ಯೋಧರ ಹತ್ಯೆಗೆ ಪ್ರತೀಕಾರ!
Team Udayavani, Sep 30, 2018, 6:00 AM IST
ಹೊಸದಿಲ್ಲಿ: ಸರ್ಜಿಕಲ್ ದಾಳಿಯ 2 ವರ್ಷಗಳ ಸಂಭ್ರಮಾಚರಣೆ ಆರಂಭ ದಿನದಂದೇ ಗಡಿಯಲ್ಲಿ ಮತ್ತೂಂದು ಸರ್ಜಿಕಲ್ ದಾಳಿ ನಡೆಸಲಾಗಿದೆಯೇ? ಈ ಅನುಮಾನ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿಕೆಯಿಂದ ಹುಟ್ಟಿದೆ. ಕೆಲವು ದಿನಗಳ ಹಿಂದೆ ಗಡಿಯಲ್ಲಿ ನಡೆದ ಭಾರತದ ಯೋಧನ ಅಮಾನವೀಯ ಹತ್ಯೆಯನ್ನು ಭಾರತ ಗಂಭೀರವಾಗಿ ಪರಿಗಣಿಸಿತ್ತು. ಇದಕ್ಕೆ ಪ್ರತೀಕಾರವಾಗಿ ಏನೋ ಮಾಡಿದ್ದೇವೆ, ಹೇಳುವುದಿಲ್ಲ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಅಷ್ಟೇ ಅಲ್ಲ, ಬಿಎಸ್ಎಫ್ ಪ್ರಧಾನ ನಿರ್ದೇಶಕ ಕೆ.ಕೆ. ಶರ್ಮಾ ಕೂಡ, ಪ್ರತೀಕಾರವಾಗಿ ಗಡಿ ನಿಯಂತ್ರಣ ರೇಖೆಯಲ್ಲಿ ಸೂಕ್ತ ಕ್ರಮ ಕೈಗೊಂಡಿ ದ್ದೇವೆ ಎಂದಿದ್ದಾರೆ. ನಮ್ಮ ಪ್ರತಿಕ್ರಿಯೆ ಅವರಿಗೆ ಭಾರೀ ಪ್ರಮಾಣದ ಹಾನಿ ಮಾಡಿದೆ. ನಾವು ಇದನ್ನು ಮಾಡುತ್ತಲೇ ಇರುತ್ತೇವೆ ಎಂದೂ ಎಚ್ಚರಿಸಿದ್ದಾರೆ. ನರೇಂದ್ರ ಸಿಂಗ್ ಹತ್ಯೆಗೈದ ದಿನ ಗಡಿಯಲ್ಲಿ ಪಾಕ್ ಪ್ರದೇಶ ಸ್ಥಳಾಂತರ ಮಾಡಲಾಗಿತ್ತು. ನಾವು ಪ್ರತಿದಾಳಿ ನಡೆಸುತ್ತೇವೆ ಎಂಬುದೇ ಇದಕ್ಕೆ ಕಾರಣ. ನಾವು ಆಗಲೇ ಪ್ರತಿದಾಳಿ ನಡೆಸಿದ್ದರೆ ಪ್ರಯೋಜನ ಇರುತ್ತಿರಲಿಲ್ಲ ಎಂದೂ ಅವರು ಹೇಳಿದ್ದಾರೆ.
ರಾಜನಾಥ್ ಹೇಳಿದ್ದೇನು?
ಪ್ರತೀಕಾರವಾಗಿ ಏನೋ ಮಾಡಿ ದ್ದೇವೆ. ನಾನು ಹೇಳುವುದಿಲ್ಲ. ಹೇಳುವಂತೆಯೂ ಇಲ್ಲ. 2-3 ದಿನದ ಹಿಂದೆ ತಕ್ಕ ಪಾಠ ಕಲಿಸಿದ್ದೇವೆ. ಮುಂದೆಯೂ ನೋಡಿ, ಏನಾಗುತ್ತದೆ ಎಂದು…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