ಸಂಕಷ್ಟದ ಸುಳಿಯಲ್ಲಿ ಆಹಾರೋದ್ಯಮ ಸಂಸ್ಥೆಗಳು 


Team Udayavani, Sep 28, 2018, 12:30 AM IST

d-30.jpg

ಉತ್ಪಾದನಾ ಘಟಕಗಳು ಉತ್ಪಾದನೆಯನ್ನು ಆರಂಭಿಸಿದ ನಂತರ ತೀವ್ರ ಸಂಕಷ್ಟವನ್ನು ಎದುರಿಸುವುದು ಯೋಗ್ಯ ಕಾರ್ಮಿಕರ ಅಭಾವದಿಂದ. ಸ್ಥಳೀಯವಾಗಿ ಅನುಭವಿ ಕಾರ್ಮಿಕರು ಸಿಗದಿರುವಾಗ ಹೊರರಾಜ್ಯಗಳಿಂದ ಅನುಭವವಿರದ ಕಾರ್ಮಿ ಕರನ್ನು ಕರೆಸಿ ಅವರನ್ನು ಉಪಯೋಗಿಸಿಕೊಳ್ಳುವ ಅನಿವಾರ್ಯತೆ ಇರುತ್ತದೆ. ಈ ಎಲ್ಲಾ ವ್ಯವಸ್ಥೆಗಳನ್ನು ಕ್ರಮಬದ್ಧವಾಗಿ ಅಳವಡಿಸಿ ಪಾಲಿಸಿಕೊಂಡು ಬಂದಲ್ಲಿ ಮಾತ್ರ ಆಹಾರ ಉದ್ಯಮವನ್ನು ನಡೆಸಲು ಸಾಧ್ಯವಾಗುತ್ತದೆ. 

ಆಹಾರೋದ್ಯಮದಷ್ಟು ಸೂಕ್ಷ್ಮ ಹಾಗೂ ಸನ್ನದ್ಧತೆಯ ಉದ್ಯಮ ಬೇರೊಂದಿಲ್ಲ ಎನ್ನುವುದು ವಾಡಿಕೆಯ ಅಭಿಪ್ರಾಯ. ಇದು ನೂರಕ್ಕೆ ನೂರು ಸತ್ಯ. ನೂರಾರು ಜನರು ಸೇವಿಸುವ ಆಹಾರದ ಗುಣಮಟ್ಟ , ಪ್ರಮಾಣ, ನಿಗದಿಪಡಿಸಿದ ಸಮಯದೊಳಗೆ ನಿರಂತರವಾಗಿ ಗ್ರಾಹಕರಿಗೆ ಒದಗಿಸುವ ಮಹಾನ್‌ ಜವಾಬ್ದಾರಿ ಪ್ರತಿ ಆಹಾರ ಉತ್ಪಾದನಾ ಘಟಕದ ಮಾಲಕರಿಗೆ ಇರುತ್ತದೆ. ಪುಟ್ಟ ಘಟಕಗಳನ್ನು ಹೊರತುಪಡಿಸಿ ಮಧ್ಯಮ ಗಾತ್ರದ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಉದ್ಯಮದಲ್ಲಿ ಹಲವಾರು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಆಹಾರೋದ್ಯಮಕ್ಕೆ ಸೂಕ್ತವಾದ ಸ್ಥಳ, ರಸ್ತೆ ಸಂಪರ್ಕ, ಶುದ್ಧವಾದ ನೀರು ಹಾಗೂ ನಿರಂತರ ವಿದ್ಯುತ್‌ ಪೂರೈಕೆ, ಸುಸಜ್ಜಿತ ಕಟ್ಟಡ ಇವುಗಳು ಪ್ರಾಥಮಿಕ ಅಗತ್ಯಗಳು. ಸ್ಥಳೀಯ ಪಂಚಾಯತ್‌ ಪರವಾನಿಗೆ, ಸಣ್ಣ ಕೈಗಾರಿಕಾ ಘಟಕದ ನೋಂದಾವಣಿ, ವಾಣಿಜ್ಯ ತೆರಿಗೆ (ಜಿ.ಎಸ್‌.ಟಿ.)ಯಲ್ಲಿ ನೋಂದಾವಣಿ, ಪರಿಸರ ಇಲಾಖೆಯಿಂದ ನಿರಪೇಕ್ಷಣಾ ಪತ್ರ, ಆರೋಗ್ಯ ಇಲಾಖೆಯಿಂದ ಬರುವ ನಿಯಮಗಳ ಪಾಲನೆ, ಕಾರ್ಮಿಕ ಕಾಯಿದೆಯಲ್ಲಿ ನೋಂದಾವಣಿ, ಪಿ.ಎಫ್., ಇ.ಎಸ್‌.ಐ. ಇತ್ಯಾದಿ ಇಲಾಖೆಗಳಲ್ಲಿ ನೋಂದಾವಣಿ ಹೀಗೆ ಈ ಇಲಾಖೆಗಳ ವ್ಯಾಪ್ತಿಯಲ್ಲಿ ಎಲ್ಲಾ ನಿಯಮಗಳನ್ನು ಪಾಲಿಸಿ ಆಹಾರ ಸಾಮಗ್ರಿ ಘಟಕಗಳನ್ನು ತೆರೆಯಬೇಕು. ಇವೆಲ್ಲಾ ವ್ಯವಸ್ಥೆಗಳೊಂದಿಗೆ ಹಣಕಾಸು ಸಂಸ್ಥೆಯ ನಿಯಮಗಳಿಗೆ ಬದ್ಧರಾಗಿ ಅವರ ಮಾರ್ಗದರ್ಶಿ ಹಾಗೂ ಒಡಂಬಡಿಕೆಗೆ ಒಪ್ಪಿಗೆ ನೀಡಿ ಹಣಕಾಸು ವ್ಯವಸ್ಥೆಯನ್ನು ಪಡೆಯಬೇಕು. 

