ಬಹೂಪಯೋಗಿ ಬೀಜ ಸಂಸ್ಕರಣ ಯಂತ್ರ ಆವಿಷ್ಕಾರ


Team Udayavani, Sep 26, 2018, 6:00 AM IST

e-11.jpg

ರಾಯಚೂರು: ಕೃಷಿ ಕ್ಷೇತ್ರದ ಪ್ರಗತಿಗೆ ವಿಜ್ಞಾನಿಗಳು ಹತ್ತು ಹಲವು ರೀತಿಯ ಯಂತ್ರಗಳನ್ನು ಆವಿಷ್ಕರಿಸುತ್ತಲೇ ಇದ್ದಾರೆ. ರೈತರ ಶ್ರಮ, ಖರ್ಚು ಹಾಗೂ ಸಮಯ ಉಳಿಸುವಲ್ಲಿ ಅವುಗಳ ಪಾತ್ರ ಗಣನೀಯ. ಅಂಥದ್ದೇ ಯಂತ್ರವೊಂದು ಇಲ್ಲಿನ ಕೃಷಿ ವಿವಿಯಲ್ಲಿ ಅಳವಡಿಕೆಯಾಗಿದ್ದು, ಗಮನ ಸೆಳೆಯುತ್ತಿದೆ. ಈ ಯಂತ್ರ ಏಕಕಾಲಕ್ಕೆ ಹಲವು ಕೆಲಸಗಳನ್ನು ಮಾಡುವುದು ವಿಶೇಷ. ಕೃಷಿ ವಿವಿಯ ಬೀಜ ಘಟಕದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ ಬೀಜ ಸಂಸ್ಕರಣೆ, ಒಣಗಿಸುವಿಕೆ ಮತ್ತು ಪ್ಯಾಕಿಂಗ್‌ ಮಾಡುವ ಯಂತ್ರವಿದೆ. ಇಡೀ ದೇಶದಲ್ಲಿ ಸಾರ್ವಜನಿಕ ವಲಯದಲ್ಲಿ ಇರುವಂಥ
ಏಕೈಕ ಘಟಕ ಇದಾಗಿದ್ದು, ರಾಜ್ಯದ ಮಟ್ಟಿಗೆ ಖಾಸಗಿ ವಲಯದಲ್ಲೂ ಇಂಥ ಯಂತ್ರ ಅಳವಡಿಕೆ ಆಗಿಲ್ಲ ಎಂಬುದು ಗಮನಾರ್ಹ.

ಏನಿದರ ವಿಶೇಷ?: ಕೇಂದ್ರ ಸರ್ಕಾರದ ಭಾರತೀಯ ಸಂಶೋಧನಾ ಮಂಡಳಿಯು (ಎಸಿಎಆರ್‌) ಬೀಜ ಕೇಂದ್ರದ ಯೋಜನೆಯಿಂದ 2017ರಲ್ಲಿ ಕೃಷಿ ವಿವಿ ಆವರಣದ ಬೀಜ ಘಟಕದಲ್ಲಿ ವಿಶೇಷ ಯಂತ್ರವನ್ನು ಅಳವಡಿಸಿದೆ. ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಈ ಘಟಕ ಸ್ಥಾಪಿಸಲಾಗಿದೆ. ಎಲ್ಲ ಬೆಳೆಯ ಬೀಜಗಳನ್ನು ಈ ಯಂತ್ರದಲ್ಲಿ ಸಂಸ್ಕರಿಸುವುದರ ಜತೆಗೆ ರಾಸಾಯನಿಕ ಮಿಶ್ರಣ ಮಾಡಿ, ಒಣಗಿಸಿ, ಅಗತ್ಯಕ್ಕೆ ಅನುಸಾರ ಪ್ಯಾಕಿಂಗ್‌ ಮಾಡಬಹುದು. ಬೀಜ ಘಟಕದಲ್ಲಿರುವ ಹಳೇ ಯಂತ್ರದಲ್ಲಿ ಬೀಜಗಳನ್ನು ಹಾಕಿ ಕಸ ಕಡ್ಡಿ ಪ್ರತ್ಯೇಕಿಸಲಾಗುವುದು. ಬಳಿಕ ಹೊಸ ಯಂತ್ರದಲ್ಲಿ ಬೀಜಗಳನ್ನು ಹಾಕಿ ಅವುಗಳಿಗೆ ಬೇಕಾದಂಥ ರಾಸಾಯನಿಕ ಪದಾರ್ಥ ಮಿಶ್ರಣ ಮಾಡಿ ಬೀಜವನ್ನು ಒಣಗಿಸಿ ಅವುಗಳನ್ನು ಅಗತ್ಯಕ್ಕೆ ಅನುಸಾರ 10 ಕೆಜಿಯಿಂದ 50 ಕೆಜಿವರೆಗೆ ಪ್ರತ್ಯೇಕ ಪ್ಯಾಕಿಂಗ್‌ ಮಾಡಬಹುದು.

