಿಕಿತ್ಸೆ ಮುಂದುವರಿದಿದೆ. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇಬ್ಬರನ್ನೂ ಸಂಜೆ ವೇಳೆಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಈ ಮಧ್ಯೆ, ಮಂಗಳವಾರ ಬೆಳಗ್ಗೆ ದರ್ಶನ್ ತಾಯಿ ಮೀನಾ ತೂಗುದೀಪ್ ಆಸ್ಪತ್ರೆಗೆ ಧಾವಿಸಿ ಮಗನ ಆರೋಗ್ಯ ವಿಚಾರಿಸಿದರು. ದರ್ಶನ್ ಪುತ್ರ ವಿನೀಶ್ ಸಹ ಅಜ್ಜಿಯೊಂದಿಗೆ ಆಸ್ಪತ್ರೆಗೆ ಆಗಮಿಸಿದ್ದರು. ಇದೇ ವೇಳೆ, ಮಾಜಿ ಸಚಿವ ಎಚ್.ಆಂಜನೇಯ, ನಟ ವಿನೋದ್ ಪ್ರಭಾಕರ್ ಸಹ ಆಸ್ಪತ್ರೆಗೆ ಆಗಮಿಸಿ, ಮೂವರು ನಟರ ಯೋಗಕ್ಷೇಮ ವಿಚಾರಿಸಿದರು. ಇದೇ ವೇಳೆ, ಆಸ್ಪತ್ರೆ ಸುತ್ತಮುತ್ತ ಪೊಲೀಸ್ ಭದ್ರತೆ ಮುಂದುವರಿದಿದ್ದು,
ಸಿಆರ್ಪಿಎಫ್ ತುಕಡಿಯನ್ನು ನಿಯೋಜಿಸಲಾಗಿದೆ. ಅಲ್ಲದೆ, ಚಿಕಿತ್ಸೆ ಪಡೆಯುತ್ತಿರುವ ದರ್ಶನ್ ಹಾಗೂ ಇನ್ನಿತರ ನಟರ ಫೋಟೋ ತೆಗೆಯದಂತೆ ಆಸ್ಪತ್ರೆ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅಪಘಾತಕ್ಕೆ ಕಾರು ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ದೂರಲಾಗಿದ್ದು, ಈ ಸಂಬಂಧ ಕಾರು ಚಾಲಕನ ವಿರುದ್ಧ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