ಕಷ್ಟಪಟ್ಟು ಸ್ಥಾಪಿಸಿದ ಉತ್ಪಾದನಾ ಘಟಕಗಳು ಉತ್ಪಾದನೆಯನ್ನು ಆರಂಭಿಸಿದ ನಂತರ ತೀವ್ರ ಸಂಕಷ್ಟವನ್ನು ಎದುರಿಸುವುದು ಯೋಗ್ಯ ಕಾರ್ಮಿಕರ ಅಭಾವದಿಂದ. ಸ್ಥಳೀಯವಾಗಿ ಅನುಭವಿ ಕಾರ್ಮಿಕರು ಸಿಗದಿರುವಾಗ ಹೊರರಾಜ್ಯಗಳಿಂದ ಅನುಭವವಿರದ ಕಾರ್ಮಿಕರನ್ನು ಕರೆಸಿ ತಾತ್ಕಾಲಿಕ ನೆಲೆಯಲ್ಲಿ ಅವರನ್ನು ಉಪಯೋಗಿಸಿಕೊಳ್ಳುವ ಅನಿವಾರ್ಯತೆ ಇರುತ್ತದೆ. ಈ ಎಲ್ಲಾ ವ್ಯವಸ್ಥೆಗಳನ್ನು ಕ್ರಮಬದ್ಧವಾಗಿ ಅಳವಡಿಸಿ ಪಾಲಿಸಿಕೊಂಡು ಬಂದಲ್ಲಿ ಮಾತ್ರ ಆಹಾರ ಉದ್ಯಮವನ್ನು ನಡೆಸಲು ಸಾಧ್ಯವಾಗುತ್ತದೆ. 

