ಕಡಲ ತೀರದ ಪ್ರೇಮಕಾವ್ಯ


Team Udayavani, Sep 28, 2018, 6:00 AM IST

d-19.jpg

“ಇದೊಂದು ಮುಗ್ಧ ಮನಸುಗಳ ನಡುವಿನ ಪ್ರೀತಿಯ ಕಥೆ. ಈ ಚಿತ್ರಕ್ಕಾಗಿ ವರ್ಷಗಟ್ಟಲೆ ಕಾದು, ಅದ್ಭುತ ತಾಣಗಳಲ್ಲೇ ಚಿತ್ರೀಕರಿಸಿದ್ದೇನೆ. ನನ್ನ ಕನಸು ಇದೀಗ ಪರದೆ ಮೇಲೆ ನನಸಾಗುತ್ತಿದೆ…’

– ಹೀಗೆ ಹೇಳಿಕೊಂಡರು ನಿರ್ದೇಶಕ ಕಮ್‌ ನಿರ್ಮಾಪಕ ದೇವರಾಜ್‌ ಪೂಜಾರಿ. ಅವರು ಹೇಳಿದ್ದು, ಈ ವಾರ ತೆರೆಗೆ ಬರುತ್ತಿರುವ “ಕಿನಾರೆ’ ಚಿತ್ರ ಕುರಿತು. ವರ್ಷದ ಹಿಂದೆ ಮಾಧ್ಯಮ ಮುಂದೆ ಬಂದಿದ್ದ ದೇವರಾಜ್‌ ಪೂಜಾರಿ, ತಮ್ಮ ತಂಡದೊಂದಿಗೆ ಚಿತ್ರ ಬಿಡುಗಡೆ ಪೂರ್ವ ಪತ್ರಿಕಾಗೋಷ್ಠಿಗೆ ಆಗಮಿಸಿದ್ದರು. ಮೊದಲು ಅವರೇ ಮಾತಿಗೆ ನಿಂತರು. “ಇಲ್ಲಿ ನಿರ್ಮಾಪಕರ್ಯಾರೂ ಇಲ್ಲ. ಎಲ್ಲರೂ ಸೇರಿ ಸಿನಿಮಾ ಮಾಡಿದ್ದೇವೆ. ಸುಮ್ಮನೆ ಏನೋ ಮಾಡಬೇಕು ಅಂತ ಮಾಡಿಲ್ಲ. ಗುಣಮಟ್ಟದ ಚಿತ್ರ ಕೊಡಬೇಕು, ಕಥೆಯಲ್ಲಿ ಗಟ್ಟಿತನ ಇರಬೇಕು ಅಂದುಕೊಂಡೇ “ಕಿನಾರೆ’ ರೂಪಿಸಿದ್ದೇವೆ. ಇಲ್ಲಿ ಹೊಸಕಥೆ, ಹೊಸ ವಿಚಾರ, ಹೊಸ ಪ್ರಯೋಗ ಮೇಳೈಸಿದೆ. ಚಿತ್ರ ನೋಡಿದವರಿಗೊಂದು ಬಾಲ್ಯದ ನೆನಪು, ಪ್ರೀತಿಯ ಅನುಭವ ಕಟ್ಟಿಕೊಡುತ್ತದೆ. ಇಲ್ಲಿ ಕಥೆಯೇ ಹೀರೋ. ವಿಭಿನ್ನ ಪಾತ್ರಗಳದ್ದೇ ಕಾರು­ಬಾರು. ಕಲಾತ್ಮಕತೆಯ ಜತೆಗೆ ಮನರಂಜನೆಯನ್ನೂ ಕಟ್ಟಿಕೊಡಲಿದೆ. ಒಬ್ಬ ಮುಗ್ಧ ಹುಡುಗನ ನಡುವೆ ಪ್ರೀತಿ ಚಿಗುರಿದಾಗ, ಏನೆಲ್ಲಾ ಆಗಿಹೋಗುತ್ತವೆ ಎಂಬುದು ಕಥೆ. ಮಾತುಗಳಿಗಿಂತ ಭಾವನೆಗಳೇ ಇಲ್ಲಿ ಹೆಚ್ಚು ಮಾತಾಡುತ್ತವೆ. ಬಹುತೇಕ ಕರಾವಳಿ ಸುತ್ತ ಚಿತ್ರೀಕರಣ ನಡೆದಿದೆ. ಎಲ್ಲವೂ ಹೊಸದಾಗಿ ಕಾಣಿಸುವಷ್ಟರ ಮಟ್ಟಿಗೆ “ಕಿನಾರೆ’ ಮೂಡಿ ಬಂದಿದೆ’ ಎಂಬುದು ದೇವರಾಜ್‌ ಪೂಜಾರಿ ಮಾತು.

