ಈ-ಕ್ಷಣ ಯೋಜನೆ ನಗರ ಪ್ರದೇಶಕ್ಕೂ ವಿಸ್ತರಣೆ
Team Udayavani, Sep 28, 2018, 6:50 AM IST
ಬೆಂಗಳೂರು:ಜಾತಿ, ಆದಾಯ ಮತ್ತು ವಾಸದ ಪ್ರಮಾಣ ಪತ್ರಗಳನ್ನು ಸಾರ್ವಜನಿಕರಿಗೆ ತಕ್ಷಣವೇ ನೀಡುವ ಈ-ಕ್ಷಣ ವ್ಯವಸ್ಥೆಯನ್ನು ರಾಜ್ಯದ ನಗರ ಪ್ರದೇಶಗಳಿಗೂ ವಿಸ್ತರಿಸಲಾಗಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, 2018-19ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಸಾರ್ವಜನಿಕರಿಗೆ ಅತ್ಯಗತ್ಯವಾದ ವಿವಿಧ ಪ್ರಮಾಣ ಪತ್ರಗಳನ್ನು ಆನ್ಲೈನ್ ಮೂಲಕ ತಕ್ಷಣವೇ ನೀಡುವ ಈ ಕ್ಷಣ ವ್ಯವಸ್ಥೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸುವುದಾಗಿ ಘೋಷಿಸಲಾಗಿತ್ತು. ಅದರಂತೆ ಈ ಯೋಜನೆಯು ನಗರ ಪ್ರದೇಶದಲ್ಲಿಯೂ ಲಭ್ಯವಾಗುವಂತೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಕ್ಷಣ ಯೋಜನೆಯು ಇದುವರೆಗೂ ಗ್ರಾಮಾಂತರ ಪ್ರದೇಶಗಳಲ್ಲಿ ಮಾತ್ರ ಜಾರಿಯಲ್ಲಿತ್ತು.ಇನ್ನು ಮುಂದೆ ನಗರ ಪ್ರದೇಶಗಳ ಅಟಲ್ ಜಿ ಜನ ಸ್ನೇಹಿ ಕೇಂದ್ರಗಳಲ್ಲಿಯೂ ಸಾರ್ವಜನಿಕರಿಗೆ ಈ ಸೇವೆ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.ಸಾರ್ವಜನಿಕರಿಗೆ ಜಾತಿ, ಆದಾಯ ಮತ್ತು ವಾಸಸ್ಥಳದ ಪ್ರಮಾಣ ಪತ್ರಗಳು ಹೆಚ್ಚಿನ ಸಂದರ್ಭಗಳಲ್ಲಿ ಬೇಕಾಗುತ್ತವೆ ಎನ್ನುವುದನ್ನು ಗಮನಿಸಿ, ಸಾರ್ವಜನಿಕರಿಗೆ ತ್ವರಿತವಾಗಿ ಈ ಪ್ರಮಾಣ ಪತ್ರಗಳು ದೊರೆಯಬೇಕು ಎಂಬ ಆಶಯದಿಂದ ಈ ಕ್ಷಣ ಕಾರ್ಯಕ್ರಮ ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