ಉತ್ಪಾದನಾ ವೆಚ್ಚ , ನಿರ್ವಹಣಾ ವೆಚ್ಚ , ವಿದ್ಯುತ್‌, ನೀರು ಹಾಗೂ ಕಾರ್ಮಿಕರ ಸಂಬಳ ಇತ್ಯಾದಿಗಳನ್ನು ಭರಿಸುವುದರೊಂದಿಗೆ ವಿತರಣಾ ವೆಚ್ಚ , ಮಾರಾಟ ತೆರಿಗೆ, ಕಾರ್ಮಿಕರ ಪಿ.ಎಫ್. ಸೌಲಭ್ಯ ಇತ್ಯಾದಿ ವೆಚ್ಚವನ್ನು ಭರಿಸಿ, ಸಾಲ ಪಡೆದ ಹಣಕಾಸು ಸಂಸ್ಥೆಯ ಬಡ್ಡಿ ಮತ್ತು ಅಸಲನ್ನು ಮರುಪಾವತಿಸುವುದು ಕೂಡ ಸವಾಲಾಗಿರುತ್ತದೆ. ಈ ಎಲ್ಲಾ ವಾಸ್ತವಿಕ ಹಿನ್ನೆಲೆಯಲ್ಲಿ ಇಂದು ಆಹಾರೋದ್ಯಮ ಸಂಕಷ್ಟದಲ್ಲಿ ಸಿಲುಕಿರುವುದು ಕಚ್ಚಾವಸ್ತುಗಳ ಬೆಲೆಯೇರಿಕೆಯಿಂದ. 

ಬೇಕರಿ ಉದ್ಯಮದಲ್ಲಿ ದೊಡ್ಡ ಪ್ರಮಾಣದ ಬಳಕೆಯಾಗುವ ಕಚ್ಚಾ ಸಾಮಗ್ರಿ ಮೈದಾಹಿಟ್ಟು. 1980-2000ದವರೆಗೆ ಮಧ್ಯಮ ಗುಣಮಟ್ಟದ ಮೈದಾ ಬೆಲೆ ಕೆಜಿಯೊಂದರ ರೂ. 18ರಿಂದ 20 ರೂ. ಗಡಿ ದಾಟಿರಲಿಲ್ಲ . 2000-2015ರಲ್ಲಿ 20 ರೂ.ನಿಂದ 24 ರೂ.ಗೆ ಏರಿಕೆಯಾಗಿ 15-18 ಅವಧಿಗೆ 24 ರೂ.ನಿಂದ 30 ರೂ.ಗೆ ಏರಿಕೆಯಾಗಿರುವುದು ದಾಖಲೆ ಬೆಲೆ. ಸಕ್ಕರೆ ಬೆಲೆ ರೂ.35-36ಕ್ಕೆ ನಿಂತಿರುವುದು ಮಾತ್ರ ಸಮಾಧಾನಕರ. ಇತರ ತೈಲ ತಿಂಡಿ ತಯಾರಿಕೆಯಲ್ಲಿ ಉಪಯೋಗಿಸಲ್ಪಡುವ ಬೇಸಿನ್‌ ಹಿಟ್ಟು ಹಾಗೂ ಕಡ್ಲೆ ಹಿಟ್ಟಿನ ಬೆಲೆ ಸಾಧಾರಣವಾಗಿ ಇಮ್ಮಡಿಗೊಂಡಿರುವುದು ಘಟಕದ ಮಾಲಕರಿಗೆ ಪ್ರಹಾರದಂತಾಗಿದೆ. ಅಧಿಕ ಪ್ರಮಾಣದಲ್ಲಿ ಉಪಯೋಗಿಸಲ್ಪಡುವ ಪಾಮ್‌ ಎಣ್ಣೆ ಲೀಟರ್‌ ಒಂದಕ್ಕೆ 60 ರೂ.