ಒಂದು ಗಂಟೆಗೆ ಸುಮಾರು 30ರಿಂದ 40 ಕ್ವಿಂಟಲ್‌ ಬೀಜಗಳನ್ನು ಪ್ಯಾಕ್‌ ಮಾಡಬಹುದು. ಕಳೆದ ಒಂದು ವರ್ಷದಲ್ಲಿ 55 ಸಾವಿರ ಕ್ವಿಂಟಲ್‌ಗ‌ೂ ಅಧಿಕ
ಬೀಜೋತ್ಪಾದನೆ ಮಾಡಲಾಗಿದೆ. ಕಡಲೆ, ತೊಗರಿ, ಕುಸುಬೆ, ಹೆಸರು, ಜೋಳ, ಸೂರ್ಯ ಕಾಂತಿ ಸೇರಿ ಎಲ್ಲ ರೀತಿಯ ಬೆಳೆಗಳ ಬೀಜೋತ್ಪಾದನೆಯನ್ನು ಈ ಆಧುನಿಕ ಯಂತ್ರದಿಂದ ಮಾಡಬಹುದು. ಅಲ್ಲದೇ, ಕೈಯಿಂದ ಮಾಡುವಾಗ ರಾಸಾಯನಿಕ ಬಳಕೆಯಿಂದ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆಗಳಿದ್ದವು. ಈ ಯಂತ್ರದಿಂದ ಆ ತಾಪತ್ರಯ ಇಲ್ಲ. ಅಲ್ಲದೇ, ಸಬ್ಸಿಡಿ ದರದಲ್ಲಿ ಈ ಯಂತ್ರ
ಲಭ್ಯವಿದ್ದು, ರೈತರು ಸದ್ಬಳಕೆ ಮಾಡಿಕೊಳ್ಳಬಹುದು ಎಂಬುದು ಘಟಕದ ಅ ಧಿಕಾರಿಗಳ ವಿವರಣೆ.

ಕೇಂದ್ರ ಸರ್ಕಾರದ ಭಾರತೀಯ ಸಂಶೋಧನಾ ಮಂಡಳಿಯು (ಎಸಿ ಎಆರ್‌) ಬೀಜ ಕೇಂದ್ರದ ಯೋಜನೆಯಿಂದ ಈ ಯಂತ್ರ ಅಳವಡಿಸಲಾಗಿದೆ. ಅತ್ಯಾಧುನಿಕ ತಂತ್ರಜ್ಞಾನ ಒಳಗೊಂ ಡಿದ್ದು, ಬೀಜ ಸಂಸ್ಕರಣೆ, ಒಣಗಿಸುವಿಕೆ ಮತ್ತು ಪ್ಯಾಕಿಂಗ್‌ ಮಾಡಬಹುದು. ಇದರಿಂದ ಖರ್ಚು, ಶ್ರಮ ಕಡಿಮೆಯಾಗಲಿದೆ. ಇದು ದೇಶದ ಸಾರ್ವಜನಿಕ ವಲಯದಲ್ಲಿರುವ ಏಕೈಕ ಯಂತ್ರವಾಗಿದೆ.
● ಡಾ.ಬಸವೇಗೌಡ, ವಿಶೇಷಾಧಿಕಾರಿ, ಬೀಜ ಘಟಕ, ಕೃಷಿ ವಿವಿ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.