ಪ್ರಿಯಾ ಈಗ ರಣಚತುರೆ: ಸಿನಿಮಾ ಸೇವೆಗೆ ಡಾಕ್ಟರೇಟ್‌


Team Udayavani, Sep 26, 2018, 11:38 AM IST

priya-hasan.jpg

ಪ್ರಿಯಾ ಹಾಸನ್‌ ಮತ್ತೆ ಸುದ್ದಿಯಾಗಿದ್ದಾರೆ. ಈ ಬಾರಿ ಅವರು ಸುದ್ದಿಯಾಗಿದ್ದು ಎರಡು ವಿಷಯಕ್ಕೆ ಒಂದು ಹೊಸ ಸಿನಿಮಾ ನಿರ್ದೇಶನ, ನಟನೆ ಮತ್ತು ನಿರ್ಮಾಣ ಮಾಡುವುದು. ಇನ್ನೊಂದು ಡಾಕ್ಟರೇಟ್‌ ಪಡೆದಿರುವುದು. ಹೌದು, ಪ್ರಿಯಾಹಾಸನ್‌ ಈಗ ಹೊಸ ಚಿತ್ರಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ “ರಣ ಚತುರೆ’ ಎಂದು ನಾಮಕರಣ ಮಾಡಲಾಗಿದೆ. ಇದು ಪಕ್ಕಾ ಆ್ಯಕ್ಷನ್‌ ಸಿನಿಮಾ ಆಗಿದ್ದು, ಇದಲ್ಲೂ ಪೊಲೀಸ್‌ ಅಧಿಕಾರಿಯಾಗಿ ನಟಿಸುತ್ತಿದ್ದಾರೆ.

ಈ ಹಿಂದೆ “ಬಿಂದಾಸ್‌ ಹುಡುಗಿ’ ಚಿತ್ರದಲ್ಲೂ ಪೊಲೀಸ್‌ ಅಧಿಕಾರಿಯಾಗಿ ಮಿಂಚಿದ್ದರು. ಆದರೆ, ಅಲ್ಲಿ ಬೆರಳೆಣಿಕೆ ದೃಶ್ಯಗಳಲ್ಲಿ ಮಾತ್ರ ಕಾಣಿಸಿಕೊಂಡಿದ್ದರು. ಆದರೆ, “ರಣ ಚತುರೆ’ ಪೊಲೀಸ್‌ ಅಧಿಕಾರಿ ಸುತ್ತವೇ ಸಾಗಲಿದೆ. ಈಗಾಗಲೇ ಹಾಡುಗಳು ಪೂರ್ಣಗೊಂಡಿದ್ದು, ಸ್ಕ್ರಿಪ್ಟ್ ಕೂಡ ಅಂತಿಮಗೊಂಡಿದೆ. ಅಕ್ಟೋಬರ್‌ನಲ್ಲಿ ಚಿತ್ರೀಕರಣ ಶುರುವಾಗಲಿದೆ. “ರಣ ಚತುರೆ’ ಕೇವಲ ಆ್ಯಕ್ಷನ್‌ ಚಿತ್ರ ಮಾತ್ರವಲ್ಲ. ಇಲ್ಲಿ ಬಲವಾದ ಸಂದೇಶವೂ ಇರಲಿದೆ.

ಭ್ರಷ್ಟಾಚಾರದ ಅಂಶಗಳೂ ಇಲ್ಲಿದ್ದು, ಅದನ್ನು ತೆರೆಯ ಮೇಲೆ ಜನರಿಗೆ ಹೇಗೆಲ್ಲಾ ತಡೆಯಬಹುದು ಎಂಬುದನ್ನು ಹೇಳುವ ಮೂಲಕ ಒಂದೊಳ್ಳೆಯ ಸಾಮಾಜಿಕ ಸಂದೇಶ ಸಾರುವ ಪ್ರಯತ್ನ ಮಾಡುತ್ತಿರುವುದಾಗಿ ಹೇಳುತ್ತಾರೆ ಪ್ರಿಯಾ ಹಾಸನ್‌. ಚಿತ್ರಕ್ಕೆ ಕೌರವ ವೆಂಕಟೇಶ್‌ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಒಟ್ಟಾರೆ, ಮೂರು ಭರ್ಜರಿ ಆ್ಯಕ್ಷನ್‌ಗಳು ಚಿತ್ರದಲ್ಲಿರಲಿವೆ.

ಈಗಾಗಲೇ ಪ್ರಿಯಾ ಹಾಸನ್‌ ಅವರನ್ನು ಜನರು ಆ್ಯಕ್ಷನ್‌ ಮೂಲಕವೇ ಇಷ್ಟಪಟ್ಟಿರುವುದರಿಂದ ಇಲ್ಲೂ ಅದು ಮುಂದುವರೆಯಲಿದ್ದು, ಈ ಚಿತ್ರದ ಮೂಲಕ ನಾಲ್ವರು ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವ ಪ್ರಯತ್ನ ಮಾಡುತ್ತಿದ್ದಾರೆ ಪ್ರಿಯಾ. ವಿಜಯ್‌ ಎಂಬ ಹೊಸ ಪ್ರತಿಭೆ ಸಂಭಾಷಣೆ ಬರೆದಿದ್ದು, ಗೀತೆಗಳನ್ನೂ ರಚಿಸಿದ್ದಾರೆ. ಈ ಬಾರಿ ಹೊಸ ತಾಂತ್ರಿಕ ತಜ್ಞರು ಕೆಲಸ ಮಾಡುತ್ತಿದ್ದು, ಕನ್ನಡಕ್ಕೊಂದು ಹೊಸರೀತಿಯ ಚಿತ್ರ ಕೊಡುವ ನಿಟ್ಟಿನಲ್ಲಿ ತಯಾರಾಗಿದ್ದಾರೆ ಪ್ರಿಯಾ.

ಇನ್ನು, ಜರ್ಮನ್‌ ವಿಶ್ವವಿದ್ಯಾಲಯದಿಂದ ಪ್ರಿಯಾ ಹಾಸನ್‌ ಅವರಿಗೆ ಗೌರವ ಡಾಕ್ಟರೇಟ್‌ ಲಭಿಸಿದೆ. ಸಮಾಜ ಸೇವೆ, ಸಿನಿಮಾ ನಿರ್ದೇಶನ, ನಿರ್ಮಾಣ ಮತ್ತು ನಟನೆ ಇದರ ಸಾಧನೆ ಗಮನಿಸಿ ಮತ್ತು ಯಾವುದೇ ಗಾಡ್‌ಫಾದರ್‌ ಇಲ್ಲದೆ, ಸಿನಿಮಾ ರಂಗದಲ್ಲಿ ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ ಡಾಕ್ಟರೇಟ್‌ ನೀಡಿ ಗೌರವಿಸಲಾಗಿದೆ ಎಂಬುದು ಪ್ರಿಯಾ ಮಾತು. ಅಂದಹಾಗೆ, ಇತ್ತೀಚೆಗೆ ಅವರು ಸಿಂಗಾಪುರ್‌ನಲ್ಲಿ ಡಾಕ್ಟರೇಟ್‌ ಪಡೆದಿದ್ದಾರೆ.

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.