ನಿಂದ 80 ರೂ.ಗೆ ಏರಿರುವುದು ಊಹಿಸಲು ಅಸಾಧ್ಯವಾದ ಬೆಲೆ. ಪೆಟ್ರೋಲಿಯಂ ಉತ್ಪನ್ನವಾದ ಪಿ.ಪಿ. ಸಾಮಗ್ರಿಗಳ ಬೆಲೆ ರೂ. 90ರಿಂದ 180ಕ್ಕೆ ನೆಗೆದಿರುವುದು ಸಾರ್ವಕಾಲಿಕ ದಾಖಲೆ. ಉಳಿದಂತೆ ಯಾವುದೇ ಸಾಮಗ್ರಿಗಳು 3 ತಿಂಗಳಿಗೊಮ್ಮೆ ಶೇ. 10ರ ಬೆಲೆಯೇರಿಕೆಯತ್ತ ನಿರಂತರವಾಗಿ ಸಾಗುತ್ತಿದೆ. ತೀವ್ರ ಬೆಲೆಯೇರಿಕೆ ಒಂದೆಡೆಯಾದಲ್ಲಿ ಕಾರ್ಮಿಕರ ಸಮಸ್ಯೆ, ವಿದ್ಯುತ್‌ ದರ ಹೆಚ್ಚಳ, ವಿವಿಧ ಇಲಾಖೆಗಳ ಕಠಿಣವಾದ ನೀತಿ ನಿಯಮಗಳು ಪಾಲಿಸದಿದ್ದಲ್ಲಿ ಭರಿಸಲಾಗುವ ದಂಡ ಇವುಗಳ ಹೊರೆಯನ್ನು ಊಹಿಸಿದರೂ ಲಘು ಹೃದಯವಿರುವವರಿಗೆ ಹೃದಯಸ್ತಂಭನದ ಸಾಧ್ಯತೆ ಇದೆ. ಜಿ.ಎಸ್‌.ಟಿ.ಯಲ್ಲಿ ಬಿಸ್ಕಿಟ್‌ ಹಾಗೂ ಕೇಕ್‌ಗಳಿಗೆ ಶೇ. 12ರ ತೆರಿಗೆ ದರ, ಟೋಸ್ಟ್‌ , ರಸ್ಕ್ಗಳಿಗೆ ಶೇ. 5ರ ತೆರಿಗೆ ವಿಧಿಸಲಾಗಿದೆ.ಟೋಸ್ಟ್‌, ರಸ್ಕ್ಗೆ ವ್ಯಾಟ್‌ನಲ್ಲಿ ತೆರಿಗೆಯಿರಲಿಲ್ಲ. ಬಡಜನರ ಈ ತಿಂಡಿಗೆ ತೆರಿಗೆ ಹಾಕಿದ ಲೋಪ ಜಿಎಸ್‌ಟಿಯಲ್ಲಿ ಎದ್ದುತೋರುತ್ತದೆ.

