ಬಾರಕೂರು-ಕೊಕ್ಕರ್ಣೆ ರಸ್ತೆ ವಿಸ್ತರಣೆ ಎಂದು…?


Team Udayavani, Sep 28, 2018, 6:00 AM IST

2609bvre9.jpg

ಬ್ರಹ್ಮಾವರ: ಬಾರಕೂರಿನಿಂದ ಹನೆಹಳ್ಳಿ, ಕೂರಾಡಿ ಮೂಲಕ ಕೊಕ್ಕರ್ಣೆ ಸಂಪರ್ಕಿಸುವ ರಸ್ತೆ ದಶಕಗಳಿಂದ ವಿಸ್ತರಣೆ ಕಂಡಿಲ್ಲ. ಇತ್ತೀಚಿನ ದಿನಗಳಲ್ಲಿ ವಾಹನ ಸಂಚಾರ ಹೆಚ್ಚಿದ್ದು ವಿಸ್ತರಣೆ ಅನಿವಾರ್ಯವಾಗಿದೆ.

ಬಾರಕೂರು ಜೂನಿಯರ್‌ ಕಾಲೇಜಿನಿಂದ ಹನೆಹಳ್ಳಿ, ಕೂರಾಡಿ, ಕಾಡೂರು, ಮಾವಿನಕಟ್ಟೆ ಮೂಲಕ ಕೊಕ್ಕರ್ಣೆ ಸಂಪರ್ಕಿಸುವ ಮುಖ್ಯರಸ್ತೆ ಇದಾಗಿದೆ.

ಹೆಚ್ಚುತ್ತಿದೆ ವಾಹನ
ಕೂರಾಡಿ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಉದ್ಯೋಗ ನಿಮಿತ್ತ ತೆರಳುವವರು ಇದೇ ಮಾರ್ಗವನ್ನು ಅವಲಂಭಿಸಿದ್ದಾರೆ. ಖಾಸಗಿ ಬಸ್‌ಗಳು, ಹತ್ತಾರು ಶಾಲಾ ಬಸ್‌ಗಳು ತೆರಳುವ ರಸ್ತೆಯಾದರೂ ಇದುವರೆಗೆ ವಿಸ್ತರಣೆ ಆಗಿಲ್ಲ.

ಸೇತುವೆ ನಿರ್ಮಾಣ
ಪ್ರಸ್ತುತ ಕೂರಾಡಿ-ನೀಲಾವರ ಸಂಪರ್ಕ ಸೇತುವೆ ನಿರ್ಮಾಣವಾಗಿದೆ. ಇದರಿಂದ ಕೂರಾಡಿ, ಹನೆಹಳ್ಳಿ ಭಾಗದವರಿಗೆ ನೀಲಾವರ, ಕುಂಜಾಲು ಬಹಳಷ್ಟು ಹತ್ತಿರವಾಗಿದೆ. ಹಾಗೆಯೇ ನೀಲಾವರ-ಮಂದಾರ್ತಿ ಅಂತರ ಕೇವಲ 7 ಕಿ.ಮೀ.ಆಗಿದೆ. ಆದ್ದರಿಂದ ಗ್ರಾಮಾಂತರ ಭಾಗದ ರಸ್ತೆಗಳು ವಿಸ್ತರಣೆಯಾಗಬೇಕಿದೆ.

ಅಪಾಯಕಾರಿ ತಿರುವು
ಕೂರಾಡಿ ರಸ್ತೆ ಹಲವೆಡೆ ಅಪಾಯಕಾರಿ ತಿರುವುಗಳಿಂದ ಕೂಡಿದೆ. ಮಳೆಗಾಲದಲ್ಲಿ ಹುಲ್ಲು, ಗಿಡಗಳು ಬೆಳೆದು ಅಪಘಾತಕ್ಕೆ ಕಾರಣವಾಗುತ್ತಿದೆ.

ರಸ್ತೆ ದುರಸ್ತಿಯೊಂದಿಗೆ ಸಮರ್ಪಕ ಚರಂಡಿ ನಿರ್ಮಾಣ ಆವಶ್ಯಕ. ರಸ್ತೆಯ ಇಕ್ಕೆಲಗಳು ಮಳೆ ನೀರಿನಿಂದ ಕೊಚ್ಚಿ ಹೋಗಿ ಬೈಕ್‌ ಸವಾರರು ಸ್ಕಿಡ್‌ ಆಗುವ ಸಾಧ್ಯತೆ ಹೆಚ್ಚಿದೆ. ಪಾದಚಾರಿಗಳ ಪಾಡು ಹೇಳ ತೀರದು. ಶೀಘ್ರದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಪ್ರಯತ್ನದಲ್ಲಿದೆ
ಬಾರಕೂರು, ಕೂರಾಡಿ, ಕೊಕ್ಕರ್ಣೆ ರಸ್ತೆ ವಿಸ್ತರಣೆಗೆ ಅನುದಾನ ಕೇಳಿ ಈ ಹಿಂದೆಯೂ ಮನವಿ ಮಾಡಲಾಗಿತ್ತು. ಈಗ ಮತ್ತೂಮ್ಮೆ ಸಚಿವರಲ್ಲಿ ಮನವಿ ಮಾಡುತ್ತೇವೆ. ನಿರಂತರ ಪ್ರಯತ್ನದಲ್ಲಿದ್ದೇವೆ.
– ಹಾಲಾಡಿ ಶ್ರೀನಿವಾಸ ಶೆಟ್ಟಿ,ಶಾಸಕ

ಮುಕ್ತಿ ಎಂದು ?
ರಸ್ತೆ ಸಮಸ್ಯೆ ಕುರಿತು ಮನವಿ ಮಾಡಿದರೆ ಜಿ.ಪಂ.ನವರು ಪಿ.ಡಬ್ಲ್ಯೂಡಿ. ಎನ್ನುತ್ತಾರೆ. ಅವರನ್ನು ಕೇಳಿದರೆ ಜಿ.ಪಂ. ಎನ್ನುತ್ತಾರೆ. ಹಾಗಾದರೆ ಈ ಸಮಸ್ಯೆಗೆ ಮುಕ್ತಿ ಎಂದು ?
– ಕೆ.ರವೀಂದ್ರನಾಥ ಶೆಟ್ಟಿ,ಕೂರಾಡಿ

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.