ಬಾಂಬ್‌ ಪತ್ತೆ ನಿಸ್ಸೀಮ “ಜಾಕಿ’ ಸಾವು


Team Udayavani, Sep 27, 2018, 5:15 PM IST

ram.jpg

ಚನ್ನಪಟ್ಟಣ: ಸುಮಾರು 8 ವರ್ಷಗಳ ಕಾಲ ಪೊಲೀಸ್‌ ಇಲಾಖೆಯಲ್ಲಿ ಗುರುತರ ಸೇವೆ ಸಲ್ಲಿಸಿದ ಪೊಲೀಸ್‌ ಶ್ವಾನ “ಜಾಕಿ’ ಅನಾರೋಗ್ಯದಿಂದ ಸಾವನ್ನಪ್ಪಿದೆ. ಪಟ್ಟಣದ ಜಿಲ್ಲಾ ಶಸಸ್ತ್ರ ಮೀಸಲು ಪಡೆಯಲ್ಲಿ ನಿರಂತರವಾಗಿ ತನ್ನ ಖಡಕ್‌ ಸೇವೆಯಿಂದ ಪ್ರಸಿದ್ಧಿ ಪಡೆದಿದ್ದ ಜಾಕಿ ಕಳೆದ ಒಂದು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಾ ಸಾವು ಬದುಕಿನ ಜತೆ ಹೋರಾಟ ನಡೆಸುತಿತ್ತು. ಜಾಕಿ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿದ್ದ ವೈದ್ಯರು, ಕೆಲ ದಿನಗಳಿಂದ ಚಿಕಿತ್ಸೆ ನೀಡುತ್ತಿದ್ದರು. ಚಿಕಿತ್ಸೆಗೆ ಜಾಕಿಯ ದೇಹ ಸ್ಪಂದಿಸದೆ ದೇಹಸ್ಥಿತಿ ಗಂಭೀರತೆ ಪಡೆದುಕೊಂಡಿತ್ತು. ಪಟ್ಟಣದ ಪಶು ವೈದ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆಯಿತು.

2011ರಲ್ಲಿ ಸೇರ್ಪಡೆ: ಲ್ಯಾಬ್ರಡಾರ್‌ ತಳಿಯ 7 ತಿಂಗಳ ಮರಿಯನ್ನು ತಂದಿದ್ದ ಪೊಲೀಸ್‌ ಇಲಾಖೆ ಬೆಂಗಳೂರಿನ ಸಿಎಆರ್‌ ದಕ್ಷಿಣದಲ್ಲಿ 10 ತಿಂಗಳು ತರಬೇತಿ ಮುಗಿಸಿ, 2011ರಲ್ಲಿ ಇಲಾಖೆಗೆ ನೇಮಿಸಿಕೊಂಡಿತ್ತು. ಇಲಾಖೆಗೆ ಆಗಮಿಸುತ್ತಿದ್ದಂತೆ ತನ್ನ ಚಾಕಚಕ್ಯತೆ ಮೂಲಕ ಜಾಕಿ ಹೆಸರು ಪಡೆದುಕೊಂಡ ಶ್ವಾನ ಜಾಕಿ ಎಂದರೆ ಪೊಲೀಸ್‌ ಇಲಾಖೆಯಲ್ಲಿ ಒಂದು ಶಕ್ತಿ ಎಂಬಂತಾಗಿತ್ತು. ದೆಹಲಿ ಮಟ್ಟದಲ್ಲೂ ಹೆಸರು ಪಡೆದಿತ್ತು. 

ಬಾಂಬ್‌ ಪತ್ತೆ ಕಾರ್ಯಕ್ಕೆ ನಿಸ್ಸೀಮ: ಬಾಂಬ್‌ ಪತ್ತೆ ಮಾಡುವುದರಲ್ಲಿ ನಿಸ್ಸೀಮನಾಗಿದ್ದ ಜಾಕಿ ಮಾಜಿ ರಾಷ್ಟ್ರಪತಿ ದಿ.ಅಬ್ದುಲ್‌ ಕಲಾಂ, ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌, ಪ್ರಧಾನಿ ಮೋದಿ ಅವರು ಭಾಗವಹಿಸಿದ ಬಹಿರಂಗ ಸಭೆಗಳಲ್ಲಿ ಸಭೆ ನಡೆಯುವ ಹಿಂದಿನ ದಿನ ಬಾಂಬ್‌ ಪತ್ತೆ ಕಾರ್ಯಕ್ಕೆ ಕರೆದೊಯ್ಯಲಾಗುತ್ತಿತ್ತು.

 ವರ್ಷದ ಹಿಂದೆ ರಾಮನಗರದ ಗೌಸಿಯಾ ಕಾಲೇಜಿಲ್ಲಿ ಹುಸಿ ಬಾಂಬ್‌ ಕರೆಯೊಂದರಲ್ಲಿ ಕಾಲೇಜು ವಿದ್ಯಾರ್ಥಿಗಳಲ್ಲದೆ ಶಿಕ್ಷಕ ವರ್ಗವೇ ದಂಗಾಗಿ ಹೋದ ಸಂದರ್ಭದಲ್ಲಿ ಕಾಲೇಜಿಗೆ ಕರೆದೊಯ್ದು ಶೋಧಿಸಿತ್ತು. ಸಿಬ್ಬಂದಿಗಳಾದ ಶಿವಕುಮಾರ್‌, ರವಿ ಜಾಕಿಯ ಉಸ್ತುವಾರಿ ಹೊತ್ತಿದ್ದರು. ಸಕಲ ಗೌರವಗಳೊಂದಿಗೆ ಜಾಕಿಯ ಅಂತ್ಯಸಂಸ್ಕಾರವನ್ನು ಜಿಲ್ಲಾ ಶಸಸ್ತ್ರ ಮೀಸಲು ಪಡೆಯ ಮೈದಾನದಲ್ಲಿ ನೆರವೇರಿಸಲಾಯಿತು. ಪೊಲೀಸ್‌ ಉಪವಿಭಾಗಾಧಿಕಾರಿ ಮಲ್ಲೇಶ್‌, ಜಿಲ್ಲಾ ಶಸಸ್ತ್ರ ಮೀಸಲು ಪಡೆಯ ಡಿವೈಎಸ್‌ಪಿ ಮಹೇಶ್‌ ಹಾಗೂ ಹಲವು ಪೊಲೀಸ್‌ ಅಧಿಕಾರಿಗಳು ಹಾಜರಿದ್ದರು. 

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.