 ತೀವ್ರ ಬೆಲೆಯೇರಿಕೆಯಿಂದ ತತ್ತರಿಸಿದ ಉದ್ಯಮಿಗಳು ಉತ್ಪನ್ನಗಳಿಗೆ ಕನಿಷ್ಠ ಬೆಲೆ ಸಿಗದೆ ನಷ್ಟಕ್ಕೆ ಸಿಲುಕಿ ಲಕ್ಷಾಂತರ ರೂ. ಹೂಡಿಕೆಗೆ ಪ್ರತಿಫ‌ಲ ಸಿಗದೆ ಉದ್ಯಮವನ್ನು ಶಾಶ್ವತವಾಗಿ ಮುಚ್ಚಿ ನಂತರವೂ ಸಾಲದ ಸುಳಿಯಿಂದ ಹೊರಬರಲಾಗದೆ ಕಷ್ಟಪಡುತ್ತಿರುವ ಹಲವು ಉದಾಹರಣೆಗಳಿವೆ. 

ಬಹಳವಾಗಿ ಎದ್ದುಕಾಣುವ ಇನ್ನೊಂದು ಪ್ರಮುಖ ನ್ಯೂನತೆ ಅಲ್ಲಲ್ಲಿ ಅಣಬೆಗಳಂತೆ ಎದ್ದಿರುವ ಕಿರು ಪ್ರಮಾಣದ ಹೋಮ್‌ ಇಂಡಸ್ಟ್ರಿಗಳು. ಮನೆಗಳಲ್ಲಿ ಅನಧಿಕೃತವಾಗಿ ಆಹಾರ ಸಾಮಗ್ರಿಗಳನ್ನು ತಯಾರಿಸುವುದು, ರಸ್ತೆ ಬದಿಗಳಲ್ಲಿ ತಯಾರಿಸುವುದು, ಯಾವುದೇ ಮೂಲ ಸೌಕರ್ಯಗಳಿಲ್ಲದೆ ತಾತ್ಕಾಲಿಕ ಘಟಕಗಳನ್ನು ತೆರೆದು ಮಾರುಕಟ್ಟೆಯ ಮೌಲ್ಯಗಳನ್ನು ಹಾಳುಗೆಡವಲು ಕಾರಣರಾಗಿದ್ದಾರೆ. ಇವರ ಬಳಿ ಯಾವುದೇ ಪರವಾನಿಗೆ ಇರುವುದಿಲ್ಲ . ಮನೆಯವರು ಹಾಗೂ ಸಂಬಂಧಿಗಳೇ ಕಾರ್ಮಿಕರು. ಇವರು ಉತ್ಪನ್ನಗಳಿಗೆ ಲಂಗುಲಗಾಮಿಲ್ಲದೆ ದರಗಳನ್ನು ವಿಧಿಸಿ ಮಾರುತ್ತಿರುವುದು ಆಶ್ಚರ್ಯವನ್ನು ಉಂಟುಮಾಡುತ್ತದೆ. ಈ ಸ್ಪರ್ಧೆಯನ್ನು ಎದುರಿಸುವುದಾದರೂ ಹೇಗೆ ? ಇವರು ಮಾರುವ ಬೆಲೆಗಳನ್ನು ಪರಿಶೀಲಿಸಿದಾಗ ಇವರು ಉಪಯೋಗಿಸುವ ಕಚ್ಚಾ ಸಾಮಗ್ರಿಗಳನ್ನು ಯೋಗ್ಯ ಮಾರುಕಟ್ಟೆಯಲ್ಲಿ ಪಡೆಯುತ್ತಾರೊ ಅಥವಾ ಬೇರಾವ ಮಾರ್ಗದಿಂದ ಪಡೆಯುತ್ತಾರೊ ಎನ್ನುವ ಸಂದೇಹ ಕಾಡುತ್ತದೆ. 

ಆಗಾಗ ಯೋಗ್ಯ ಘಟಕಗಳ ಅನಗತ್ಯ ತಪಾಸಣೆ ನಡೆಸಿ ಕಿರುಕುಳ ನೀಡುವ ಇಲಾಖೆಗಳು ಇಂತಹ ಕೊಳಕು ಘಟಕಗಳತ್ತ ಕಣ್ಣೆತ್ತಿ ಕೂಡ ನೋಡದೆ ಇರುವುದು ಏಕೆ ಎನ್ನುವುದು ಯಕ್ಷಪ್ರಶ್ನೆಯಾಗಿದೆ. ಸ್ಥಳೀಯ ಪಂಚಾಯತ್‌ಗಳು, ಆರೋಗ್ಯ ಇಲಾಖೆ, ಆಹಾರ ಸುರಕ್ಷಾ ಅಧಿಕಾರಿಗಳು, ಜಿಎಸ್‌ಟಿ ಅಧಿಕಾರಿಗಳು ಈ ಕುರಿತು ತುರ್ತಾಗಿ ಕ್ರಮ ಕೈಗೊಳ್ಳದಿದ್ದಲ್ಲಿ ಯೋಗ್ಯ ಆಹಾರ ಸೇವಿಸುವ ಗ್ರಾಹಕರ ಹಕ್ಕಿಗೆ ಸುರಕ್ಷೆಯಿರುವುದಿಲ್ಲ. 

ಆಹಾರೋದ್ಯಮಿಗಳು ವ್ಯವಸ್ಥಿತವಾಗಿ ಆರೋಗ್ಯಕರವಾಗಿ, ತಮ್ಮ ಉದ್ಯಮಗಳನ್ನು ನಡೆಸಿ ಸ್ಥಳೀಯರಿಗೆ ಉದ್ಯೋಗಗಳನ್ನು ನೀಡಿ, ಆರೋಗ್ಯಕರ ದರದಲ್ಲಿ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ನೀಡ ಬೇಕಾದಲ್ಲಿ ಸರಕಾರಿ ಇಲಾಖೆಗಳು, ಕಾನೂನುಗಳು ಪೂರಕವಾಗಿರಬೇಕು. ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರಕಾರವು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಿರುವುದು ಬೆಲೆಯೇರಿಕೆಗೆ ಇನ್ನೊಂದು ಮುಖ್ಯ ಕಾರಣ. 

