ರಾಜ್ಯ ಸಂಪುಟ ವಿಸ್ತರಣೆ: ಜಾತಿ ಲೆಕ್ಕದಲ್ಲಿ ಲಾಬಿ
Team Udayavani, Sep 27, 2018, 6:00 AM IST
ಬೆಂಗಳೂರು: ಆಪರೇಷನ್ ಕಮಲದ ಭೀತಿಯ ನಡುವೆಯೇ ಕಾಂಗ್ರೆಸ್ ಹೈಕಮಾಂಡ್ ಪಿತೃ ಪಕ್ಷದ ನಂತರ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿರುವುದರಿಂದ ಆಕಾಂಕ್ಷಿಗಳು ತೀವ್ರ ಲಾಬಿಯಲ್ಲಿ ತೊಡಗಿದ್ದಾರೆ.
ಕಾಂಗ್ರೆಸ್ನಲ್ಲಿ ಖಾಲಿ ಇರುವ ಆರು ಸ್ಥಾನಗಳಿಗೆ ಜಾತಿ ಹಾಗೂ ಪ್ರಾದೇಶಿಕ ಲೆಕ್ಕಾಚಾರದಲ್ಲಿ ತೀವ್ರ ಪೈಪೋಟಿ ನಡೆಯುತ್ತಿದೆ. ಲಿಂಗಾಯಿತ, ಕುರುಬ, ಮುಸ್ಲಿಂ, ಎಸ್ಟಿ ಹಾಗೂ ಎಡಗೈ ಪಂಗಡಕ್ಕೆ ಅವಕಾಶ ಕೊಡುವ ಲೆಕ್ಕಾಚಾರಗಳು ನಡೆಯುತ್ತಿವೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್, ಸಚಿವ ಡಿ.ಕೆ.ಶಿವಕುಮಾರ್ ಅವರು ತಮ್ಮ ಬೆಂಬಲಿಗರನ್ನು ಸಂಪುಟಕ್ಕೆ ಸೇರಿಸಲು ತೆರೆಮರೆಯ ಕಸರತ್ತು ನಡೆಸುತ್ತಿದ್ದಾರೆ.
ಲಿಂಗಾಯಿತ ಸಮುದಾಯದಲ್ಲಿ ಶಾಮನೂರು ಶಿವಶಂಕರಪ್ಪ, ಎಂ.ಬಿ.ಪಾಟೀಲ್, ಬಿ.ಸಿ. ಪಾಟೀಲ್ ನಡುವೆ ಪೈಪೋಟಿ ಏರ್ಪಟ್ಟಿದೆ. ಹಿರಿಯ ಶಾಸಕರಾಗಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್ ಮೊದಲ ವಿಸ್ತರಣೆಯಲ್ಲಿಯೇ ತಮ್ಮನ್ನು ಕೈ ಬಿಟ್ಟಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಬಂಡಾಯದ ಬಾವುಟ ಹಾರಿಸಿದ್ದರು. ಹೀಗಾಗಿ ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ತಮಗೆ ಅವಕಾಶ ದೊರೆಯುತ್ತದೆ ಎನ್ನುವ ವಿಶ್ವಾಸದಲ್ಲಿದ್ದಾರೆ.
ಆಪರೇಷನ್ ಕಮಲದ ಕಾರ್ಯಾಚರಣೆಯಡಿ ಬಿ.ಸಿ. ಪಾಟೀಲ್ ಹಾಗೂ ಬಿ.ಕೆ. ಸಂಗಮೇಶ್ ಪಕ್ಷ ತೊರೆಯುವ ನಿರ್ಧಾರಕ್ಕೆ ಬಂದಿದ್ದರು ಎನ್ನುವ ಕಾರಣಕ್ಕೆ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿ ಪಕ್ಷದಲ್ಲಿ ಉಳಿಸಿಕೊಳ್ಳಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕುಷ್ಠಗಿ ಶಾಸಕ ಅಮರೇಗೌಡ ಬಯ್ನಾಪುರ್ ಕೂಡ ಆಕಾಂಕ್ಷಿಯಾಗಿದ್ದಾರೆ.
