ಶಿಕ್ಷಣ ಕ್ಷೇತ್ರ ಬದಲಾವಣೆಗೆ ಆದ್ಯತೆ: ಖಾಶೆಂಪೂರ


Team Udayavani, Sep 30, 2018, 12:18 PM IST

gul-6.jpg

ಬೀದರ: ದೆಹಲಿಯಲ್ಲಿನ ಸರಕಾರಿ ಶಾಲೆಯೊಂದಕ್ಕೆ ಹೋಗಿದ್ದೆ. ಖಾಸಗಿ ಶಾಲೆಯನ್ನು ಮೀರಿಸುವ ರೀತಿಯಲ್ಲಿ ಅಲ್ಲಿ
ಚಟುವಟಿಕೆಗಳು ನಡೆಯುತ್ತಿವೆ. ಅದೇ ಮಾದರಿಯಲ್ಲಿ ಜಿಲ್ಲೆಯಲ್ಲೂ ಸರಕಾರಿ ಶಾಲೆಗಳನ್ನು ರೂಪಿಸುವ ಆಲೋಚನೆ ಇದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ ಹೇಳಿದರು.

ಬಗದಲ್‌ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ
ಚಿಗುರು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರಿ ಶಾಲೆಗಳನ್ನು ಬಲಗೊಳಿಸಲು ಸರಕಾರ ಸಂಕಲ್ಪ ತೊಟ್ಟಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಸರಕಾರಿ ಶಾಲೆಗಳ ಪ್ರಗತಿಯು ಖಾಸಗಿ ಶಾಲೆಗಳನ್ನು ಮೀರಿಸುವಂತಿರಬೇಕು. ಖಾಸಗಿ ಶಾಲೆಗಳ ಮಾದರಿಯಲ್ಲಿ ಶಾಲಾ ಚಟುವಟಿಕೆ, ವಾರ್ಷಿಕೋತ್ಸವದಂತಹ ಕಾರ್ಯಕ್ರಮಗಳಲ್ಲಿ ಪಾಲಕರ ಪಾಲ್ಗೊಳ್ಳುವಿಕೆ ಹೆಚ್ಚಬೇಕು ಎಂದು ಸಲಹೆ ನೀಡಿದರು. ದೆಹಲಿಯಲ್ಲಿನ ಸರ್ಕಾರಿ ಶಾಲೆಗಳಂತೆ ಇಲ್ಲಿನ ಶಿಕ್ಷಕರು ಕೂಡ ಪಾಠಮಾಡಿ ಮಕ್ಕಳ ಉಜ್ವಲ ಭವಿಷ್ಯ ನಿರ್ಮಿಸಬೇಕು ಎಂದರು.

ಚಿಗುರು ಕಾರ್ಯಕ್ರಮದಲ್ಲಿ ಪಾಲಕರು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳದಿರುವ ಬಗ್ಗೆ ಸಚಿವರು ಬೇಸರ ವ್ಯಕ್ತಪಡಿಸಿದರು.
ಮಕ್ಕಳಲ್ಲಿರುವ ಕಲಾ ಪ್ರತಿಭೆ ಪ್ರದರ್ಶನ ಪಾಲಕರ ಸಮ್ಮುಖದಲ್ಲಿ ನಡೆಯುವಂತೆ ನೋಡಿಕೊಳ್ಳಿ. ಅದರಿಂದ ಶಾಲೆಯ ಬಗ್ಗೆಯೂ ಪಾಲಕರಲ್ಲಿ ಸದಭಿಪ್ರಾಯ ಮೂಡುತ್ತದೆ. ಶಿಕ್ಷಕರು ಮಕ್ಕಳ ಏಳ್ಗೆಗಾಗಿ ಶ್ರಮಿಸುತ್ತಿರುವುದು ಮನವರಿಕೆಯಾಗುತ್ತದೆ ಎಂದು ಸಲಹೆ ನೀಡಿದರು.