ಈ ಸಂದಿಗ್ಧ ಸಮಯದಲ್ಲಿ ಸರಕಾರ ಈ ಸಮಸ್ಯೆಯನ್ನು ಪರಿಹರಿಸಲು ಮುಂದಾಗದಿದ್ದಲ್ಲಿ ಮುಂದೆ ಆಹಾರೋದ್ಯಮಕ್ಕೆ ಭಾರೀ ನಷ್ಟವಾಗುವ ಸಾಧ್ಯತೆ ಇದೆ. ಮೈದಾ ಮಿಲ್ಲುಗಳಿಗೆ ಒದಗಿಸುವ ಗೋಧಿಗೆ ಸ್ವಲ್ಪವಾದರೂ ಸಬ್ಸಿಡಿಯನ್ನು ನಿಗದಿಪಡಿಸಬೇಕು ಹಾಗೂ ಸಾಕಷ್ಟು ಗೋಧಿಯನ್ನು ಸರಕಾರ ನಿರಂತರವಾಗಿ ಒದಗಿಸಬೇಕು. ಇದರಿಂದ ಮೈದಾ ಬೆಲೆ ಇಳಿಕೆಯಾಗಬಹುದು. ಇನ್ನುಳಿದಂತೆ ಕಾರ್ಮಿಕ ನೀತಿಯಲ್ಲಿ ಸಡಿಲಿಕೆ, ಆಹಾರ ಸುರಕ್ಷತಾ ಕಾಯಿದೆಗಳಲ್ಲಿ ವಿನಾಯಿತಿ, ವಿದ್ಯುತ್ಛಕ್ತಿ ದರದಲ್ಲಿ ಸಣ್ಣ ಕೈಗಾರಿಕೆಗಳಿಗೆ ರಿಯಾಯಿತಿ. ಇವುಗಳ ನಿರೀಕ್ಷೆಯಲ್ಲಿ ಆಹಾರೋದ್ಯಮಿಗಳು ಇದ್ದಾರೆ. ಈ ಕಿರು ಬೇಡಿಕೆಗಳಿಗೆ ಯಾವುದೇ ಸ್ಪಂದನೆ ದೊರಕದಿದ್ದಲ್ಲಿ ಬೇಕರಿ ಹಾಗೂ ಆಹಾರೋದ್ಯಮಿಗಳು ತಯಾರಿಸುವ ತಯಾರಿಕೆಗಳ ಬೆಲೆಗಳು ಗಗನಕ್ಕೇರಿ ಸಾಮಾನ್ಯ ವರ್ಗದ ಜನರಿಗೆ ತಮ್ಮ ಅಗತ್ಯದ ತಿಂಡಿಗಳನ್ನು ಸೇವಿಸಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಲಿದೆ. ಮುಂದೆ ಇದು ಇನ್ನೂ ವಿಷಮ ಸ್ಥಿತಿಗೆ ತಲುಪಬಹುದು. ಬೇಕರಿ ಹಾಗೂ ಆಹಾರೋದ್ಯಮವನ್ನು ಪೋಷಿಸಲು ಸರಕಾರದ ಸಹಕಾರ, ಗ್ರಾಹಕರ ಬೆಂಬಲವಿದ್ದರೆ ನಿಮ್ಮ ಸುರಕ್ಷತೆಯ ಆಹಾರದ ಅಗತ್ಯತೆಗಳಿಗೆ ನಾವು ಸ್ಪಂದಿಸಲಿದ್ದೇವೆ ಎಂದು ಎಲ್ಲಾ ಆಹಾರೋದ್ಯಮಿಗಳ ಒಡಲಾಳದ ಅನಿಸಿಕೆಗಳನ್ನು ತಮ್ಮ ಮುಂದಿಡುತ್ತಿದ್ದೇವೆ. 

ರಾಬರ್ಟ್‌ ಫ‌ುರ್ಟಾಡೊ 

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.