ಕುರುಬ ಸಮುದಾಯದಲ್ಲಿ ಒಬ್ಬರಿಗೆ ಸಂಪುಟದಲ್ಲಿ ಅವಕಾಶ ಸಿಗಲಿದುದ ಕುಂದಗೋಳ ಶಾಸಕ ಸಿ.ಎಸ್.ಶಿವಳ್ಳಿ ಹಾಗೂ ಎಂ.ಟಿ.ಬಿ. ನಾಗರಾಜ್ ಹೆಸರುಗಳು ಮುಂಚೂಣಿಯಲ್ಲಿ ಕೇಳಿ ಬಂದಿದ್ದು, ಡಿ.ಕೆ. ಶಿವಕುಮಾರ್ ಹಾಗೂ ಪರಮೇಶ್ವರ್ ಎಂ.ಟಿ.ಬಿ. ನಾಗರಾಜ್ ಪರವಾಗಿದ್ದರೆ, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಿ.ಎಸ್.ಶಿವಳ್ಳಿ ಪರವಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಲಂಬಾಣಿ ಸಮುದಾಯಕ್ಕೆ ಯಾವುದೇ ಪ್ರಾತಿನಿಧ್ಯ ನೀಡಿಲ್ಲ ಎಂದು ಪಿ.ಟಿ. ಪರಮೇಶ್ವರ್ ನಾಯ್ಕ ಹಾಗೂ ಭೀಮಾನಾಯ್ಕ ಪೈಪೋಟಿ ನಡೆಸಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಆರು ಶಾಸಕರು ಆಯ್ಕೆಯಾಗಿದ್ದು, ನಾಯಕ ಸಮುದಾಯದಕ್ಕೆ ಸೇರಿರುವ ಬಿ. ನಾಗೇಂದ್ರಗೆ ನೀಡುವಂತೆ ಜಾರಕಿಹೊಳಿ ಸಹೋದರರು ಪಕ್ಷದ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ. ಆದರೆ, ನಾಗೇಂದ್ರಗೆ ಸಚಿವ ಸ್ಥಾನ ನೀಡಲು ತುಕಾರಾಂ ವಿರೋಧ ವ್ಯಕ್ತಪಡಿಸಿ ಮೂಲ ಕಾಂಗ್ರೆಸ್ಸಿಗರಾದ ತಮಗೇ ನೀಡಬೇಕು ಎಂದು ಒತ್ತಡ ಹೇರುತ್ತಿದ್ದಾರೆ ಎನ್ನಲಾಗುತ್ತಿದೆ.
ಮುಸ್ಲಿಂ ಸಮುದಾಯದಲ್ಲಿ ರಹೀಂ ಖಾನ್, ತನ್ವಿರ್ ಸೇs…, ರೋಷನ್ ಬೇಗ್ ಅವರು ಪ್ರಯತ್ನ ನಡೆಸಿದ್ದಾರೆ. ದಲಿತ ಸಮುದಾಯದ ಎಡಗೈ ಪಂಗಡದಲ್ಲಿ ಮಾಜಿ ಸಚಿವ ಆರ್.ಬಿ. ತಿಮ್ಮಾಪುರ, ರೂಪಾ ಶಶಿಧರ್ ಹಾಗೂ ಪರಿಷತ್ ಸದಸ್ಯ ಧರ್ಮಸೇನ್ ಅವರ ಹೆಸರುಗಳು ಕೇಳಿ ಬರುತ್ತಿವೆ.
ಬೆಂಗಳೂರಿಗೆ ಇನ್ನೊಂದು ಸಚಿವ ಸ್ಥಾನ ನೀಡಬೇಕೆಂಬ ಒತ್ತಡ ಹೆಚ್ಚಾಗಿದೆ. ಪ್ರಮುಖವಾಗಿ ಹಿರಿಯ ಶಾಸಕರಾಗಿರುವ ರಾಮಲಿಂಗಾ ರೆಡ್ಡಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬ ಒತ್ತಡ ಹೆಚ್ಚಾಗಿದ್ದು, ಈಗಾಗಲೇ ಬೆಂಗಳೂರಿನಲ್ಲಿ ಮೂವರು ಸಚಿವರಿರುವುದರಿಂದ ಇನ್ನೊಂದು ಸಚಿವ ಸಿಗುವುದು ಕಷ್ಟ ಎಂಬ ಮಾತುಗಳು ಇವೆ.
ಹೀಗಾಗಿ, ಖಾಲಿ ಇರುವ ಆರು ಸ್ಥಾನಗಳಿಗೆ ಡಜನ್ಗೂ ಹೆಚ್ಚು ಆಕಾಂಕ್ಷಿಗಳಿರುವುದರಿಂದ ಯಾರಿಗೆ ಕೊಟ್ಟರೂ ಮತ್ತೂಬ್ಬರು ಬಂಡಾಯ ಸಾರುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ, ಮತ್ತಷ್ಟು ದಿನ ಸಂಪುಟ ವಿಸ್ತರಣೆ ಮುಂದೂಡಿದರೂ ಆಶ್ಚರ್ಯವಿಲ್ಲ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್