ಶಿಕ್ಷಣದಿಂದಲೇ ಸರ್ವಾಂಗೀಣ ವಿಕಾಸ. ಈ ಹಿನ್ನೆಲೆಯಲ್ಲಿಯೇ ಶಿಕ್ಷಣಕ್ಕೆ ಪ್ರಥಮಾದ್ಯತೆ ನೀಡಲಾಗುತ್ತಿದೆ. ಸರಕಾರಿ ಶಾಲೆಗಳಲ್ಲಿನ ಕುಂದುಕೊರತೆ ನಿವಾರಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ಭರವಸೆ ನೀಡಿದರು. ನಾನು 2004ರಲ್ಲಿ ಶಾಸಕನಾಗಿ ಆಯ್ಕೆಯಾದಾಗಲೂ ಶೈಕ್ಷಣಿಕ ಬೆಳವಣಿಗೆಗೆ ಆಸಕ್ತಿ ವಹಿಸಿದ್ದೆ. 2008ರಲ್ಲಿ ಮರು ಆಯ್ಕೆಯಾದಾಗಲೂ ಶಾಲೆಗಳಿಗೆ ಭೇಟಿ ಮಾಡಿದ್ದೆ. ದೇಶದ ಭವಿಷ್ಯ ರೂಪುಗೊಳ್ಳುವುದೇ ಶಾಲಾ ತರಗತಿ ಕೋಣೆಗಳಲ್ಲಿ ಎನ್ನುವುದು ತಮ್ಮ ಖಚಿತ ಅಭಿಪ್ರಾಯವಾಗಿದೆ ಎಂದರು.
 
ನಮ್ಮ ಮಕ್ಕಳು ಜನ್ಮತಃ ಜಾಣರು. ಆದರೆ, ನಂತರದ ಅವಧಿಯಲ್ಲಿ ಸ್ವಲ್ಪ ಹಿಂದೆ ಬೀಳುತ್ತಿದ್ದಾರೆ. ಮನೆಯಲ್ಲಿನ ವಾತಾವರಣ, ಶಾಲಾ ವಾತಾವರಣ, ಶಾಲೆಯಲ್ಲಿನ ಕಲಿಕೆ ಮತ್ತಿತರ ಕಾರಣಗಳಿಂದಾಗಿ ಮಕ್ಕಳು ಹಿಂದೆ ಬೀಳುವಂತಾಗಿದೆ. ಮಕ್ಕಳಲ್ಲಿನ ಜಾಣ್ಮೆಯನ್ನು, ಪ್ರತಿಭೆಯನ್ನು ಗುರುತಿಸುವ ಕೆಲಸ ಮನೆಯಲ್ಲಿ, ಶಾಲೆಯಲ್ಲಿ ಪರಿಣಾಮಕಾರಿಯಾಗಿ ನಡೆಯಬೇಕು. ಪ್ರೋತ್ಸಾಹ ಹಾಗೂ ಮಾರ್ಗದರ್ಶನವೂ ಸಿಗಬೇಕು. ಅಂದಾಗಲೇ ಮಕ್ಕಳು ಶ್ರೇಷ್ಠ ಸಾಧಕರಾಗಿ ಹೊರಹೊಮ್ಮಬಲ್ಲರು ಎಂದು ಹೇಳಿದರು

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ಸದಸ್ಯ ಅಫೂಜಖಾನ್‌, ತಾಪಂ ಅಧ್ಯಕ್ಷ ವಿಜಯಕುಮಾರ ರಾಮುಲು, ಸದಸ್ಯೆ ಲಲಿತಾಬಾಯಿ ರಾಮಚಂದ್ರ, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಧೇನುಸಿಂಗ್‌ ಚವ್ಹಾಣ, ಜಿಲ್ಲಾ ಸಮನ್ವಯಾಧಿಕಾರಿ ಶರಣಪ್ಪ ಬಿರಾದಾರ್‌, ಮೊರಾರ್ಜಿ ಶಾಲೆಯ ಪ್ರಾಚಾರ್ಯ ಚನ್ನಬಸವ ಹೆಡೆ, ದೇವಿದಾಸ
ಜೋಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ವಟಗೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.