ದುನಿಯಾ ವಿಜಯ್ಗೆ ಸಿಗಲಿಲ್ಲ ಜಾಮೀನು
Team Udayavani, Sep 27, 2018, 6:00 AM IST
ಬೆಂಗಳೂರು:ಜಿಮ್ ತರಬೇತುದಾರ ಮಾರುತಿಗೌಡ ಎಂಬಾತನನ್ನು ಅಪಹರಿಸಿ ಹಲ್ಲೆ ನಡೆಸಿದ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ನಟ ದುನಿಯಾ ವಿಜಯ್ಗೆ ಜಾಮೀನು ನೀಡಲು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನಿರಾಕರಿದೆ.
ಜಾಮೀನು ಕೋರಿ ಆರೋಪಿಗಳಾದ ವಿಜಯ್ ಸೇರಿದಂತೆ ನಾಲ್ವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ 8ನೇ ಎಸಿಎಂಎಂ ನ್ಯಾಯಾಲಯ ಬುಧವಾರ ಆದೇಶ ನೀಡಿದೆ.
ಜಾಮೀನು ಸಿಗದ ಹಿನ್ನೆಲೆಯಲ್ಲಿ ದುನಿಯಾ ವಿಜಯ್, ಪ್ರಸಾದ್, ಮಣಿ ಹಾಗೂ ಪ್ರಸಾದ್ ಅವರ ಪರ ವಕೀಲರು ಜಾಮೀನು ಕೋರಿ ಸೆಷನ್ಸ್ ನ್ಯಾಯಾಲಯದಲ್ಲಿ ಗುರುವಾರ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದಾರೆ.
ಪತ್ನಿ ನಾಗರತ್ನ ಭೇಟಿಗೆ ಸಿಗಲಿಲ್ಲ ವಿಜಯ್
14 ದಿನಗಳ ನ್ಯಾಯಾಂಗ ಬಂಧನಕ್ಕೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪತಿ ದುನಿಯಾ ವಿಜಯ್ರನ್ನು ಗುರುವಾರ ಅವರ ಮೊದಲ ಪತ್ನಿ ನಾಗರತ್ನ ಅವರು ಹೋದರು, ಭೇಟಿ ಸಾಧ್ಯವಾಗಿಲ್ಲ.ನಾಗರತ್ನ ಅವರ ಭೇಟಿಗೆ ನಿರಾಕರಿಸಿದ ವಿಜಯ್, ಪತ್ನಿ ತಂದಿದ್ದ ಊಟವನ್ನು ಸಹ ಬೇಡ ಎಂದು ಜೈಲಿನ ಸಿಬ್ಬಂದಿ ಬಳಿ ಹೇಳಿ ಕಳುಹಿಸಿದ್ದರು ಎಂದು ತಿಳಿದು ಬಂದಿದೆ.
ಪತಿ ವಿಜಯ್ ಭೇಟಿಗೆ ನಾಗರತ್ನ ಅವರು ಆಗಮಿಸಿದ್ದರು. ಆದರೆ, ಜೈಲು ನಿಯಮಾವಳಿಗಳ ಅನ್ವಯ ವಿಚಾರಣಾಧೀನ ಕೈದಿಗಳಿಗೆ ವಾರಕ್ಕೆ ಒಮ್ಮೆ ಮಾತ್ರ ಒಬ್ಬರು ಭೇಟಿ ಮಾಡಬಹುದು. ಹೀಗಾಗಿ ಅವಕಾಶ ನಿರಾಕರಿಸಲಾಯಿತು ಎಂದು ಜೈಲು ಅಧಿಕಾರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ
ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ
ಅಪಹೃತ ಮಹಿಳೆ ಸಿಆರ್ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್ಗೆ ಸಂಕಷ್ಟ
MUST WATCH
ಹೊಸ ಸೇರ್ಪಡೆ
Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್ ಅಂಡರ್ಪಾಸ್
Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ
Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?
Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ
Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!