ಆಸ್ಪತ್ರೆಯಿಂದ ನಟ ದರ್ಶನ್‌ ಡಿಸ್ಚಾರ್ಜ್


Team Udayavani, Sep 30, 2018, 6:25 AM IST

180929kpn71.jpg

ಮೈಸೂರು: ಕಾರು ಅಪಘಾತದಲ್ಲಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್‌, ಶನಿವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾದರು.

ನಗರದ ಹೆಬ್ಟಾಳು ರಿಂಗ್‌ ರಸ್ತೆಯಲ್ಲಿ ಸೆ.23ರಂದು ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಅವರನ್ನು ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆಯಲ್ಲಿ ಅವರ ಬಲಗೈ ಮೂಳೆ ಮುರಿದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿದ್ದ ವೈದ್ಯರು, ಕಳೆದ ನಾಲ್ಕೈದು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಿದ್ದರು. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸಾcರ್ಜ್‌ ಮಾಡಲಾಯಿತು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ದರ್ಶನ್‌, “ಅಂದು ನನ್ನ ಸ್ನೇಹಿತನ ಹುಟ್ಟುಹಬ್ಬದ ಸಮಾರಂಭದಲ್ಲಿ ಊಟ ಮಾಡಿಕೊಂಡು ತೆರಳುತ್ತಿದ್ದ ವೇಳೆ ರಿಂಗ್‌ ರಸ್ತೆಯಲ್ಲಿ ಅಪಘಾತವಾಯಿತು. ತಿರುವಿನಲ್ಲಿ ಕಾರು ನಿಯಂತ್ರಣಕ್ಕೆ ಸಿಗದೆ ಅಪಘಾತ ಸಂಭವಿಸಿತು. ಆ ಸ್ಥಳ ನೋಡಿದರೆ ನಿಮಗೇ ತಿಳಿಯಲಿದೆ. ನನ್ನ ಕಾರು ಡಿಕ್ಕಿಯಿಂದ ವಿದ್ಯುತ್‌ ಕಂಬ ಬಿದ್ದಿಲ್ಲ. ಅಪಘಾತಕ್ಕೂ ಮೊದಲೇ ಕಂಬ ಬಿದ್ದಿತ್ತು. ಸಾಮಾನ್ಯವಾಗಿ ಲಕ್ಷ್ಮಣ್‌ ಡ್ರೈವ್‌ ಮಾಡುತ್ತಿದ್ದರು. ಆದರೆ, ಅಪಘಾತ ಸಂಭವಿಸಿದ ದಿನ ರಾಯ್‌ ಕಾರು ಓಡಿಸುತ್ತಿದ್ದರು. ಇದರಲ್ಲಿ ಅವರ ತಪ್ಪೇನೂ ಇಲ್ಲ. ನನ್ನ ಕಾರಿನಲ್ಲಿ ಕೇವಲ ಐವರು ಮಾತ್ರ ಕೂರಲು ಸಾಧ್ಯ. ಹಾಗಾಗಿ, ಕಾರಿನಲ್ಲಿ ಐವರು ಮಾತ್ರ ಇದ್ದೆವು. ನಮ್ಮೊಂದಿಗೆ ಯಾವುದೇ ಮಹಿಳೆ ಇರಲಿಲ್ಲ’ ಎಂದು ಸ್ಪಷ್ಟಪಡಿಸಿದರು.

ಅಪಘಾತದ ಬಗ್ಗೆ ಸಾಕಷ್ಟು ಊಹಾಪೋಹಗಳು ಕೇಳಿ ಬಂದಿದ್ದು, ಎಲ್ಲವೂ ಶುದ್ಧ ಸುಳ್ಳು. ಮಾಧ್ಯಮಗಳು ಸ್ವಲ್ಪ ಆತುರವಾಗಿ ವರ್ತಿಸಿದವು. ಈಗ ನಾನು ಆರಾಮವಾಗಿದ್ದೇನೆ. ಸಣ್ಣ ಪುಟ್ಟ ವೈದ್ಯಕೀಯ ಪರೀಕ್ಷೆ ಇರುವ ಕಾರಣ ವೈದ್ಯರು ಮನೆಯಲ್ಲಿ ವಿಶ್ರಾಂತಿ ಪಡೆಯಲು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರು ಉತ್ತಮವಾಗಿ ಚಿಕಿತ್ಸೆ ನೀಡಿದ್ದಾರೆ. ಒಂದು ತಿಂಗಳು ವಿಶ್ರಾಂತಿ ತೆಗೆದುಕೊಂಡರೆ ಸಾಕು, ಒಂದು ವರ್ಷ ಬೇಕಿಲ್ಲ ಎಂದರು.

ತಮ್ಮ ನೆಚ್ಚಿನ ನಟ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿರುವ ವಿಷಯ ತಿಳಿದ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಆಸ್ಪತ್ರೆ ಎದುರು ಜಮಾಯಿಸಿದ್ದರು. ಅಭಿಮಾನಿಗಳತ್ತ ಕೈ ಬೀಸಿದ ದರ್ಶನ್‌, ಬಳಿಕ ಕಾರಿನಲ್ಲಿ ಮನೆಗೆ ತೆರಳಿದರು. ವಿಧಾನ ಪರಿಷತ್‌ ಸದಸ್ಯ ಸಂದೇಶ್‌ ನಾಗರಾಜ್‌, ದರ್ಶನ್‌ ಅವರ ಕುಟುಂಬಸ್ಥರು ಈ ಸಂದರ್ಭದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.