ಸಂವಿಧಾನ ದುರ್ಬಲಗೊಳಿಸುವ ಯತ್ನ


Team Udayavani, Sep 28, 2018, 11:15 AM IST

m4-sanvidhana.jpg

ಮೈಸೂರು: ಸಂವಿಧಾನವನ್ನು ದುರ್ಬಲಗೊಳಿಸಲು ಇಲಿಗಳು ಬಿಲ ತೋಡುತ್ತಿರುವ ಸಂದರ್ಭದಲ್ಲಿ ಸಂವಿಧಾನವನ್ನು ಪಾಲನೆ-ಪೋಷಣೆ ಮಾಡುವ ಸ್ತ್ರೀಶಕ್ತಿ ಸಂವಿಧಾನ ರಕ್ಷಿಸಲು ರಾಷ್ಟ್ರದಾದ್ಯಂತ ಅಭಿಯಾನ ಕೈಗೊಂಡಿರುವುದು ಒಳ್ಳೆಯ ಬೆಳವಣಿಗೆ ಎಂದು ಸಾಹಿತಿ ದೇವನೂರ ಮಹಾದೇವ ಹೇಳಿದರು.

ಶಾಂತಿಯೆಡೆಗೆ ನಮ್ಮ ನಡಿಗೆ ಶೀರ್ಷಿಕೆಯಡಿ ಸಂವಿಧಾನದ ಸುರಕ್ಷತೆ, ಶಾಂತಿ-ಸೌಹಾರ್ದತೆಗಾಗಿ ಭಾರತ ಯಾತ್ರೆ ಕೈಗೊಂಡಿರುವ ಐದು ಮಹಿಳಾ ತಂಡಗಳ ಪೈಕಿ ಕೇರಳದಿಂದ ಮೈಸೂರಿಗೆ ಆಗಮಿಸಿದ ತಂಡವನ್ನು ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಸ್ವಾಗತಿಸಿ ಅವರು ಮಾತನಾಡಿದರು.

ಈ ಮಹಿಳಾ ತಂಡದಲ್ಲಿ ಗುಜರಾತ್‌, ಕಾಶ್ಮೀರ, ಮಹಾರಾಷ್ಟ್ರ, ದೆಹಲಿ, ರಾಜಸ್ಥಾನ, ಛತ್ತೀಸ್‌ಗಡ ಮುಂತಾದ ರಾಜ್ಯಗಳ ಮಹಿಳಾ ಪ್ರತಿನಿಧಿಗಳಿದ್ದು, ಇವತ್ತು ಹಿಂದಿಯಲ್ಲಿ ಘೋಷಣೆ ಕೇಳಿದ್ದೇವೆ. ಅದೇ ರೀತಿ ಬೇರೆಬೇರೆ ರಾಜ್ಯಗಳಲ್ಲಿ ಅಲ್ಲಿನ ಜನಭಾಷೆಯಲ್ಲಿ ಘೋಷಣೆಗಳನ್ನು ಕೇಳುವಂತಾಗಬೇಕು. ಶಾಂತಿ ಮತ್ತು ಸಂವಿಧಾನದ ವಿಚಾರವನ್ನಿಟ್ಟುಕೊಂಡು ಮೈಸೂರಿಗೆ ಬಂದಿರುವ ಸ್ತ್ರೀಶಕ್ತಿಗೆ ಶರಣಾಗಬೇಕು. ಶರಣು ಅನ್ನಬೇಕು ಎಂದರು. 

ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಮಾನವ ಸರಪಳಿ ರಚಿಸಿದ ಮಹಿಳಾ ತಂಡದ ಸದಸ್ಯರು, ಸ್ವತಂತ್ರ ನೀಡುವಂತೆ ಮತ್ತು ಸಮಾನತೆ ನೀಡುವಂತೆ ಘೋಷಣೆಗಳನ್ನು ಕೂಗಿದರು. ಸಂವಿಧಾನ ಸುಟ್ಟ ದ್ರೋಹಿಗಳಿಗೆ ತಕ್ಕ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು. ನಂತರ ನಡಿಗೆಯ ಮೂಲಕ ಪುರಭವನ ಆವರಣಕ್ಕೆ ತೆರಳಿ ಕ್ಯಾನ್‌ವಾಸ್‌ ಮೇಲೆ ಸಹಿ ಹಾಕಿದರು.

ಮಹಿಳಾ ಕಲಾವಿದರು, ಮಹಿಳಾ ಹೋರಾಟಗಾರರು, ಮಹಿಳಾ ಪರ ಚಿಂತಕರು, ವಿದ್ಯಾರ್ಥಿಗಳು, ಅಧ್ಯಾಪಕರು ಸಹಿ ಹಾಕಿದರು. ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪೊ›.ಪ್ರೀತಿ ಶ್ರೀಮಂಧರ್‌ ಕುಮಾರ್‌, ಧ್ವನಿ ಮಹಿಳಾ ತಂಡದ ನಳಿನಿ, ಒಡನಾಡಿಯ ಕವಿತಾ, ಆರ್‌ಎಲ್‌ಎಚ್‌ಪಿಯ ಸರಸ್ವತಿ, ಶಕ್ತಿಧಾಮದ ಅನಂತು, ಹೇಮಲತಾ, ಅಭಿರುಚಿ ಗಣೇಶ್‌,ನೀಲಯ್ಯ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.