ಚಿತ್ರದ ನಾಯಕ ಸತೀಶ್‌ ರಾಜ್‌ಗೆ ಇದು ಮೊದಲ ಚಿತ್ರವಂತೆ. ಅವರಿಗೆ ಈ ಸಿನಿಮಾ, ಕನ್ನಡಕ್ಕೊಂದು ಹೊಸದಾಗಿ ಕಾಣಲಿದೆ ಎಂಬ ನಂಬಿಕೆಯಂತೆ. “ಇದೊಂದು ವಿಭಿನ್ನ ಕಥೆ, ಭಿನ್ನವಾಗಿರುವ ಪಾತ್ರವಿದೆ. ಸಾಕಷ್ಟು ತಯಾರಿ ಮಾಡಿಕೊಂಡೇ ಕ್ಯಾಮೆರಾ ಮುಂದೆ ನಿಂತಿದ್ದೇನೆ. ಒಳ್ಳೆಯ ತಂಡ ನನಗೆ ಸಿಕ್ಕಿದೆ. ನಿಮ್ಮೆಲ್ಲರ ಪ್ರೋತ್ಸಾಹ ಇರಲಿ’ ಎಂದರು ಸತೀಶ್‌ ರಾಜ್‌.

ನಾಯಕಿ ಗೌತಮಿಗೂ ಇದು ಮೊದಲ ಸಿನಿಮಾವಂತೆ. ಅವರಿಗಿಲ್ಲಿ ಸಾಕಷ್ಟು ಹೊಸ ಅನುಭವ ಆಗಿದೆಯಂತೆ. “ಸುಂದರ ಮನಸ್ಸುಗಳ ನಡುವೆ ಬರುವ ಪ್ರೀತಿಯ ತಿಲ್ಲಾನ ಕುರಿತು ಕಥೆ ಸಾಗಲಿದೆ. ಎಲ್ಲಾ ಚಿತ್ರಗಳಲ್ಲಿರುವಂತೆ ಇಲ್ಲಿ ಪಾತ್ರಗಳಾಗಲಿ, ಕಥೆಯಾಗಲಿ ಅಥವಾ ತಾಣಗಳಾಗಲಿ ಇಲ್ಲ. ಪ್ರತಿಯೊಂದು ಹೊಸತನ ಎನ್ನುವಂತೆ ಮೂಡಿಬಂದಿದೆ. ಅದೇ ಚಿತ್ರದ ಸ್ಪೆಷಲ್‌’ ಎಂದರು ಗೌತಮಿ.

ಅಪೇಕ್ಷಾ ಒಡೆಯರ್‌ ಇಲ್ಲಿ ಡಾಕ್ಟರ್‌ ಆಗಿ ನಟಿಸಿದ್ದಾರೆ. ಕುಂದಾಪುರ ಸುತ್ತಮುತ್ತಲ ತಾಣ­ಗಳು ಇಲ್ಲಿ ಹೈಲೆಟ್‌. ಒಂದು ಗಟ್ಟಿ ಕಥೆ ಮತ್ತು ವಿಶೇಷವಾಗಿರುವ ಚಿತ್ರದಲ್ಲಿ ನಾನಿರುವುದು ಖುಷಿ’ ಕೊಟ್ಟಿದೆ ಅಂದರು ಅಪೇಕ್ಷಾ. ಶಮಂತ್‌ ಶೆಟ್ಟಿ ಅವರಿಗೆ ಇಲ್ಲಿ ನಾಯಕ, ನಾಯಕಿಯನ್ನು ರೇಗಿಸುವ ಪಾತ್ರ ಸಿಕ್ಕಿದೆಯಂತೆ. ಸಂಗೀತ ನಿರ್ದೇಶಕ ಸುರೇಂದ್ರನಾಥ್‌ ಇಲ್ಲಿ 6 ಹಾಡುಗಳನ್ನು ಕೊಟ್ಟಿದ್ದಾರಂತೆ. ಜಯಂತ್‌ ಕಾಯ್ಕಿಣಿ, ನಾಗೇಂದ್ರಪ್ರಸಾದ್‌, ಕಲ್ಯಾಣ್‌, ಯೋಗರಾಜ್‌ಭಟ್‌ ಗೀತೆ ರಚಿಸಿ­ದ್ದಾಗಿ ಹೇಳಿಕೊಂಡರು. ಇನ್ನು, ಅಭಿಷೇಕ್‌ ಕಾಸರಗೋಡು ಚಿತ್ರಕ್ಕೆ ಕ್ಯಾಮೆರಾ ಹಿಡಿದ ಬಗೆ ವಿವರಿಸಿದರು. 

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.